AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಗಮ ಮಂಡಳಿ ಅಧ್ಯಕ್ಷರು ಮತ್ತು ನಿರ್ದೇಶಕರ ಬದಲಾವಣೆ ಖಚಿತ; ತ್ರಿಸದಸ್ಯರ ಸಮಿತಿ ರಚನೆ

ಸಮಿತಿ ಪಟ್ಟಿ ನೀಡಿದ ನಂತರ ಬೇರೆಯವರ ನೇಮಕಾತಿ ಸಂಬಂಧ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಸಮಿತಿ ರಚನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹಮತ ಸೂಚಿಸಿದ್ದಾರೆ.

ನಿಗಮ ಮಂಡಳಿ ಅಧ್ಯಕ್ಷರು ಮತ್ತು ನಿರ್ದೇಶಕರ ಬದಲಾವಣೆ ಖಚಿತ; ತ್ರಿಸದಸ್ಯರ ಸಮಿತಿ ರಚನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Updated By: guruganesh bhat|

Updated on:Oct 09, 2021 | 11:33 PM

Share

ಬೆಂಗಳೂರು: ಶಾಸಕರನ್ನು ಹೊರತುಪಡಿಸಿ ಉಳಿದ ನಿಗಮ ಮಂಡಳಿ ಅಧ್ಯಕ್ಷರು ಮತ್ತು ನಿರ್ದೇಶಕರ ಬದಲಾವಣೆ ಖಚಿತ ಎಂಬ ಮಾಹಿತಿ ಲಭ್ಯವಾಗಿದೆ. ನಿಗಮ ಮಂಡಳಿ ಅಧ್ಯಕ್ಷರು ಮತ್ತು ನಿರ್ದೇಶಕರ ಬದಲಾವಣೆ ಪ್ರಕ್ರಿಯೆಗೋಸ್ಕರ ತ್ರಿಸದಸ್ಯರ ಸಮಿತಿಯನ್ನು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ರಚಿಸಿದ್ದಾರೆ. ಕೋರ್ ಕಮಿಟಿ ಸದಸ್ಯರಾದ ಆರ್. ಅಶೋಕ್, ಲಕ್ಷ್ಮಣ ಸವದಿ ಮತ್ತು ನಿರ್ಮಲ್ ಕುಮಾರ್ ಸುರಾನಾ ಅವರನ್ನು ಸಮಿತಿ ಒಳಗೊಂಡಿದೆ. ತ್ರಿಸದಸ್ಯ ಸಮಿತಿಗೆ ನಿರ್ಮಲ್ ಕುಮಾರ್ ಸುರಾನಾ ಸಂಚಾಲಕರಾಗಿ ನೇಮಗೊಂಡಿದ್ದಾರೆ.

ಈಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದ ಅವಧಿಯಲ್ಲಿ ನೇಮಕಗೊಂಡು ಒಂದೂವರೆ ವರ್ಷ ಪೂರೈಸಿರುವ ನಿಗಮ ಮಂಡಳಿ ಅಧ್ಯಕ್ಷರ ಪಟ್ಟಿ ನೀಡುವಂತೆ ಸಮಿತಿಗೆ ಸೂಚಿಸಲಾಗಿದೆ. ಸಮಿತಿ ಪಟ್ಟಿ ನೀಡಿದ ನಂತರ ಬೇರೆಯವರ ನೇಮಕಾತಿ ಸಂಬಂಧ ನಿರ್ಧಾರ ತೆಗೆದುಕೊಳ್ಳಲು ನಿರ್ಧರಿಸಲಾಗಿದೆ. ಸಮಿತಿ ರಚನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಹಮತ ಸೂಚಿಸಿದ್ದಾರೆ.

ಬಿಜೆಪಿಯ ನೂತನ ರಾಷ್ಟ್ರೀಯ ಕಾರ್ಯಕಾರಿಣಿ ಘೋಷಣೆ: ಕರ್ನಾಟಕದಿಂದ ಆಯ್ಕೆ ಆದವರು ಯಾರು? ಇಲ್ಲಿದೆ ವಿವರ ಬಿಜೆಪಿ ಗುರುವಾರ 80 ಸದಸ್ಯರ ಹೊಸ ರಾಷ್ಟ್ರೀಯ ಕಾರ್ಯಕಾರಿಣಿ (National Executive) ಸಮಿತಿಯನ್ನು ರಚಿಸಿದೆ. ಸಮಿತಿಯ ಸದಸ್ಯರ ಹೆಸರನ್ನು ಕೂಡ ಘೋಷಿಸಿದೆ. ಸಮಿತಿಯ ಸದಸ್ಯರ ಪೈಕಿ ಕರ್ನಾಟಕದಿಂದ ಬಿಜೆಪಿಯ ಹಲವು ಪ್ರಮುಖ ನಾಯಕರು ಕಾರ್ಯಕಾರಿಣಿ ಸಮಿತಿಗೆ ಆಯ್ಕೆ ಆಗಿದ್ದಾರೆ. ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕರ್ನಾಟಕ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಡಿ.ವಿ. ಸದಾನಂದ ಗೌಡ ಕಾರ್ಯಕಾರಿಣಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.

ಕರ್ನಾಟಕದ ಮಾಜಿ ಉಪಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ ಮತ್ತು ಗೋವಿಂದ ಕಾರಜೋಳ ಕಾರ್ಯಕಾರಿಣಿ ಸಮಿತಿಯ ಭಾಗವಾಗಿದ್ದಾರೆ. ಇಬ್ಬರು ಕೇಂದ್ರ ಸಚಿವರಾದ ಪ್ರಲ್ಹಾದ್ ಜೋಶಿ ಹಾಗೂ ನಿರ್ಮಲಾ ಸೀತಾರಾಮನ್, ವಿಶೇಷ ಆಹ್ವಾನಿತರಾಗಿ ಕಲಬುರ್ಗಿ ಎಂಪಿ ಡಾ. ಉಮೇಶ್ ಜಾಧವ್, ಯುವ ಮೋರ್ಚಾದ ಪರವಾಗಿ ತೇಜಸ್ವಿ ಯಾದವ್, ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಡಿ.ಕೆ. ಅರುಣಾ ಆಯ್ಕೆ ಆಗಿದ್ದಾರೆ.

ಇದನ್ನೂ ಓದಿ: 

‘ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಕೊಟ್ಟರೆ ನನಗೆ ಬೇಡ’- ಶಾಸಕ ಶ್ರೀಮಂತ ಪಾಟೀಲ್

ನಿಗಮ, ಮಂಡಳಿಗಳ ಅಧ್ಯಕ್ಷರು ಈಗ ಸಂಪುಟ ದರ್ಜೆ ಸಚಿವರಿಗೆ ಸಮಾನರು!

Published On - 4:15 pm, Sat, 9 October 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ