ಚಾಮರಾಜನಗರ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಒಂದೊಂದು ಚಿಕಿತ್ಸೆಗೆ ಒಂದೊಂದು ರೇಟ್ ಫಿಕ್ಸ್

ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲವರಿಗೆ 3 ಸಾವಿರ ರೂ. ಸಿಜೇರಿಯನ್​​ಗೆ 20 ಸಾವಿರ ರೂ. ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ 30 ಸಾವಿರ ರೂ. ಅಂತ ಒಂದೊಂದು ಆಪರೇಷನ್​​ಗೆ ಒಂದೊಂದ ಹಣ ನಿಗದಿ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು ಆ ಹಣವನ್ನ ಸಂಗ್ರಹಿಸಿ ನರ್ಸ್​​ಗಳಿಗೆ ಕೊಡ್ಬೇಕಂತೆ. ಬಳಿಕ ವೈದ್ಯಾಧಿಕಾರಿ ರೇಣುಕಾದೇವಿ ಈ ಹಣವನ್ನ ಸಂಗ್ರಹಿಸುತ್ತಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.

ಚಾಮರಾಜನಗರ ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ: ಒಂದೊಂದು ಚಿಕಿತ್ಸೆಗೆ ಒಂದೊಂದು ರೇಟ್ ಫಿಕ್ಸ್
ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆ
Edited By:

Updated on: Mar 24, 2024 | 6:16 PM

ಚಾಮರಾಜನಗರ, ಮಾರ್ಚ್​​ 24: ಬಡವರು, ಕೂಲಿ ಕಾರ್ಮಿಕರು ಅನಾರೋಗ್ಯಕ್ಕೆ ತುತ್ತಾದ್ದರೆ ಹೋಗುವುದು ಸರ್ಕಾರಿ ಆಸ್ಪತ್ರೆಗೆ. ಆದರೆ ಅಂತ ಸರ್ಕಾರಿ ಆಸ್ಪತ್ರೆ (Government Hospital) ಯ ಸಿಬ್ಬಂದಿಗಳೇ ವಸೂಲಿಗೆ ನಿಂತ್ರೆ ಬಡ ಬಗ್ಗರ ಗತಿಯೇನು? ಇಂತಿಂತ ಚಿಕಿತ್ಸೆಗೆ ಇಂತಿಷ್ಟು ಹಣ ಅಂತ ಫಿಕ್ಸ್ ಮಾಡಿ ಲಂಚ ಪಡೆಯುತ್ತಿರುವ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯ ಕರ್ಮಕಾಂಡ ಈಗ ಬಟಾ ಬಯಲಾಗಿದೆ. ಜಿಲ್ಲೆಯ ಚಾಮರಾಜನಗರ ತಾಲೂಕಿನ ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ರೋಗಿಗಳಿಂದ ಹಣಪಡೆದುಕೊಳ್ಳುವ ಮೂಲಕ ಸುಲಿಗೆಗೆ ಇಳಿದಿದ್ದಾರೆ.

ಸಂತೇಮರಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ನಾರ್ಮಲ್ ಡೆಲವರಿಗೆ 3 ಸಾವಿರ ರೂ. ಸಿಜೇರಿಯನ್​​ಗೆ 20 ಸಾವಿರ ರೂ. ಗರ್ಭಕೋಶ ಶಸ್ತ್ರ ಚಿಕಿತ್ಸೆಗೆ 30 ಸಾವಿರ ರೂ. ಅಂತ ಒಂದೊಂದು ಆಪರೇಷನ್​​ಗೆ ಒಂದೊಂದ ಹಣ ನಿಗದಿ ಮಾಡಲಾಗಿದೆ. ಆಶಾ ಕಾರ್ಯಕರ್ತೆಯರು ಆ ಹಣವನ್ನ ಸಂಗ್ರಹಿಸಿ ನರ್ಸ್​​ಗಳಿಗೆ ಕೊಡ್ಬೇಕಂತೆ. ಬಳಿಕ ವೈದ್ಯಾಧಿಕಾರಿ ರೇಣುಕಾದೇವಿ ಈ ಹಣವನ್ನ ಸಂಗ್ರಹಿಸುತ್ತಾರೆಂಬ ಗಂಭೀರ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಶಿವರಾತ್ರಿ ಜಾತ್ರೆ: ಮಲೆಮಹದೇಶ್ವರ ದೇಗುಲದಲ್ಲಿ ಬರೋಬ್ಬರಿ ಆದಾಯ ಸಂಗ್ರಹ, ಇಲ್ಲಿದೆ ನೋಡಿ ವಿವರ

ಇದೇ ರೀತಿ ರಾಣಿ ಎಂಬ ಆಶಾ ಕಾರ್ಯಕರ್ತೆಗೆ 10 ಸಾವಿರ ರೂ. ಹಣವನ್ನ ಡೆಲವರಿ ರೋಗಿಗಳ ಬಳಿ ವಸೂಲಿ ಮಾಡೋಕೆ ಹೇಳಿದ್ರಂತೆ. ಇದಕ್ಕೊಪ್ಪದೆ ಇದ್ದಿದ್ದಕ್ಕೆ ವೈದ್ಯಾಧಿಕಾರಿ ರೇಣುಕಾದೇವಿ ಇಲ್ಲ ಸಲ್ಲದ ಆರೋಪ ಮಾಡಿ ಭ್ರಷ್ಟಾಚಾರ ವಿರುದ್ದ ಧ್ವನಿ ಎತ್ತಿದ್ದ ಆಶಾ ಕಾರ್ಯಕರ್ತೆ ರಾಣಿ ವಿರುದ್ದ ಮೆಮೋ ನೀಡಿದ್ದಾರೆ. ಅಸಲಿ ಆಶಾ ಕಾರ್ಯಕರ್ತೆಯರು ಸರ್ಕಾರಿ ನೌಕರರಲ್ಲ. ಅವರಿಗೆ ನೋಟಿಸ್ ನೀಡಲು ಕಾನೂನಲ್ಲಿ ಅವಕಾಶವಿಲ್ಲ ಆದರೂ ಸಹ ಮೆಮೋ ನೀಡಿ ಈಗ ವೈದ್ಯಾಧಿಕಾರಿ ರೇಣುಕಾದೇವಿ ಅಡಕತ್ತರಿಗೆ ಸಿಲುಕಿದ್ದಾರೆ.

ಒಂದು ಹೆಜ್ಜೆ ಮುಂದೆ ಹೋಗಿರುವ ಡಾಕ್ಟರ್ ಮೇಡಂ ಜಾತಿ ಅಸ್ತ್ರ ಪ್ರಯೋಗಿಸಿ ಅಟ್ರಾಸಿಟಿ ಕೇಸ್ ಹಾಕಿಸಿ ನಿನ್ನನ್ನ ಒಳಗೆ ಕಳಿಸುತ್ತೇನೆಂದು ಧಮ್ಕಿ ಹಾಕಿದ್ದಾರಂತೆ.

ಇದನ್ನೂ ಓದಿ: ಹೆಗ್ಗೋಠಾರದಲ್ಲಿ ಆಚರಿಸಲಾಯ್ತು ವಿಶೇಷ ಶಿವರಾತ್ರಿ ಉತ್ಸವ; 40 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ತೆರಳಿ ಕಪಿಲಾ ತೀರ್ಥ ತಂದ ಭಕ್ತಗಣ

ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹೋಗಲು ಹಣವಿಲ್ಲ ಅಂತ ಸರ್ಕಾರಿ ಆಸ್ಪತ್ರೆಗೆ ಬರುವ ಬಡ ಬಗ್ಗರ ಬಳಿಯೇ ಹಣ ಪಡೆದುಕೊಳ್ಳುವವರ ವಿರುದ್ದ ಜಿಲ್ಲಾ ಆರೋಗ್ಯಾಧಿಕಾರಿಗಳು ಸೂಕ್ತ ಕ್ರಮ ತೆಗೆದುಕೊಂಡು ತಕ್ಕ ಶಾಸ್ತಿ ಮಾಡ್ಬೇಕಿದೆ. ಇಲ್ಲದೇ ಹೋದರೆ ಬಡ, ಬಗ್ಗರು ಚಿಕಿತ್ಸೆಯಿಂದ ವಂಚಿತರಾಗುವುದಂತು ಪಕ್ಕಾ.

ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us