AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid-19 Update: ಕರ್ನಾಟಕದಲ್ಲಿ 6570 ಮಂದಿಗೆ ಕೊರೊನಾ ದೃಢ, 36 ಸಾವು

ಬೆಂಗಳೂರು ನಗರದಲ್ಲಿಯೇ 4422 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದ ವಿವಿಧೆಡೆ ಸೋಂಕಿನಿಂದ 36 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆ.

Karnataka Covid-19 Update: ಕರ್ನಾಟಕದಲ್ಲಿ 6570 ಮಂದಿಗೆ ಕೊರೊನಾ ದೃಢ, 36 ಸಾವು
ಪ್ರಾತಿನಿಧಿಕ ಚಿತ್ರ
Ghanashyam D M | ಡಿ.ಎಂ.ಘನಶ್ಯಾಮ
|

Updated on:Apr 08, 2021 | 9:40 PM

Share

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು 6000 ದಾಟಿದೆ. ಇಂದು ಒಂದೇ ದಿನ 6570 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ. ಈ ಪೈಕಿ ಬೆಂಗಳೂರು ನಗರದಲ್ಲಿಯೇ 4422 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ರಾಜ್ಯದ ವಿವಿಧೆಡೆ ಸೋಂಕಿನಿಂದ 36 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರು ನಗರದಲ್ಲಿ 22 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 10,40,130ಕ್ಕೆ (10.40 ಲಕ್ಷ) ಏರಿಕೆಯಾಗಿದೆ. ಈವರೆಗೆ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 12,767 ಮಂದಿ ಮೃತಪಟ್ಟಿದ್ದಾರೆ. ಸೋಂಕಿತರ ಪೈಕಿ 9,73,949 ಜನರು ಈವರೆಗೆ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 53,395 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಹಿತಿ ತಿಳಿಸಿದೆ.

ಕಲಬುರಗಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೂವರು, ಬೆಂಗಳೂರು ಗ್ರಾಮಾಂತರ ಮತ್ತು ಮಂಡ್ಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ. ಬೆಳಗಾವಿ, ಬೀದರ್, ಧಾರವಾಡ, ಕೋಲಾರ, ಮೈಸೂರು, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.

ಬೆಂಗಳೂರು ನಗರ ಜಿಲ್ಲೆ (4422) ಹೊರತುಪಡಿಸಿದರೆ ಕಲಬುರಗಿ 240, ತುಮಕೂರು 183, ದಕ್ಷಿಣ ಕನ್ನಡ 145, ಉತ್ತರ ಕನ್ನಡ 142, ಬೀದರ್ 129, ಬಳ್ಳಾರಿ 126, ಮೈಸೂರು 216 ಜಿಲ್ಲೆಗಳಲ್ಲಿ ಸೋಂಕು ಪ್ರಮಾಣ ಮೂರಂಕಿ ದಾಟಿದೆ. ಧಾರವಾಡ 96, ಹಾಸನ 94, ಬೆಳಗಾವಿ 92, ಶಿವಮೊಗ್ಗ 70, ಉಡುಪಿ 63, ವಿಜಯಪುರ 60, ಕೋಲಾರ 66, ಚಾಮರಾಜನಗರ ಜಿಲ್ಲೆಯಲ್ಲಿ 56, ಬೆಂಗಳೂರು ಗ್ರಾಮಾಂತರ 54, ಚಿಕ್ಕಮಗಳೂರು 40, ರಾಯಚೂರು 40, ಮಂಡ್ಯ 29, ದಾವಣಗೆರೆ 28, ಕೊಪ್ಪಳ 27, ಯಾದಗಿರಿ 26, ಚಿತ್ರದುರ್ಗ 24, ಚಿಕ್ಕಬಳ್ಳಾಪುರ 23, ಬಾಗಲಕೋಟೆ 21, ಕೊಡಗು 19, ಹಾವೇರಿ 15, ಗದಗ 14, ರಾಮನಗರ ಜಿಲ್ಲೆಯಲ್ಲಿ ಇಂದು 10 ಜನರಲ್ಲಿ ಸೋಂಕು ದೃಢಪಟ್ಟಿದೆ.

ಮುಖ್ಯಮಂತ್ರಿಗಳ ಜೊತೆಗೆ ಮೋದಿ ಸಂವಾದದ ವಿಡಿಯೊ ಇಲ್ಲಿದೆ

ಹಲವು ರಾಜ್ಯಗಳಲ್ಲಿ ನಿರ್ಬಂಧ ಜಾರಿ ಮಹಾರಾಷ್ಟ್ರ, ಒಡಿಶಾ, ಛತ್ತೀಸಗಡ, ಮಧ್ಯ ಪ್ರದೇಶ ಸೇರಿದಂತೆ ಭಾರತದ ವಿವಿಧೆಡೆ ಕೊರೊನಾ ಸೋಂಕು ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿವೆ. ಕೊರೊನಾ ಸೋಂಕು ಹರಡುವ ವೇಗಕ್ಕೆ ತಡೆಯೊಡ್ಡುವ ಉದ್ದೇಶದಿಂದ ದೇಶದ ಹಲವು ರಾಜ್ಯಗಳಲ್ಲಿ ನಿರ್ಬಂಧ ಜಾರಿಗೊಳಿಸಿ ರಾಜ್ಯ ಸರ್ಕಾರಗಳು ಆದೇಶ ಹೊರಡಿಸಿವೆ. ದೇಶದ ಕೊರೊನಾ ಹಾಟ್​ಸ್ಪಾಟ್ ಆಗಿ ಹೊರಹೊಮ್ಮಿರುವ ಛತ್ತೀಸಗಡದ ರಾಜಧಾನಿ ರಾಯಪುರದಲ್ಲಿ ಏಪ್ರಿಲ್ 9ರಿಂದ 19ರವರೆಗೆ 10 ದಿನಗಳ ಅವಧಿಗೆ ಸಂಪೂರ್ಣ ಲಾಕ್​ಡೌನ್ ಮಾಡಲು ಅಲ್ಲಿನ ರಾಜ್ಯ ಸರ್ಕಾರ ನಿರ್ಧರಿಸಿದೆ.

ಒಡಿಶಾದ ಸುಂದರಗಡ, ಬಾರಾಗಡ, ಝುರ್ಸುಗಡ, ಸಾಂಬಾಲ್​ಪುರ, ಬಾಲಂಗೀರ್, ನುಪಾದ, ಕಾಳಹಂದಿ, ಮಲ್ಕಾನ್​ಗಿರಿ, ಕೊರಾಪುಟ್ ಮತ್ತು ನಬರಂಗ್​ಪುರ ಜಿಲ್ಲೆಗಳಲ್ಲಿ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿ ಮಾಡಲಾಗಿದೆ. ಮಧ್ಯಪ್ರದೇಶದ ನಗರಗಳಲ್ಲಿ ಭಾನುವಾರ ನೈಟ್​ಕರ್ಫ್ಯೂ ಮತ್ತು ಲಾಕ್​ಡೌನ್ ಘೋಷಿಸಲಾಗಿದೆ. ಛತ್ತೀಸಗಡಕ್ಕೆ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಏಪ್ರಿಲ್ 30ರವರೆಗೆ ರಾಜ್ಯದಲ್ಲಿ ರಾಜಕೀಯ ಸಮಾವೇಶಗಳನ್ನು ನಿರ್ಬಂಧಿಸಿ ಆದೇಶ ಹೊರಡಿಸಿದ್ದಾರೆ. ಇಡೀ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಮುಂದುವರಿಸಲು ಪಂಜಾಬ್ ನಿರ್ಧರಿಸಿದೆ.

(coronavirus karnataka roundup 6570 new covid-19 infections found in state)

Published On - 8:06 pm, Thu, 8 April 21

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ