ಪರಾರಿಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿ ಬಸವನಗುಡಿಗೆ ಏಕೆ ಬಂದಿದ್ದ!?

ಬೆಂಗಳೂರು: ಪರಾರಿಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಕೋಲಾರದ ಗಾಂಧಿನಗರದಲ್ಲಿ ಸೋಂಕಿತ ವ್ಯಕ್ತಿ ವಾಸವಿದ್ದ. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಟೆಸ್ಟ್ ಮಾಡಿಸಲಾಗಿತ್ತು. ಆದ್ರೆ ವರದಿ ಬರುವುದಕ್ಕೂ ಮುನ್ನವೇ ಆತ ಬೆಂಗಳೂರಿಗೆ ಬಂದಿದ್ದ. ಕೊರೊನಾ ವರದಿ ಪಾಸಿಟಿವ್​ ಬಂದಾಗ ಆತ ಕೋಲಾರದಲ್ಲಿ ಇರಲಿಲ್ಲ. ಹಾಗಾಗಿ ಸೋಂಕಿತನ ಮೊಬೈಲ್​​ ನೆಟ್​ವರ್ಕ್​​ ಟ್ರೇಸ್​ ಮಾಡಿ ಸೋಂಕಿತನನ್ನು ಪತ್ತೆಹಚ್ಚಿದ್ದಾರೆ. ಬೆಂಗಳೂರಿನ ಬಸವನಗುಡಿ ಬಳಿ ಸೋಂಕಿತ […]

ಪರಾರಿಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿ ಬಸವನಗುಡಿಗೆ ಏಕೆ ಬಂದಿದ್ದ!?
ಸಾಧು ಶ್ರೀನಾಥ್​

Updated on: May 16, 2020 | 10:25 AM

ಬೆಂಗಳೂರು: ಪರಾರಿಯಾಗಿದ್ದ ಕೊರೊನಾ ಸೋಂಕಿತ ವ್ಯಕ್ತಿಯನ್ನು ಸಿನಿಮೀಯ ರೀತಿಯಲ್ಲಿ ಕಾರ್ಯಾಚರಣೆ ನಡೆಸಿ ಬೆಂಗಳೂರು ಪೊಲೀಸರು ಮತ್ತು ಆರೋಗ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಕೋಲಾರದ ಗಾಂಧಿನಗರದಲ್ಲಿ ಸೋಂಕಿತ ವ್ಯಕ್ತಿ ವಾಸವಿದ್ದ. ಕೋಲಾರದ ಖಾಸಗಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಟೆಸ್ಟ್ ಮಾಡಿಸಲಾಗಿತ್ತು. ಆದ್ರೆ ವರದಿ ಬರುವುದಕ್ಕೂ ಮುನ್ನವೇ ಆತ ಬೆಂಗಳೂರಿಗೆ ಬಂದಿದ್ದ.

ಕೊರೊನಾ ವರದಿ ಪಾಸಿಟಿವ್​ ಬಂದಾಗ ಆತ ಕೋಲಾರದಲ್ಲಿ ಇರಲಿಲ್ಲ. ಹಾಗಾಗಿ ಸೋಂಕಿತನ ಮೊಬೈಲ್​​ ನೆಟ್​ವರ್ಕ್​​ ಟ್ರೇಸ್​ ಮಾಡಿ ಸೋಂಕಿತನನ್ನು ಪತ್ತೆಹಚ್ಚಿದ್ದಾರೆ. ಬೆಂಗಳೂರಿನ ಬಸವನಗುಡಿ ಬಳಿ ಸೋಂಕಿತ ಪತ್ತೆಯಾಗಿದ್ದು, ಆತ ಪತ್ನಿಯ ಮನೆಗೆ ಬಂದು ತಲೆಮರೆಸಿಕೊಳ್ಳಲು ಮುಂದಾಗಿದ್ದ ಎನ್ನಲಾಗಿದೆ. ಕೂಡಲೇ ಆತನನ್ನು ಆ್ಯಂಬುಲೆನ್ಸ್​ನಲ್ಲಿ ಕರೆತಂದು ಆಸ್ಪತ್ರೆಗೆ ದಾಖಲಿಸಲಾಗಿದೆ.

Published On - 9:26 am, Sat, 16 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us