AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್​ ತನಕವೂ ಕೊರೊನಾ ಎಚ್ಚರಿಕೆ ಅಗತ್ಯವೆಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ; ಎಚ್ಚರ ಎಚ್ಚರಾ- ಆರೋಗ್ಯ ಸಚಿವ ಸುಧಾಕರ್

ಕರ್ನಾಟಕದಲ್ಲಿ ಜಾರಿಗೊಳಿಸಲಾದ ಕಠಿಣ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ತಾಂತ್ರಿಕ ಸಮಿತಿ ಜೂನ್​ ತಿಂಗಳ ತನಕವೂ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ಈಗ ಎಚ್ಚೆತ್ತುಕೊಂಡು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ಪರಿಸ್ಥಿತಿ ಹೆಚ್ಚೂಕಡಿಮೆ ಆಗಲಿದೆ. ಕೊರೊನಾ ಬಿಗಡಾಯಿಸಬಾರದೆಂದರೆ ಮುನ್ನೆಚ್ಚರಿಕೆ ಬೇಕೇಬೇಕು.

ಜೂನ್​ ತನಕವೂ ಕೊರೊನಾ ಎಚ್ಚರಿಕೆ ಅಗತ್ಯವೆಂದು ತಾಂತ್ರಿಕ ಸಲಹಾ ಸಮಿತಿ ಹೇಳಿದೆ; ಎಚ್ಚರ ಎಚ್ಚರಾ- ಆರೋಗ್ಯ ಸಚಿವ ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ (ಸಂಗ್ರಹ ಚಿತ್ರ)
Skanda
| Edited By: |

Updated on:Apr 03, 2021 | 11:14 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ಭೀತಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಠಿಣ ನಿಯಮಾವಳಿಗಳನ್ನು ಹೊರಡಿಸಿದೆ. ಕೊರೊನಾ ಹಬ್ಬದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ ಬೇರೆ ದಾರಿ ಇಲ್ಲ. ತಜ್ಞರ ವೈಜ್ಞಾನಿಕ ವರದಿ ಆಧಾರದ ಮೇಲೆಯೇ ನಿಯಮಗಳನ್ನು ರೂಪಿಸಲಾಗಿದೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಬೆಂಗಳೂರಿನಲ್ಲಿ ಮಾತನಾಡಿದ್ದಾರೆ.

ಕರ್ನಾಟಕದಲ್ಲಿ ಜಾರಿಗೊಳಿಸಲಾದ ಕಠಿಣ ನಿಯಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ತಾಂತ್ರಿಕ ಸಮಿತಿ ಜೂನ್​ ತಿಂಗಳ ತನಕವೂ ಎಚ್ಚರಿಕೆಯಿಂದ ಇರುವಂತೆ ತಿಳಿಸಿದೆ. ಈಗ ಎಚ್ಚೆತ್ತುಕೊಂಡು ಕಠಿಣ ಕ್ರಮ ಕೈಗೊಳ್ಳದೇ ಇದ್ದರೆ ಮುಂದಿನ ಪರಿಸ್ಥಿತಿ ಹೆಚ್ಚೂಕಡಿಮೆ ಆಗಲಿದೆ. ಕೊರೊನಾ ಬಿಗಡಾಯಿಸಬಾರದೆಂದರೆ ಮುನ್ನೆಚ್ಚರಿಕೆ ಬೇಕೇಬೇಕು. ತಾಂತ್ರಿಕ ಸಲಹಾ ಸಮಿತಿ ವರದಿ ತರಿಸಿಕೊಂಡು, ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡಿಯೇ ನಿರ್ಧಾರ ಕೈಗೊಂಡಿದ್ದೇವೆ. ಈ ಸಂದರ್ಭದಲ್ಲಿ ಬಂದ ಕೆಲ ಪ್ರಸ್ತಾವನೆಗಳನ್ನು ಅಳವಡಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಸದ್ಯ ಜಾರಿಗೊಳಿಸಿರುವ ಕಠಿಣ ನಿಯಮಗಳ ಪಾಲನೆ ಆಗಬೇಕು. ನೈಟ್ ಕರ್ಫ್ಯೂ, ವೀಕೆಂಡ್ ಲಾಕ್‌ಡೌನ್ ಬಗ್ಗೆ ಇನ್ನೂ ಗೊತ್ತಿಲ್ಲ. ಅನ್​ಲಾಕ್​ ವಿಚಾರದಲ್ಲಿ ಕರ್ನಾಟಕ ರಾಜ್ಯವೇ ಮುಂದೆ ನಿಂತು ನಿಯಮ ಸಡಿಲಿಸಿತ್ತು. ಆದರೆ, ಈಗ ಅನಿವಾರ್ಯವಾಗಿ ಐದು ಸಾವಿರ ಕೊವಿಡ್ ಪ್ರಕರಣಗಳು ದಾಖಲಾಗಿವೆ. ಬೆಂಗಳೂರಿನಲ್ಲೇ ಮೂರು ಸಾವಿರ ಪ್ರಕರಣಗಳು ಕಂಡುಬಂದಿವೆ. ಕಳೆದ ಬಾರಿ ಕೊವಿಡ್​ 19 ಪೀಕ್​ನಲ್ಲಿದ್ದಾಗ ನಾಲ್ಕೂವರೆ ಸಾವಿರ ಪ್ರಕರಣಗಳು ದಾಖಲಾಗುತ್ತಿದ್ದವು. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಮೈಮರೆಯುವಂತಿಲ್ಲ ಎಂದು ಸರ್ಕಾರದ ನಿಯಮಾವಳಿಗಳನ್ನು ಸಮರ್ಥಿಸಿಕೊಂಡಿದ್ದಾರೆ.

ಜನಸಂದಣಿ ಇರೋ ಕಡೆ ಹೋಗ್ಲೇಬೇಡಿ ಎಂದು ಮನವಿ ಕೊವಿಡ್ ತಡೆಗೆ ಜನ ಎಚ್ಚೆತ್ತುಕೊಳ್ಳದಿದ್ದರೆ ಗಂಡಾಂತರ ಕಾದಿದೆ ಎಂದು ತಾಂತ್ರಿಕ ಸಲಹಾ ಸಮಿತಿ ಸದಸ್ಯ, ನಿಮ್ಹಾನ್ಸ್ ವೈರಲಾಜಿಸ್ಟ್ ಡಾ.ರವಿ ಇದೇ ಸಂದರ್ಭದಲ್ಲಿ ಟಿವಿ9ಗೆ ಸ್ಪಷ್ಟಪಡಿಸಿದ್ದಾರೆ.

ಎರಡನೇ ಅಲೆಯಲ್ಲಿ ಕೊರೊನಾ ತೀವ್ರತೆ ಜೋರಾಗಿದೆ. ಹೆಚ್ಚು ಜನದಟ್ಟಣೆ ಇರುವ ಪ್ರದೇಶಗಳು ಅಪಾಯಕಾರಿ. ಜನಸಂದಣಿ ಇರೋ ಕಡೆ ಹೋಗ್ಲೇಬೇಡಿ ಎಂದು ಡಾ.ರವಿ ಮನವಿ ಮಾಡಿದ್ದಾರೆ. 45 ವರ್ಷ ಮೇಲ್ಪಟ್ಟವರು ಲಸಿಕೆ ಪಡೆಯುವಂತೆ ಸಲಹೆ ನೀಡಿರುವ ಡಾ.ರವಿ ಅವರು ಸರ್ಕಾರದ ಗೈಡ್​ಲೈನ್ಸ್​ ಚಾಚೂತಪ್ಪದೇ ಪಾಲಿಸಬೇಕು ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ನಿಯಮಾವಳಿಗಳನ್ನು ಗಾಳಿಗೆ ತೂರಿದ ಜನ; ಎರಡನೇ ಅಲೆ ಬಗ್ಗೆ ನಿರ್ಲಕ್ಷ್ಯ 

ಕೊರೊನಾ ತಡೆಗೆ ಹೊಸ ಮಾರ್ಗಸೂಚಿ: ಬಾರ್​, ರೆಸ್ಟೋರೆಂಟ್, ಜಿಮ್, ಸ್ವಿಮ್​ಗೆ ನಿರ್ಬಂಧ

Published On - 11:09 am, Sat, 3 April 21

Follow Us
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಟಿವಿ9 ವಾರ್ಷಿಕ ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಸ್ಫೂರ್ತಿದಾಯಕ ಭಾಷಣ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿಗೆ ಮೈ ಹೋಮ್ ಗ್ರೂಪ್ ಚೇರ್ಮನ್ ರಾಮೇಶ್ವರ ರಾವ್ ಸನ್ಮಾನ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಪ್ರಧಾನಿ ಮೋದಿ ನಾಯಕತ್ವದಿಂದ ಇಡೀ ಜಗತ್ತು ಭಾರತವನ್ನ ಗೌರವದಿಂದ ಕಾಣುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಒಂದು ಕ್ಷಿಪಣಿ ಜಾಗತಿಕ ಮಾರುಕಟ್ಟೆಗಳನ್ನೇ ಅಸ್ತವ್ಯಸ್ತಗೊಳಿಸುತ್ತಿದೆ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಅಥಣಿಯಿಂದ ಶಿವಣ್ಣನ ನೋಡಲು ಬೆಂಗಳೂರಿಗೆ ಬಂದ ವಿಶೇಷ ಚೇತನ ಅಭಿಮಾನಿ
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
ಕುವೈತ್​​ನಲ್ಲಿ ಇರಾನ್​ನಿಂದ ಮತ್ತೊಂದು ಯುದ್ಧವಿಮಾನ ಪತನ; ವಿಡಿಯೋ ವೈರಲ್
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
PM Modi Speech in WITT Live: ಟಿವಿ9​​ ಶೃಂಗಸಭೆ; ಪ್ರಧಾನಿ ಮೋದಿ ಭಾಷಣ
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಮುತ್ತಪ್ಪ ರೈ ಪುತ್ರ ರಿಕ್ಕಿ ರೈನಿಂದಲೇ ಕಾರ್ ಡ್ರೈವಿಂಗ್:
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಚಿನ್ನ-ಬೆಳ್ಳಿ ದರ ಏರಿಳಿತ, ಹೂಡಿಕೆ ಬಗ್ಗೆ ಆರ್ಥಿಕ ತಜ್ಞ ಮಹತ್ವದ ಮಾಹಿತಿ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ
ಸಾಲ ಮಾಡಿ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗೆ ಮಹತ್ವದ ಸಲಹೆ