AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿಗೆ ನೇಮಕ, ಹೈಕಮಾಂಡ್​ಗೆ ಪಟ್ಟಿ ಕಳುಹಿಸಲಾಗಿದೆ: ಸಿಎಂ ಸಿದ್ದರಾಮಯ್ಯ

ಕೊನೆಗೂ ಹಲವು ಸುತ್ತಿನ ಸಭೆಗಳ ಬಳಿಕ ನಿಗಮ ಮಂಡಳಿ ನೇಮಕ ವಿಚಾರವಾಗಿ ಪಟ್ಟಿ ಅಂತಿಮಗೊಳಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಯಶಸ್ವಿಯಾಗಿದೆ. ಈ ಕುರಿತ ಪಟ್ಟಿಯನ್ನು ಹೈಕಮಾಂಡ್​ಗೆ ಕಳುಹಿಸಿಕೊಡಲಾಗಿದ್ದು, ಶೀಘ್ರದಲ್ಲೇ ನೇಮಕ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ತಿಳಿಸಿದ್ದಾರೆ.

ನಿಗಮ ಮಂಡಳಿಗೆ ನೇಮಕ, ಹೈಕಮಾಂಡ್​ಗೆ ಪಟ್ಟಿ ಕಳುಹಿಸಲಾಗಿದೆ: ಸಿಎಂ ಸಿದ್ದರಾಮಯ್ಯ
ಸಿದ್ದರಾಮಯ್ಯ & ಸುರ್ಜೇವಾಲ (ಸಂಗ್ರಹ ಚಿತ್ರ)
ಪ್ರಸನ್ನ ಗಾಂವ್ಕರ್​
| Edited By: |

Updated on:Nov 28, 2023 | 9:01 PM

Share

ಬೆಂಗಳೂರು, ನವೆಂಬರ್ 28: ನಿಗಮ ಮಂಡಳಿಗೆ ನೇಮಕ (Corporation Board Appointment) ಸಂಬಂಧ ಕೇಂದ್ರ ನಾಯಕರಿಗೆ ಪಟ್ಟಿ ರವಾನಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಮಂಗಳವಾರ ಸಂಜೆ ತಿಳಿಸಿದರು. ಕಾಂಗ್ರೆಸ್​ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲ ಜೊತೆ ಬೆಂಗಳೂರಿನ ತಾಜ್​ ವೆಸ್ಟ್​ ಎಂಡ್​ ಹೋಟೆಲ್​ನಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಸಿದ್ದರಾಮಯ್ಯ, ಪಟ್ಟಿ ಕಳುಹಿಸಲಾಗಿದೆ. ಹೈಕಮಾಂಡ್ ಅನುಮತಿ ನೀಡಿದ ನಂತರ ನೇಮಕಾತಿ ಮಾಡುತ್ತೇವೆ ಎಂದರು.

ನಿಗಮ ಮಂಡಳಿ ನೇಮಕಾತಿಯಲ್ಲಿ ಮೊದಲ ಹಂತದಲ್ಲಿ ಶಾಸಕರಿಗೆ ಅವಕಾಶ ನೀಡಲಾಗುವುದು. 2 ಹಾಗೂ 3ನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಅವರು ಹೇಳಿದ್ದಾರೆ.

ಈ ಹಿಂದೆ ಕಾರ್ಯಕರ್ತರು ಮತ್ತು ಶಾಸಕರಿಗೆ ಅವಕಾಶ ಕೊಡುವ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮಧ್ಯೆ ಪೈಪೋಟಿ ನಡೆದಿತ್ತು. ಪರಿಣಾಮವಾಗಿ ಹಲವು ಸುತ್ತುಗಳ ಸಭೆಯ ನಂತರವೂ ಅಂತಿಮ ತೀರ್ಮಾನಕ್ಕೆ ಬರುವಲ್ಲಿ ಪಕ್ಷದ ಉನ್ನತ ನಾಯಕರು ವಿಫಲರಾಗಿದ್ದರು.

ಈ ಹಿಂದೆ ನವೆಂಬರ್ 21ರಂದು ಬೆಂಗಳೂರಿಗೆ ಆಗಮಿಸಿದ್ದ ರಣದೀಪ್ ಸಿಂಗ್ ಸುರ್ಜೇವಾಲ ಸಿಎಂ, ಡಿಸಿಎಂ ಹಾಗೂ ಇತರ ನಾಯಕರ ಜತೆ ದೀರ್ಘ ಸಭೆ ನಡೆಸಿದ್ದರು. ಅಷ್ಟೇ ಅಲ್ಲದೆ, ಸಂಭಾವ್ಯರ ಪಟ್ಟಿ ಕೂಡ ಸಿದ್ಧಪಡಿಸಲಾಗಿತ್ತು. ಸಭೆಯ ನಡುವೆಯೇ ಸುರ್ಜೇವಾಲ ಅವರು ಶಾಸಕರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದರು. ಪಟ್ಟಿ ಪ್ರಕಟಿಸಿದ ನಂತರ ತಕರಾರು ಮಾಡಬಾರದು ಎಂದು ಸೂಚನೆ ಕೊಟ್ಟಿದ್ದರು. ಅಲ್ಲದೆ, ಕೊಟ್ಟ ನಿಗಮ ಮಂಡಳಿ ಜವಾಬ್ದಾರಿ ನಿಭಾಯಿಸಬೇಕೆಂದು ಸೂಚನೆ ನೀಡಿದ್ದರು. ಇಷ್ಟೆಲ್ಲ ಆದ ಬಳಿಕವೂ ಪಟ್ಟಿಯನ್ನು ಅಂತಿಮಗೊಳಿಸುವಲ್ಲಿ ‘ಕೈ’ ನಾಯಕರು ವಿಫಲರಾಗಿದ್ದರು.

ಇದನ್ನೂ ಓದಿ: ಸರ್ಕಾರಕ್ಕೆ ಮತ್ತೆ ತಲೆನೋವಾದ ಬಿಆರ್ ಪಾಟೀಲ್; ರಾಜೀನಾಮೆ ಬಗ್ಗೆ ಉಲ್ಲೇಖಿಸಿ ಸಿಎಂಗೆ ಪತ್ರ

ಕಳೆದ ಬಾರಿಯ ಸಭೆ ವಿಫಲವಾದ ಕಾರಣ ಮತ್ತೆ ಇಂದು (ನವೆಂಬರ್ 28) ಬೆಂಗಳೂರಿಗೆ ಬಂದಿರುವ ಸುರ್ಜೇವಾಲ ಜತೆ ಸಿಎಂ ಹಾಗೂ ಇತರರು ಸಭೆ ನಡೆಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:13 pm, Tue, 28 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ