AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿಗೆ ನೇಮಕ, ಹೈಕಮಾಂಡ್​ಗೆ ಪಟ್ಟಿ ಕಳುಹಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಕೊನೆಗೂ ಹಲವು ಸುತ್ತಿನ ಸಭೆಗಳ ಬಳಿಕ ನಿಗಮ ಮಂಡಳಿ ನೇಮಕ ವಿಚಾರವಾಗಿ ಪಟ್ಟಿ ಅಂತಿಮಗೊಳಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಈ ಕುರಿತ ಪಟ್ಟಿಯನ್ನು ಹೈಕಮಾಂಡ್​ಗೆ ಕಳುಹಿಸಿಕೊಡಲಾಗಿದ್ದು, ಶೀಘ್ರದಲ್ಲೇ ನೇಮಕ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ನಿಗಮ ಮಂಡಳಿಗೆ ನೇಮಕ, ಹೈಕಮಾಂಡ್​ಗೆ ಪಟ್ಟಿ ಕಳುಹಿಸಲಾಗಿದೆ: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ & ಸುರ್ಜೇವಾಲ (ಸಂಗ್ರಹ ಚಿತ್ರ)
ಪ್ರಸನ್ನ ಗಾಂವ್ಕರ್​
| Edited By: |

Updated on:Nov 28, 2023 | 9:01 PM

Share

ಬೆಂಗಳೂರು, ನವೆಂಬರ್ 28: ನಿಗಮ ಮಂಡಳಿಗೆ ನೇಮಕ (Corporation Board Appointment) ಸಂಬಂಧ ಕೇಂದ್ರ ನಾಯಕರಿಗೆ ಪಟ್ಟಿ ರವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮಂಗಳವಾರ ಸಂಜೆ ತಿಳಿಸಿದರು. ಕಾಂಗ್ರೆಸ್​ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಜೊತೆ ಬೆಂಗಳೂರಿನ ತಾಜ್​ ವೆಸ್ಟ್​ ಎಂಡ್​ ಹೋಟೆಲ್​ನಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಿದ್ದರಾಮಯ್ಯ, ಪಟ್ಟಿ ಕಳುಹಿಸಲಾಗಿದೆ. ಹೈಕಮಾಂಡ್ ಅನುಮತಿ ನೀಡಿದ ನಂತರ ನೇಮಕಾತಿ ಮಾಡುತ್ತೇವೆ ಎಂದರು.

ನಿಗಮ ಮಂಡಳಿ ನೇಮಕಾತಿಯಲ್ಲಿ ಮೊದಲ ಹಂತದಲ್ಲಿ ಶಾಸಕರಿಗೆ ಅವಕಾಶ ನೀಡಲಾಗುವುದು. 2 ಹಾಗೂ 3ನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಕಾರ್ಯಕರ್ತರು ಮತ್ತು ಶಾಸಕರಿಗೆ ಅವಕಾಶ ಕೊಡುವ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ಪೈಪೋಟಿ ನಡೆದಿತ್ತು. ಪರಿಣಾಮವಾಗಿ ಹಲವು ಸುತ್ತುಗಳ ಸಭೆಯ ನಂತರವೂ ಅಂತಿಮ ತೀರ್ಮಾನಕ್ಕೆ ಬರುವಲ್ಲಿ ಪಕ್ಷದ ಉನ್ನತ ನಾಯಕರು ವಿಫಲರಾಗಿದ್ದರು.

ಈ ಹಿಂದೆ ನವೆಂಬರ್ 21ರಂದು ಬೆಂಗಳೂರಿಗೆ ಆಗಮಿಸಿದ್ದ ರಣದೀಪ್ ಸಿಂಗ್ ಸುರ್ಜೇವಾಲ ಸಿಎಂ, ಡಿಸಿಎಂ ಹಾಗೂ ಇತರ ನಾಯಕರ ಜತೆ ದೀರ್ಘ ಸಭೆ ನಡೆಸಿದ್ದರು. ಅಷ್ಟೇ ಅಲ್ಲದೆ, ಸಂಭಾವ್ಯರ ಪಟ್ಟಿ ಕೂಡ ಸಿದ್ಧಪಡಿಸಲಾಗಿತ್ತು. ಸಭೆಯ ನಡುವೆಯೇ ಸುರ್ಜೇವಾಲ ಅವರು ಶಾಸಕರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ಪಟ್ಟಿ ಪ್ರಕಟಿಸಿದ ನಂತರ ತಕರಾರು ಮಾಡಬಾರದು ಎಂದು ಸೂಚನೆ ಕೊಟ್ಟಿದ್ದರು. ಅಲ್ಲದೆ, ಕೊಟ್ಟ ನಿಗಮ ಮಂಡಳಿ ಜವಾಬ್ದಾರಿ ನಿಭಾಯಿಸಬೇಕೆಂದು ಸೂಚನೆ ನೀಡಿದ್ದರು. ಇಷ್ಟೆಲ್ಲ ಆದ ಬಳಿಕವೂ ಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ‘ಕೈ’ ನಾಯಕರು ವಿಫಲರಾಗಿದ್ದರು.

ಇದನ್ನೂ ಓದಿ: ಸರ್ಕಾರಕ್ಕೆ ಮತ್ತೆ ತಲೆನೋವಾದ ಬಿಆರ್ ಪಾಟೀಲ್; ರಾಜೀನಾಮೆ ಬಗ್ಗೆ ಉಲ್ಲೇಖಿಸಿ ಸಿಎಂಗೆ ಪತ್ರ

ಕಳೆದ ಬಾರಿಯ ಸಭೆ ವಿಫಲವಾದ ಕಾರಣ ಮತ್ತೆ ಇಂದು (ನವೆಂಬರ್ 28) ಬೆಂಗಳೂರಿಗೆ ಬಂದಿರುವ ಸುರ್ಜೇವಾಲ ಜತೆ ಸಿಎಂ ಹಾಗೂ ಇತರರು ಸಭೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:13 pm, Tue, 28 November 23

Follow Us
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ
ಮುಂಬೈನಲ್ಲಿರುವ ಮಹಾರಾಷ್ಟ್ರ ವಿಧಾನ ಭವನಕ್ಕೆ ಬಾಂಬ್ ಬೆದರಿಕೆ