ರಾಜ್ಯದಲ್ಲಿ ಕೊರೊನಾ ಲಸಿಕೆ ಟ್ರಯಲ್​​ಗೆ​ ಸ್ವಯಂ ಸೇವಕರ ಕೊರತೆ!

ವೈದೇಹಿ ಆಸ್ಪತ್ರೆಯಲ್ಲಿ ಕೊರೊನಾ ಔಷಧ ಪರೀಕ್ಷೆ ನಡೆಯುತ್ತಿದೆ. ಆದರೆ, ಈಗ ಯಾರೊಬ್ಬರೂ ಔಷಧ ಪಡೆಯಲು ಮುಂದೆ ಬರದೆ ಇರುವುದು ವೈದ್ಯರಿಗೆ ಚಿಂತೆ ಉಂಟು ಮಾಡಿದೆ.

ರಾಜ್ಯದಲ್ಲಿ ಕೊರೊನಾ ಲಸಿಕೆ ಟ್ರಯಲ್​​ಗೆ​ ಸ್ವಯಂ ಸೇವಕರ ಕೊರತೆ!
ಸಾಂದರ್ಭಿಕ ಚಿತ್ರ
Edited By:

Updated on: Dec 28, 2020 | 5:36 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಲಸಿಕೆ 2ನೇ ಡೋಸ್​​ನ ಕ್ಲಿನಿಕಲ್ ಟ್ರಯಲ್ ನಡೆಯುತ್ತಿದೆ. ಇದಕ್ಕೆ ಸ್ವಯಂ ಸೇವಕರ ಕೊರತೆ ಎದುರಾಗಿದ್ದು, ಯಾರೊಬ್ಬರೂ ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ.

ಮೊದಲನೇ ಡೋಸ್​​ ಪಡೆದುಕೊಳ್ಳಲು ಕೂಡ ಯಾರೊಬ್ಬರೂ ಮುಂದೆ ಬಂದಿರಲಿಲ್ಲ. ಹೀಗಾಗಿ, ಮೊದಲನೇ ಡೋಸ್​ ಅನ್ನು ರಾಜಕಾರಣಿಗಳು, ಸೆಲೆಬ್ರೆಟಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿಯ ಸಂಬಂಧಿಕರಿಗೆ ನೀಡಲಾಗಿತ್ತು. ಅದೇ ರೀತಿ ಈ ವಾರ ಎರಡನೇ ಡೋಸ್ ಆರಂಭಿಸಬೇಕಿತ್ತು.

ವೈದೇಹಿ ಆಸ್ಪತ್ರೆಯಲ್ಲಿ ಕೊರೊನಾ ಔಷಧ ಪರೀಕ್ಷೆ ನಡೆಯುತ್ತಿದೆ. ಆದರೆ, ಈಗ ಯಾರೊಬ್ಬರೂ ಔಷಧ ಪಡೆಯಲು ಮುಂದೆ ಬರದೆ ಇರುವುದು ವೈದ್ಯರಿಗೆ ಚಿಂತೆ ಉಂಟು ಮಾಡಿದೆ.

ಈ ಬಗ್ಗೆ ಕ್ಲಿಂಟ್ರಾಕ್ಟ್ ನಿರ್ದೇಶಕಿ ಮನವಿ ಮಾಡಿದ್ದು, ಎರಡನೇ ಡೋಸ್ ಲಸಿಕೆ ಪಡೆಯಲು ಮುಂದೆ ಬರಬೇಕು. ಲಸಿಕೆಯಿಂದ ಯಾವುದೇ ರೀತಿಯ ಅಡ್ಡಪರಿಣಾಮ ಆಗುವುದಿಲ್ಲ. ನಾವು ಜ.18ಕ್ಕೆ ಭಾರತದ ಹೆಮ್ಮೆಯ ಕೊವ್ಯಾಕ್ಸಿನ್ ಬಿಡುಗಡೆ ಮಾಡುವ ಆಲೋಚನೆಯಲ್ಲಿದ್ದೇವೆ ಎಂದಿದ್ದಾರೆ.

ವುಹಾನ್​ನಿಂದ ಕೊರೊನಾ ಸ್ಥಿತಿಗತಿ ವರದಿ ಮಾಡಿದ್ದ ಚೀನಾ ಪತ್ರಕರ್ತೆಗೆ 4 ವರ್ಷ ಜೈಲು ಶಿಕ್ಷೆ

Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us