AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಪೊರೇಷನ್ ಬ್ಯಾಂಕ್​ ATMನಲ್ಲಿ ಜ್ಯೋತಿ ಉದಯ್​ ಮೇಲೆ ಹಲ್ಲೆ ಪ್ರಕರಣ: ಆರೋಪಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲುಶಿಕ್ಷೆ

2013ರಲ್ಲಿ ನಗರದ ಕಾರ್ಪೊರೇಷನ್ ಬ್ಯಾಂಕ್​ ATMನಲ್ಲಿ ಜ್ಯೋತಿ ಉದಯ್​ ಎಂಬ ಬ್ಯಾಂಕ್​ ಮ್ಯಾನೇಜರ್ ಮೇಲೆ ಭೀಕರವಾಗಿ ಹಲ್ಲೆಗೈದಿದ್ದ ಆರೋಪಿ ಮಧುಕರ್ ರೆಡ್ಡಿಗೆ ಜೈಲುಶಿಕ್ಷೆಯಾಗಿದೆ.

ಕಾರ್ಪೊರೇಷನ್ ಬ್ಯಾಂಕ್​ ATMನಲ್ಲಿ ಜ್ಯೋತಿ ಉದಯ್​ ಮೇಲೆ ಹಲ್ಲೆ ಪ್ರಕರಣ: ಆರೋಪಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲುಶಿಕ್ಷೆ
ಜ್ಯೋತಿ ಉದಯ್​
KUSHAL V
|

Updated on:Feb 02, 2021 | 5:03 PM

Share

ಬೆಂಗಳೂರು: 2013ರಲ್ಲಿ ನಗರದ ಕಾರ್ಪೊರೇಷನ್ ಬ್ಯಾಂಕ್​ ATMನಲ್ಲಿ ಜ್ಯೋತಿ ಉದಯ್​ ಎಂಬ ಬ್ಯಾಂಕ್​ ಮ್ಯಾನೇಜರ್ ಮೇಲೆ ಭೀಕರವಾಗಿ ಹಲ್ಲೆಗೈದಿದ್ದ ಆರೋಪಿ ಮಧುಕರ್ ರೆಡ್ಡಿಗೆ ಜೈಲುಶಿಕ್ಷೆಯಾಗಿದೆ.

ಅಪರಾಧಿ ಮಧುಕರ್ ರೆಡ್ಡಿಗೆ 12 ವರ್ಷ ಜೈಲುಶಿಕ್ಷೆ ಪ್ರಕಟವಾಗಿದೆ. ನಗರದ 65ನೇ ಸಿಸಿಹೆಚ್ ಕೋರ್ಟ್‌ನಿಂದ ಶಿಕ್ಷೆ ಪ್ರಕಟವಾಗಿದೆ. ದರೋಡೆ ಆರೋಪದಡಿ 10 ವರ್ಷ ಶಿಕ್ಷೆ ವಿಧಿಸಿದ ಕೋರ್ಟ್​ ಸಾಕ್ಷ್ಯ ನಾಶ ಮಾಡಿದ್ದಕ್ಕೆ 2 ವರ್ಷ ಶಿಕ್ಷೆ ಸಹ ವಿಧಿಸಿದೆ. ಆದರೆ, ಎರಡೂ ಶಿಕ್ಷೆಯನ್ನು ಜೊತೆಯಲ್ಲೇ ಅನುಭವಿಸಬೇಕಾಗಿರುವುದರಿಂದ ಮಧುಕರ್​ ರೆಡ್ಡಿ ಗರಿಷ್ಟ 10 ವರ್ಷಗಳ ಕಾಲ ಜೈಲುಶಿಕ್ಷೆ ಅನುಭವಿಸಬೇಕು.

ಅಂದ ಹಾಗೆ, ಮಧುಕರ್ ರೆಡ್ಡಿ ಈಗಾಗಲೇ 3 ವರ್ಷ ಜೈಲಿನಲ್ಲಿ ಕಳೆದಿದ್ದಾನೆ. ಹಾಗಾಗಿ, ಆತ ಉಳಿದ 7 ವರ್ಷ ಜೈಲಿನಲ್ಲಿ ಕಳೆಯಬೇಕಿದೆ.

ಆರೋಪಿ ಮಧುಕರ್​ ರೆಡ್ಡಿ 2013ರ ನ.19ರಂದು ನಗರದ ಕಾರ್ಪೊರೇಷನ್​ ಬ್ಯಾಂಕ್​ ATMನಲ್ಲಿ ಜ್ಯೋತಿ ಉದಯ್ ಅವರ ಮೇಲೆ ಹಲ್ಲೆ ಮಾಡಿದ್ದ. ಇದೀಗ, ಘಟನೆ ನಡೆದು 8 ವರ್ಷಗಳ ನಂತರ ಅಪರಾಧಿಗೆ ಜೈಲು ಶಿಕ್ಷೆಯಾಗಿದೆ.

‘ನಾನು ಆ ATM ಕಡೆ ಈಗಲೂ ಹೋಗುತ್ತಿಲ್ಲ’ ಇನ್ನು, ಆರೋಪಿ ಮಧುಕರ್​ ರೆಡ್ಡಿಗೆ ಶಿಕ್ಷೆಯಾದ ಬಗ್ಗೆ ಟಿವಿ9ಗೆ ಪ್ರತಿಕ್ರಿಯಿಸಿದ ಬ್ಯಾಂಕ್​ ಮ್ಯಾನೇಜರ್​ ಜ್ಯೋತಿ ಉದಯ್​ ಅವರು ಇವತ್ತು ನನಗೆ ತುಂಬಾ ಖುಷಿಯಾಗ್ತಿದೆ. ಕೊನೆಗೂ ಆತನಿಗೆ ಶಿಕ್ಷೆಯಾಗಿದೆ. ಆದರೆ, ಅಪರಾಧಿ ಮಧುಕರ್​ ರೆಡ್ಡಿಗೆ ಇನ್ನೂ ಕಠಿಣ ಶಿಕ್ಷೆ ಆಗಬೇಕಿತ್ತು. ನ್ಯಾಯಾಲಯದ ತೀರ್ಪನ್ನು ನಾನು ಗೌರವಿಸುತ್ತೇನೆ. ಆದರೆ, ಇನ್ನೂ ಕಠಿಣ ಶಿಕ್ಷೆ ಆಗಬಹುದು ಎಂಬ ನಿರೀಕ್ಷೆ ಇತ್ತು ಎಂದು ಹೇಳಿದರು.

ಜೊತೆಗೆ, ಈ ರೀತಿ ಯಾರು ಮಾಡಬಾರದು. ನಾನು ಆ ATM ಕಡೆ ಈಗಲೂ ಹೋಗುತ್ತಿಲ್ಲ ಎಂದು ಹೇಳಿದರು. ಜೊತೆಗೆ, ಮಹಿಳೆಯರು ATMಗೆ ಹೋಗುವಾಗ ತುಂಬಾ ಹುಷಾರಾಗಿರಿ ಎಂಬ ಸಲಹೆ ಸಹ ನೀಡಿದ್ದಾರೆ.

ಕಾರ್ಪೊರೇಷನ್ ಬ್ಯಾಂಕ್ ATMನಲ್ಲಿ ಜ್ಯೋತಿ ಮೇಲೆ ಮಚ್ಚು ಬೀಸಿದ್ದವ ಅಪರಾಧಿ- ಕೋರ್ಟ್ ತೀರ್ಪು: ಶಿಕ್ಷೆ ಏನು?

Published On - 4:36 pm, Tue, 2 February 21

Follow Us
KUSHAL V
KUSHAL V
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ
ಬೆಂಗಳೂರಿನ ಆಟೋ ಚಾಲಕನಿಗೆ ಹಿಂದಿಯಲ್ಲಿ ನಿಂದಿಸಿದ ಮಹಿಳೆ