AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿ ನೇಮಕಾತಿ: ಸಂಭಾವ್ಯರಿಗೆ ಕರೆ ಮಾಡಿ ವಿಚಾರಿಸುತ್ತಿರುವ ಸುರ್ಜೇವಾಲ, ಇಲ್ಲಿದೆ ಪಟ್ಟಿ

ಸಭೆ ನಡುವೆಯೇ ಹಿರಿಯ ಶಾಸಕರಿಗೆ ಸುರ್ಜೇವಾಲ ದೂರವಾಣಿ ಕರೆ ಮಾಡಿದ್ದು, ಪಟ್ಟಿ ಪ್ರಕಟಿಸಿದ ನಂತರ ತಕರಾರು ಮಾಡಬಾರದು ಎಂದು ಸೂಚನೆ ಕೊಟ್ಟಿದ್ದಾರೆ. ಅಲ್ಲದೆ, ಕೊಟ್ಟ ನಿಗಮ ಮಂಡಳಿ ಜವಾಬ್ದಾರಿ ನಿಭಾಯಿಸಬೇಕೆಂದು ಸೂಚನೆ ನೀಡಿದ್ದಾರೆ. ಏನಾದರೂ ತಕರಾರು ಇದ್ದರೆ ಈಗಲೇ ತಿಳಿಸಿ ಎಂದೂ ಹೇಳಿದ್ದಾರೆ.

ನಿಗಮ ಮಂಡಳಿ ನೇಮಕಾತಿ: ಸಂಭಾವ್ಯರಿಗೆ ಕರೆ ಮಾಡಿ ವಿಚಾರಿಸುತ್ತಿರುವ ಸುರ್ಜೇವಾಲ, ಇಲ್ಲಿದೆ ಪಟ್ಟಿ
ರಣದೀಪ್ ಸಿಂಗ್ ಸುರ್ಜೇವಾಲ
Shivaprasad B
| Edited By: |

Updated on: Nov 21, 2023 | 10:55 PM

Share

ಬೆಂಗಳೂರು, ನವೆಂಬರ್ 21: ನಿಗಮ ಮಂಡಳಿಗಳ ಅಧ್ಯಕ್ಷಸ್ಥಾನ ನೇಮಕ ವಿಚಾರವಾಗಿ ಬೆಂಗಳೂರಿನ ತಾಜ್ ವೆಸ್ಟ್ ಎಂಡ್ ಹೋಟೆಲ್​ನಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ (Randeep Surjewala) ನೇತೃತ್ವದಲ್ಲಿ ಸಭೆ ನಡೆಯುತ್ತಿದ್ದು, ಸಂಭಾವ್ಯರ ಪಟ್ಟಿ ಸಿದ್ಧವಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಜತೆಗಿನ ಸಭೆಯ ನಡುವೆಯೇ ಸುರ್ಜೇವಾಲ ಅವರು ಶಾಸಕರಿಗೆ ದೂರವಾಣಿ ಕರೆ ಮಾಡಿ ಮಾತನಾಡುತ್ತಿದ್ದಾರೆ.

ಸಭೆಯಲ್ಲಿ ಸಚಿವರಾದ ಜಿ. ಪರಮೇಶ್ವರ್, ಕೆ.ಜೆ.ಜಾರ್ಜ್ ಕೂಡ ಭಾಗವಹಿಸಿದ್ದಾರೆ. ಸಭೆ ನಡುವೆಯೇ ಹಿರಿಯ ಶಾಸಕರಿಗೆ ಸುರ್ಜೇವಾಲ ದೂರವಾಣಿ ಕರೆ ಮಾಡಿದ್ದು, ಪಟ್ಟಿ ಪ್ರಕಟಿಸಿದ ನಂತರ ತಕರಾರು ಮಾಡಬಾರದು ಎಂದು ಸೂಚನೆ ಕೊಟ್ಟಿದ್ದಾರೆ. ಅಲ್ಲದೆ, ಕೊಟ್ಟ ನಿಗಮ ಮಂಡಳಿ ಜವಾಬ್ದಾರಿ ನಿಭಾಯಿಸಬೇಕೆಂದು ಸೂಚನೆ ನೀಡಿದ್ದಾರೆ. ಏನಾದರೂ ತಕರಾರು ಇದ್ದರೆ ಈಗಲೇ ತಿಳಿಸಿ ಎಂದೂ ಹೇಳಿದ್ದಾರೆ.

ಯಾರೆಲ್ಲ ಒಪ್ಪಿಕೊಳ್ಳಲಿದ್ದಾರೆಂದು ಖಚಿತಪಡಿಸಿಕೊಳ್ಳುತ್ತಿರುವ ಸುರ್ಜೇವಾಲ, ಒಬ್ಬೊಬ್ಬರೇ ಹಿರಿಯ ಶಾಸಕರಿಗೆ ಕರೆ ಮಾಡಿ ಮಾತಾಡುತ್ತಿದ್ದಾರೆ. ಸಚಿವಸ್ಥಾನಕ್ಕೆ ಪಟ್ಟು ಹಿಡಿದಿರುವ ಕೆಲ ಹಿರಿಯ ಶಾಸಕರು ಒಪ್ಪಿಕೊಳ್ಳದಿದ್ರೆ, ಪಟ್ಟಿ ಪ್ರಕಟಿಸಿದ ನಂತರ ಅಧಿಕಾರ ವಹಿಸಿಕೊಳ್ಳದಿದ್ದರೆ ತಪ್ಪು ಸಂದೇಶ ರವಾನೆ ಆಗಲಿದೆ ಎಂದು ಈಗಲೇ ಗೊಂದಲ ಬಗೆಹರಿಸಲು ಈ ಕ್ರಮ ಕೈಗೊಳ್ಳಲಾಗಿದೆ.

ಸಂಭಾವ್ಯರ ಪಟ್ಟಿ ಹೀಗಿದೆ

  • ಪಿ.ಎಂ ನರೇಂದ್ರ ಸ್ವಾಮಿ
  • ರಮೇಶ್ ಬಾಬು ಬಂಡಿಸಿದ್ದೇಗೌಡ
  • ಅನಿಲ್ ಚಿಕ್ಕಮಾದು
  • ಟಿ.ಡಿ ರಾಜೇಗೌಡ
  • ಶಿವಲಿಂಗೇಗೌಡ
  • ಬಿ.ಕೆ ಸಂಗಮೇಶ್
  • ಬಂಗಾರಪೇಟೆ ನಾರಾಯಣಸ್ವಾಮಿ
  • ಕೆ.ವೈ ನಂಜೇಗೌಡ
  • ಬಿ.ಆರ್ ಪಾಟೀಲ್
  • ಗಣೇಶ್ ಹುಕ್ಕೇರಿ
  • ಮಹಾಂತೇಶ್ ಕೌಜಲಗಿ
  • ಯಶವಂತ್ ರಾಯ್ ಗೌಡ ಪಾಟೀಲ್
  • ಬಿ.ಜಿ ಗೋವಿಂದಪ್ಪ
  • ರಾಘವೇಂದ್ರ ಹಿಟ್ನಾಳ್
  • ರಘುಮೂರ್ತಿ
  • ಭೀಮಣ್ಣ ನಾಯ್ಕ್
  • ಸತೀಶ್ ಸೈಲ್
  • ಪ್ರಸಾದ್ ಅಬ್ಬಯ್ಯ
  • ಜಿ.ಟಿ ಪಾಟೀಲ್
  • ಡಿ.ಆರ್ ಪಾಟೀಲ್
  • ಬಸನಗೌಡ ತುರುವಿಹಾಳ್

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?