ನಿಗಮ ಮಂಡಳಿ ನೇಮಕ: ಬಸವರಾಜ ರಾಯರೆಡ್ಡಿಗೆ ಕಾಂಗ್ರೆಸ್ ಹೈಕಮಾಂಡ್ ಹಠಾತ್ ಬುಲಾವ್

ರಾಯರೆಡ್ಡಿ ಅವರು ತಮ್ಮ ಸರ್ಕಾರದ ವಿರುದ್ಧವೇ ಪದೇಪದೆ ಹೇಳಿಕೆಗಳನ್ನು ನೀಡಿ ಸುದ್ದಿಯಲ್ಲಿದ್ದಾರೆ. ಅಲ್ಲದೇ, ರಾಯರೆಡ್ಡಿ ಜೊತೆ ಒಂದಷ್ಟು ಸಮಾನ ಮನಸ್ಕ ಶಾಸಕರ ಗುಂಪಿದೆ. ಸರ್ಕಾರದ ವಿರುದ್ಧದ ಅವರ ಅಪಸ್ವರಗಳಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗುವ ಆತಂಕ ಎದುರಾಗಿದೆ. ಹೀಗಾಗಿ ಸಿಎಂ, ಡಿಸಿಎಂ, ಸುರ್ಜೇವಾಲ ಅವರು ರಾಯರೆಡ್ಡಿಗೆ ಕರೆ ಮಾಡಿ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.

ನಿಗಮ ಮಂಡಳಿ ನೇಮಕ: ಬಸವರಾಜ ರಾಯರೆಡ್ಡಿಗೆ ಕಾಂಗ್ರೆಸ್ ಹೈಕಮಾಂಡ್ ಹಠಾತ್ ಬುಲಾವ್
ಬಸವರಾಜ ರಾಯರೆಡ್ಡಿ
Follow us
| Edited By: ಗಣಪತಿ ಶರ್ಮ

Updated on: Nov 21, 2023 | 9:08 PM

ಬೆಂಗಳೂರು, ನವೆಂಬರ್ 21: ಕಾಂಗ್ರೆಸ್ ಸರ್ಕಾರಕ್ಕೆ ನಿಗಮ ಮಂಡಳಿಗಳ ಅಧ್ಯಕ್ಷಸ್ಥಾನ ನೇಮಕ (Corporation Board Appointment) ವಿಚಾರ ಕಗ್ಗಂಟಾಗಿಯೇ ಉಳಿದಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Surjewala) ನೇತೃತ್ವದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಸಭೆ ನಡೆದಿದ್ದು, ಇನ್ನೂ ಅಂತಿಮ ತೀರ್ಮಾನಕ್ಕೆ ಬರಲಾಗಿಲ್ಲ. ಈ ಮಧ್ಯೆ, ಸುರ್ಜೇವಾಲ ಅವರು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜತೆಗಿನ ಸಭೆಗೆ ಬರುವಂತೆ ಬಸವರಾಜ ರಾಯರೆಡ್ಡಿ (Basvaraj Rayareddi) ಅವರನ್ನು ಕರೆಸಿಕೊಂಡಿದ್ದಾರೆ.

ಬಸವರಾಜ ರಾಯರೆಡ್ಡಿಗೂ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ಬಗ್ಗೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

ರಾಯರೆಡ್ಡಿ ಅವರು ತಮ್ಮ ಸರ್ಕಾರದ ವಿರುದ್ಧವೇ ಪದೇಪದೆ ಹೇಳಿಕೆಗಳನ್ನು ನೀಡಿ ಸುದ್ದಿಯಲ್ಲಿದ್ದಾರೆ. ಅಲ್ಲದೇ, ರಾಯರೆಡ್ಡಿ ಜೊತೆ ಒಂದಷ್ಟು ಸಮಾನ ಮನಸ್ಕ ಶಾಸಕರ ಗುಂಪಿದೆ. ಸರ್ಕಾರದ ವಿರುದ್ಧದ ಅವರ ಅಪಸ್ವರಗಳಿಂದ ಸರ್ಕಾರಕ್ಕೆ ಡ್ಯಾಮೇಜ್ ಆಗುವ ಆತಂಕ ಎದುರಾಗಿದೆ. ಹೀಗಾಗಿ ಸಿಎಂ, ಡಿಸಿಎಂ, ಸುರ್ಜೇವಾಲ ಅವರು ರಾಯರೆಡ್ಡಿಗೆ ಕರೆ ಮಾಡಿ ಕರೆಸಿಕೊಂಡಿದ್ದಾರೆ ಎನ್ನಲಾಗಿದೆ.

ಇಷ್ಟೇ ಅಲ್ಲದೆ, ಬಸವರಾಜ ರಾಯರೆಡ್ಡಿ ಜೊತೆಗೆ ಸಿಎಂ, ಡಿಸಿಎಂ, ಸುರ್ಜೇವಾಲ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ನಿಗಮ ಮಂಡಳಿಗೆ ನೇಮಕ ಮಾಡುತ್ತೇವೆ ಎಂದು ರಾಯರೆಡ್ಡಿಗೆ ಆಫರ್ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಈ ಹಿಂದೆ ಸಚಿವರಾಗಿದ್ದ ರಾಯರೆಡ್ಡಿ ನಿಗಮ ಮಂಡಳಿಗೆ ಒಪ್ಪುತ್ತಾರಾ ಎಂಬ ಪ್ರಶ್ನೆಯೂ ಎದುರಾಗಿದೆ.

ಇದನ್ನೂ ಓದಿ: ಜಾತಿಗಣತಿ ವರದಿ ಜಾರಿ ವಿಚಾರದಲ್ಲಿ ನನ್ನ ನಿರ್ಧಾರ ಅಚಲ: ಸಿದ್ದರಾಮಯ್ಯ

ಬಗೆಹರಿಯದ ಬಿಕ್ಕಟ್ಟು: ಬೆಂಗಳೂರಲ್ಲೇ ಉಳಿದ ಸುರ್ಜೇವಾಲ

ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನ ಹಂಚಿಕೆ ಬಗೆಹರಿಯದ ಕಾರಣ ರಣದೀಪ್ ಸುರ್ಜೇವಾಲ ಇಂದು ಬೆಂಗಳೂರಿನಲ್ಲೇ ವಾಸ್ತವ್ಯ ಹೂಡುವ ಸಾಧ್ಯತೆ ಇದೆ. ನಿಗದಿಯಂತೆ ಸಂಜೆ 6.30ಕ್ಕೆ ಬೆಂಗಳೂರಿನಿಂದ ಅವರು ವಾಪಸಾಗಬೇಕಿತ್ತು. ಆದರೆ ಇದುವರೆಗೆ ಮೊದಲ ಸುತ್ತಿನ ಸಮಾಲೋಚನೆಯೇ ಬಗೆಹರಿದಿಲ್ಲ ಎನ್ನಲಾಗಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
‘ವಿನೋದ್​ಗೆ ಅದೇ ಹೇಳ್ತೀನಿ..’: ಲೀಲಾವತಿ ನಿಧನಕ್ಕೆ ಶಿವಣ್ಣ ಪ್ರತಿಕ್ರಿಯೆ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಅಮ್ಮ ನನ್ನನ್ನು ಒಂಟಿಯಾಗಿಸಿ ಹೋಗಿಬಿಟ್ಟಳು! ವಿನೋದ್ ರಾಜ್ ಆಕ್ರಂದನ
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಸರ್ವವಸ್ವವೇ ಆಗಿದ್ದ ತಾಯಿ ಅಗಲಿಕೆ: ವಿನೋದ್ ರಾಜ್ ದುಃಖತಪ್ತ ಮಾತುಗಳು
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ಪ್ರತಿಭಟನೆಗೆ ಅಡ್ಡಿಪಡಿಸುವ ಪೊಲೀಸರು ನಮಗೆ ಅನ್ನ ನೀಡುತ್ತಾರೆಯೇ? ಶಾಲಾ ಬಾಲಕ
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ತಾಳಿ ಕಟ್ಟಿಸಿಕೊಳ್ಳಲು ಒಲ್ಲೆನೆಂದ ಯುವತಿಗೆ ರೂ. 4.70 ಲಕ್ಷ ವಧುದಕ್ಷಿಣೆ?
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಬೆಂಗಳೂರಲ್ಲಿ ಅನಾಮತ್ತಾಗಿ ಉರುಳಿದ ಸೆಲ್ ಪೋನ್ ಟವರ್, ಪ್ರಾಣಹಾನಿ ಇಲ್ಲ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಸಿದ್ದರಾಮಯ್ಯ ಸಿಎಂ ಆದರೆ ಬರ ಯಡಿಯೂರಪ್ಪ ಆದರೆ ಅತಿವೃಷ್ಟಿ: ಜ್ಞಾನೇಂದ್ರ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಉಡುಪಿ ಕಾರ್ಟೂನ್ ಹಬ್ಬಕ್ಕೆ ವಿಭಿನ್ನವಾಗಿ ಶುಭ ಕೋರಿದ ಮರಳು ಶಿಲ್ಪ ಕಲಾವಿದ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬೆಂಗಳೂರಿನಲ್ಲಿ ಕಟ್ಟಡ ಸಹಿತ ಧರೆಗುರುಳಿದ ಮೊಬೈಲ್ ಟವರ್, ವಿಡಿಯೋ ಇಲ್ಲಿದೆ
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್
ಬಿಗ್ ಬಾಸ್​ನಲ್ಲಿ ಹದಗೆಟ್ಟಿತು ವರ್ತೂರು ಸಂತೋಷ್​-ತನಿಷಾ ಫ್ರೆಂಡ್​ಶಿಪ್