AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಷನ್ ಬ್ಯಾಂಕ್​ ATMನಲ್ಲಿ ಜ್ಯೋತಿ ಉದಯ್​ ಮೇಲೆ ಹಲ್ಲೆ ಪ್ರಕರಣ: ಆರೋಪಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲುಶಿಕ್ಷೆ

2013ರಲ್ಲಿ ನಗರದ ಕಾರ್ಪೊರೇಷನ್ ಬ್ಯಾಂಕ್​ ATMನಲ್ಲಿ ಜ್ಯೋತಿ ಉದಯ್​ ಎಂಬ ಬ್ಯಾಂಕ್​ ಮ್ಯಾನೇಜರ್ ಮೇಲೆ ಭೀಕರವಾಗಿ ಹಲ್ಲೆಗೈದಿದ್ದ ಆರೋಪಿ ಮಧುಕರ್ ರೆಡ್ಡಿಗೆ ಜೈಲುಶಿಕ್ಷೆಯಾಗಿದೆ.

ಕಾರ್ಪೊರೇಷನ್ ಬ್ಯಾಂಕ್​ ATMನಲ್ಲಿ ಜ್ಯೋತಿ ಉದಯ್​ ಮೇಲೆ ಹಲ್ಲೆ ಪ್ರಕರಣ: ಆರೋಪಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲುಶಿಕ್ಷೆ
ಜ್ಯೋತಿ ಉದಯ್​
Follow us
KUSHAL V
|

Updated on:Feb 02, 2021 | 5:03 PM

ಬೆಂಗಳೂರು: 2013ರಲ್ಲಿ ನಗರದ ಕಾರ್ಪೊರೇಷನ್ ಬ್ಯಾಂಕ್​ ATMನಲ್ಲಿ ಜ್ಯೋತಿ ಉದಯ್​ ಎಂಬ ಬ್ಯಾಂಕ್​ ಮ್ಯಾನೇಜರ್ ಮೇಲೆ ಭೀಕರವಾಗಿ ಹಲ್ಲೆಗೈದಿದ್ದ ಆರೋಪಿ ಮಧುಕರ್ ರೆಡ್ಡಿಗೆ ಜೈಲುಶಿಕ್ಷೆಯಾಗಿದೆ.

ಅಪರಾಧಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲುಶಿಕ್ಷೆ ಪ್ರಕಟವಾಗಿದೆ. ನಗರದ 65ನೇ ಸಿಸಿಹೆಚ್ ಕೋರ್ಟ್‌ನಿಂದ ಶಿಕ್ಷೆ ಪ್ರಕಟವಾಗಿದೆ. ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್​ ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್​ ರೆಡ್ಡಿ ಗರಿಷ್ಟ 10 ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಬೇಕು.

ಅಂದ ಹಾಗೆ, ಮಧುಕರ್ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದಾನೆ. ಹಾಗಾಗಿ, ಆತ ಉಳಿದ 7 ವರ್ಷ ಜೈಲಿನಲ್ಲಿ ಕಳೆಯಬೇಕಿದೆ.

ಆರೋಪಿ ಮಧುಕರ್​ ರೆಡ್ಡಿ 2013ರ ನ.19ರಂದು ನಗರದ ಕಾರ್ಪೊರೇಷನ್​ ಬ್ಯಾಂಕ್​ ATMನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಮಾಡಿದ್ದ. ಇದೀಗ, ಘಟನೆ ನಡೆದು 8 ವರ್ಷಗಳ ನಂತರ ಅಪರಾಧಿಗೆ ಜೈಲು ಶಿಕ್ಷೆಯಾಗಿದೆ.

‘ನಾನು ಆ ATM ಕಡೆ ಈಗಲೂ ಹೋಗುತ್ತಿಲ್ಲ’ ಇನ್ನು, ಆರೋಪಿ ಮಧುಕರ್​ ರೆಡ್ಡಿಗೆ ಶಿಕ್ಷೆಯಾದ ಬಗ್ಗೆ ಟಿವಿ9ಗೆ ಪ್ರತಿಕ್ರಿಯಿಸಿದ ಬ್ಯಾಂಕ್​ ಮ್ಯಾನೇಜರ್​ ಜ್ಯೋತಿ ಉದಯ್​ ಅವರು ಇವತ್ತು ನನಗೆ ತುಂಬಾ ಖುಷಿಯಾಗ್ತಿದೆ. ಕೊನೆಗೂ ಆತನಿಗೆ ಶಿಕ್ಷೆಯಾಗಿದೆ. ಆದರೆ, ಅಪರಾಧಿ ಮಧುಕರ್​ ರೆಡ್ಡಿಗೆ ಇನ್ನೂ ಕಠಿಣ ಶಿಕ್ಷೆ ಆಗಬೇಕಿತ್ತು. ನ್ಯಾಯಾಲಯದ ತೀರ್ಪನ್ನು ನಾನು ಗೌರವಿಸುತ್ತೇನೆ. ಆದರೆ, ಇನ್ನೂ ಕಠಿಣ ಶಿಕ್ಷೆ ಆಗಬಹುದು ಎಂಬ ನಿರೀಕ್ಷೆ ಇತ್ತು ಎಂದು ಹೇಳಿದರು.

ಜೊತೆಗೆ, ಈ ರೀತಿ ಯಾರು ಮಾಡಬಾರದು. ನಾನು ಆ ATM ಕಡೆ ಈಗಲೂ ಹೋಗುತ್ತಿಲ್ಲ ಎಂದು ಹೇಳಿದರು. ಜೊತೆಗೆ, ಮಹಿಳೆಯರು ATMಗೆ ಹೋಗುವಾಗ ತುಂಬಾ ಹುಷಾರಾಗಿರಿ ಎಂಬ ಸಲಹೆ ಸಹ ನೀಡಿದ್ದಾರೆ.

ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಜ್ಯೋತಿ ಮೇಲೆ ಮಚ್ಚು ಬೀಸಿದ್ದವ ಅಪರಾಧಿ- ಕೋರ್ಟ್ ತೀರ್ಪು: ಶಿಕ್ಷೆ ಏನು?

Published On - 4:36 pm, Tue, 2 February 21

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್