AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ನಿಯಮ ಉಲ್ಲಂಘಿಸಿ ಚಿಕ್ಕಮಗಳೂರು, ರಾಯಚೂರು, ಬಾದಾಮಿಯಲ್ಲಿ ಜಾತ್ರೆ: ದೇಗುಲ ಟ್ರಸ್ಟಿಗಳ ವಿರುದ್ಧ ಮೊಕದ್ದಮೆ ದಾಖಲು

ಮಾಸ್ಕ್​ ಧರಿಸದೆ, ದೈಹಿಕ ಅಂತರ ಮರೆತು ಜನರು ಜಾತ್ರೆಯಲ್ಲಿ ಭಾಗಿಯಾಗಿದ್ದರು. ನಿಷೇಧದ ನಡುವೆಯೂ ಅದ್ಧೂರಿ ರಥೋತ್ಸವ ನಡೆಯಿತು.

ಕೊರೊನಾ ನಿಯಮ ಉಲ್ಲಂಘಿಸಿ ಚಿಕ್ಕಮಗಳೂರು, ರಾಯಚೂರು, ಬಾದಾಮಿಯಲ್ಲಿ ಜಾತ್ರೆ: ದೇಗುಲ ಟ್ರಸ್ಟಿಗಳ ವಿರುದ್ಧ ಮೊಕದ್ದಮೆ ದಾಖಲು
ಸಖರಾಯಪಟ್ಟಣದಲ್ಲಿ ಶಕುಲ ರಂಗನಾಥಸ್ವಾಮಿ ರಥೋತ್ಸವ ನಡೆಯಿತು.
TV9 Web
| Edited By: |

Updated on: Jan 17, 2022 | 11:02 PM

Share

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕಿನ 3ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು ಹಲವು ನಿಯಮಗಳನ್ನು ವಿಧಿಸಿ, ಕೊರೊನಾ ಮಾರ್ಗಸೂಚಿ ಹೊರಡಿಸಿದೆ. ಕೊವಿಡ್ ಶಿಷ್ಟಾಚಾರದ ಪ್ರಕಾರ ಜಾತ್ರೆ ಮತ್ತು ಇತರ ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ. ಆದರೂ ರಾಜ್ಯದ ವಿವಿಧೆಡೆ ಜಾತ್ರೆಗಳು ನಡೆಯುತ್ತಲೇ ಇವೆ. ರಾಯಚೂರು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸೋಮವಾರ ಜಾತ್ರೆಗಳು ನಡೆದಿದ್ದು ಸಾವಿರಾಜು ಜನರು ಪಾಲ್ಗೊಂಡಿದ್ದರು.

ರಾಯಚೂರು ತಾಲ್ಲೂಕಿನ ಮಟಮಾರಿ ಗ್ರಾಮದಲ್ಲಿ ಸೋಮವಾರ ಅದ್ಧೂರಿಯಾಗಿ ವೀರಭದ್ರೇಶ್ವರ ಜಾತ್ರೆ ನಡೆಯಿತು. ಮಾಸ್ಕ್​ ಧರಿಸದೆ, ದೈಹಿಕ ಅಂತರ ಮರೆತು ಜನರು ಜಾತ್ರೆಯಲ್ಲಿ ಭಾಗಿಯಾಗಿದ್ದರು. ನಿಷೇಧದ ನಡುವೆಯೂ ಅದ್ಧೂರಿ ರಥೋತ್ಸವ ನಡೆಯಿತು.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕು ಸಖರಾಯಪಟ್ಟದ ಶಕುನ ರಂಗನಾಥಸ್ವಾಮಿ ಜಾತ್ರೆಯೂ ಸೋಮವಾರ ನಡೆಯಿತು. ರಂಗನಾಥಸ್ವಾಮಿ ರಥೋತ್ಸವದಲ್ಲಿ ಸಾವಿರಾರು ಭಕ್ತರು ಭಾಗಿಯಾಗಿದ್ದರು. ಜಾತ್ರೆ ನಡೆಸದಂತೆ ಜಿಲ್ಲಾಧಿಕಾರಿ ವಿಧಿಸಿದ್ದ ಆದೇಶವನ್ನೂ ಯಾರೂ ಲೆಕ್ಕಿಸಲಿಲ್ಲ. ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಕಾರಣ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಜಾತ್ರೆ ನಿಷೇಧಿಸಿದ್ದರು. ಡಿಸಿ ಆದೇಶ ನಿರ್ಲಕ್ಷಿಸಿಸ ಸಾವಿರಾರು ಭಕ್ತರು ರಥೋತ್ಸವ ನಡೆಸಿದರು.

ಬನಶಂಕರಿ ದೇಗುಲ ಟ್ರಸ್ಟಿಗಳು, ಗ್ರಾಮಸ್ಥರ ವಿರುದ್ಧ ಮೊಕದ್ದಮೆ ಸರ್ಕಾರದ ನಿಷೇಧಾಜ್ಞೆ ಉಲ್ಲಂಘಿಸಿ ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲ್ಲೂಕಿನ ಬನಶಂಕರಿ ದೇವಸ್ಥಾನದಲ್ಲಿ ರಥೋತ್ಸವ ನಡೆಸಿದ್ದ ಟ್ರಸ್ಟಿಗಳು, ಗ್ರಾಮಸ್ಥರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸರ್ಕಾರ, ಜಿಲ್ಲಾಡಳಿತ, ತಾಲೂಕು ಆಡಳಿತದ ಜತೆ ದೇಗುಲ ಸಮಿತಿ ಸಹಕರಿಸಲಿಲ್ಲ. ಕೊವಿಡ್​ ನಿಮಯವನ್ನೂ ಉಲ್ಲಂಘಿಸಲಾಯಿತು ಎಂದು ದೂರಪಾಗಿದೆ. ಗದಗ ಜಿಲ್ಲೆ ಮಾಡಲಗೇರಿ ಗ್ರಾಮದಿಂದ ಭಕ್ತರು ರಥ ಎಳೆಯುವ ಹಗ್ಗ ತಂದಿದ್ದರು. ಮಾಡಲಗೇರಿ ಗ್ರಾಮದ ಹಿರಿಯರ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ದೇಗುಲ ಪ್ರವೇಶಿಸದಂತೆ ನಾಕಾಬಂದಿ ಹಾಕಿದ್ದರೂ ಭಕ್ತರು ಬ್ಯಾರಿಕೇಡ್​ ತೆಗೆದು ಒಳನುಗ್ಗಿ ರಥೋತ್ಸವ ನೆರವೇರಿಸಿದ್ದರು. ನಿಯಮ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಬಾದಾಮಿ ಠಾಣೆಯಲ್ಲಿ ಬನಶಂಕರಿ ದೇವಸ್ಥಾನದ ಟ್ರಸ್ಟಿಗಳು, ಗ್ರಾಮಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಬಾಗಲಕೋಟೆ ಎಸ್​ಪಿ ಲೋಕೇಶ್ ಜಗಲಾಸರ್​ ಮಾಹಿತಿ ನೀಡಿದರು.

ಇದನ್ನೂ ಓದಿ: Covid 19 Karnataka Update: ಕರ್ನಾಟಕದಲ್ಲಿ 27,156 ಜನರಿಗೆ ಕೊರೊನಾ ಸೋಂಕು, ಕೊವಿಡ್​ನಿಂದ 14 ಮಂದಿ ಸಾವು ಇದನ್ನೂ ಓದಿ: Corona Review Meeting: ಜನವರಿ 25ರ ಹೊತ್ತಿಗೆ ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ತೀವ್ರ: ಸಚಿವ ಆರ್ ಅಶೋಕ್

Follow Us
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ಡಿಕೆಶಿ ಸಿಟಿ ರೌಂಡ್ಸ್: ಫುಟ್​ಪಾತ್ ತೆರವು ವೀಕ್ಷಿಸಿ ಹೇಳಿದ್ದೇನು ನೋಡಿ
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
ರಸ್ತೆ ಬದಿ ನಿಂತಲ್ಲೇ ನಿಂತ ವಾಹನಗಳಿಗೆ ಎಷ್ಟು ದಂಡ ಗೊತ್ತಾ?
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
‘ದರ್ಶನ್ ಅಭಿಮಾನಿಗಳು ತಪ್ಪು ಮಾಡಲ್ಲ, ಅದು ಕಿಡಿಗೇಡಿಗಳ ಕೆಲಸ’
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
ವಯನಾಡು: ಸುರಂಗ ನಿರ್ಮಾಣ ಸ್ಥಳದಲ್ಲಿ ದುರ್ಘಟನೆ ಸಂಭವಿಸಿದ್ದೇಕೆ?
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!