AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಲೀಂ ಮಾತು: ವಿ.ಎಸ್. ಉಗ್ರಪ್ಪಗೆ ನೋಟಿಸ್ ಜಾರಿ!

DK Shivakumar: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತಾಡಿದ ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ರೆಹಮಾನ್ ಖಾನ್​ರಿಂದ ನೋಟಿಸ್ ನೀಡಲಾಗಿದೆ.

ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಲೀಂ ಮಾತು: ವಿ.ಎಸ್. ಉಗ್ರಪ್ಪಗೆ ನೋಟಿಸ್ ಜಾರಿ!
ಡಿ.ಕೆ.ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂಬ ಸಲೀಂ ಮಾತು: ಉಗ್ರಪ್ಪಗೆ ಜಾರಿಯಾಯ್ತು ನೋಟಿಸ್!
TV9 Web
| Updated By: ಸಾಧು ಶ್ರೀನಾಥ್​|

Updated on:Oct 13, 2021 | 1:58 PM

Share

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಈಗಾಗಲೇ ಸಲೀಂಗೆ ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಗೇಟ್​ ಪಾಸ್ ನೀಡಲಾಗಿದೆ. ಇನ್ನು ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪಗೆ ಇದೀಗ ಕೆಪಿಸಿಸಿ ಶಿಸ್ತುಪಾಲನಾ ಸಮಿತಿಯಿಂದ ನೋಟಿಸ್ ಜಾರಿಯಾಗಿದೆ. ಕೆಪಿಸಿಸಿ ಅಧ್ಯಕ್ಷರ ಬಗ್ಗೆ ಮಾತಾಡಿದ ಉಗ್ರಪ್ಪಗೆ ಕೆಪಿಸಿಸಿ ಶಿಸ್ತುಪಾಲನಾ ಸಮಿತಿ ಅಧ್ಯಕ್ಷ ಕೆ ರೆಹಮಾನ್ ಖಾನ್​ರಿಂದ ನೋಟಿಸ್ ನೀಡಲಾಗಿದೆ.

ಕುತೂಹಲದ ಸಂಗತಿಯೆಂದರೆ ಅತ್ತ ಉಗ್ರಪ್ಪಸುದ್ದಿಗೋಷ್ಟಿ ನಡೆಸುತ್ತಿದ್ದು, ಅವರು ಹೊರ ಬರುವುದನ್ನೇ ಪಕ್ಷದ ಸಿಬ್ಬಂದಿ ಕಾಯುತ್ತಿದ್ದಾರೆ. ಉಗ್ರಪ್ಪ ಹೊರಬರುತ್ತಿದ್ದಂತೆ ಅವರಿಗೆ ಕೆಪಿಸಿಸಿ ವತಿಯಿಂದ ನೋಟಿಸ್​ ಸರ್ವ್ ಮಾಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿವೆ. ಪಕ್ಷದಲ್ಲಿ ಅಶಿಸ್ತಿನ ನಡವಳಿಕೆಗಾಗಿ ಕಾರಣ ಕೇಳಿ ರೆಹಮಾನ್ ಖಾನ್ ಸಹಿಯುಳ್ಳ ನೋಟಿಸ್​ ಪತ್ರ ಜಾರಿಯಾಗಿದೆ. ​ ಡಿಕೆ ಶಿವಕುಮಾರ್ ಕಲೆಕ್ಷನ್ ಗಿರಾಕಿ ಎಂದ ಸಲೀಂಗೆ ಗೇಟ್​ ಪಾಸ್: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ ಭ್ರಷ್ಟಾಚಾರದಲ್ಲಿ ಭಾಗಿಯಾಗಿದಾರೆ ಎಂದು ಕಾಂಗ್ರೆಸ್​ ಮುಖಂಡರಾದ ವಿ.ಎಸ್. ಉಗ್ರಪ್ಪ ಮತ್ತು ಸಲೀಂ ನಡುವಣ ಸ್ಫೋಟಕ ಮಾತುಗಳು ಬಹಿರಂಗವಾಗುತ್ತಿದ್ದಂತೆ ಸಲೀಂಗೆ ಗೇಟ್​ ಪಾಸ್ ನೀಡಲಾಗಿದೆ. ಕೆಪಿಸಿಸಿ ಮಾಧ್ಯಮ ಸಂಯೋಜಕ ಸ್ಥಾನದಿಂದ ಸಲೀಂ ಅವರನ್ನು ಸಸ್ಪೆಂಡ್​ ಮಾಡಲಾಗಿದೆ. ಇನ್ನು ಸಂಭಾಷಣೆ ವೇಳೆ ಮೌನವಾಗಿ ಮಾತುಗಳನ್ನು ಆಲಿಸಿದ ಉಗ್ರಪ್ಪ ಅವರಿಂದ ವಿವರಣೆ ಪಡೆಯಲಾಗುವುದು ಎಂದು ಕಾರ್ಯಾಧ್ಯಕ್ಷ ಸಲೀಂ ಅಹಮದ್ ಟಿವಿ 9 ಗೆ ತಿಳಿಸಿದ್ದಾರೆ.

ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರ ಕೆಪಿಸಿಸಿ ಕಚೇರಿಯಲ್ಲಿಯೇ ಬಹಿರಂಗ: ಸಿ.ಟಿ.ರವಿ ಟಾಂಗ್ ಬೆಂಗಳೂರು: ಕೊತ್ವಾಲ್ ರಾಮಚಂದ್ರ ಶಿಷ್ಯನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಅವರದೇ ಪಕ್ಷದ ಮುಖಂಡರು ಬಯಲು ಮಾಡಿದ್ದಾರೆ. ಅದು ಕೂಡ ಕೆಪಿಸಿಸಿ ಕಚೇರಿಯಲ್ಲಿ ಬಹಿರಂಗಪಡಿಸಿದ್ದಾರೆ. ಹಾಗಾದ್ರೆ ಕೆಪಿಸಿಸಿಗೆ ಎಂತಹ ದುರ್ಗತಿ ಬಂದಿರಬಹುದು? ಎಂದು ಟ್ವೀಟ್ ಮೂಲಕ ಬಿಜೆಪಿ ನಾಯಕ ಸಿ.ಟಿ.ರವಿ ಟಾಂಗ್ ನೀಡಿದ್ದಾರೆ.

ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಿಂದ Ugrappaಗೆ ನೋಟಿಸ್​ |Ugrappa|Tv9kannada

Published On - 1:35 pm, Wed, 13 October 21

ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಕೇಸ್ ವಾಪಸ್ ತೆಗೆದುಕೊಂಡರೆ ಮನು ವಿರುದ್ಧ ಸಾಕ್ಷಿ ಬಿಡ್ತೀನಿ: ಸಂತ್ರಸ್ತೆ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಸಿನಿಮಾ ಆರಿಸಿಕೊಂಡಿದ್ದೇಕೆ? ಜನಾರ್ಧನ ರೆಡ್ಡಿ ಪುತ್ರನ ಉತ್ತರ
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಮನೆಯಲ್ಲಿ ಯಾರೂ ಇಲ್ಲದಿದ್ದಾಗ 3ನೇ ಮಹಡಿಯ ಕಿಟಕಿಯಿಂದ ಹೊರಗೆ ನೇತಾಡಿದ ಮಗು
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸುರ್ಜೇವಾಲಾ ಶಾಸಕರನ್ನು ಭೇಟಿಯಾಗುತ್ತಿರುವುದು ಒಂದು ಪ್ರಕ್ರಿಯೆ: ಲಕ್ಷ್ಮಿ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಸರ್ಕಾರೀ ಕೆಲಸದ ನಿಮಿತ್ತ ಸಿಎಂ, ಡಿಸಿಎಂ ದೆಹಲಿ ಹೋಗಿರಬಹುದು: ದೇಶಪಾಂಡೆ
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಮತ್ತೆ ಇಡಿ ವಿಚಾರಣೆಗೆ ಹಾಜರಾದ ಡಿಕೆ ಸುರೇಶ್
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಊರಿಗೆ ರಸ್ತೆಗಿಂತ ಬಡವನ ಹೊಟ್ಟೆಗೆ ಅನ್ನ ಮತ್ತು ಮೈಗೆ ಬಟ್ಟೆ ಮುಖ್ಯ: ಸವದಿ
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ಇವತ್ತು ಸಿದ್ದೇಶ್ವರ ಹುಟ್ಟುಹಬ್ಬ, ವಿಶ್ ಮಾಡಲು ಬಂದಿದ್ದೇವೆ: ಹರೀಶ್
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ರೆಬೆಲ್ ನಾಯಕರಲ್ಲಿ ಕುಮಾರ ಬಂಗಾರಪ್ಪ ಉಳಿದವರಿಗಿಂತ ಜಾಸ್ತಿ ಜನಪ್ರಿಯ
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು
ಅಘೋಷಿತ ಬಂದ್ ಸ್ಥಿತಿಯಲ್ಲಿ ರಾಜ್ಯದ ಮಹಾನಗರ ಪಾಲಿಕೆಗಳು