AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭೆ ಮತದಾನಕ್ಕಿನ್ನು ಒಂದೇ ದಿನ: ಎಲ್ಲೆಲ್ಲಿ ಮತದಾನ, ಯಾರು ಅಭ್ಯರ್ಥಿಗಳು, ಮತದಾರರೆಷ್ಟು? ವಿವರ ಇಲ್ಲಿದೆ

ಲೋಕಸಭೆ ಚುನಾವಣೆ ಪ್ರಯುಕ್ತ ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಶುಕ್ರವಾರ ಮತದಾನ ನಡೆಯಲಿದ್ದು, ಯಾವ್ಯಾವ ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದೆ. ಅಖಾಡದಲ್ಲಿ ಅಭ್ಯರ್ಥಿಗಳು ಯಾರಿದ್ದಾರೆ? ಮತದಾನ ನಡೆಯುವ ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆ ಎಷ್ಟಿದೆ ಎಂಬಿತ್ಯಾದಿ ವಿವರಗಳು ಇಲ್ಲಿವೆ.

ಲೋಕಸಭೆ ಮತದಾನಕ್ಕಿನ್ನು ಒಂದೇ ದಿನ: ಎಲ್ಲೆಲ್ಲಿ ಮತದಾನ, ಯಾರು ಅಭ್ಯರ್ಥಿಗಳು, ಮತದಾರರೆಷ್ಟು? ವಿವರ ಇಲ್ಲಿದೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Apr 25, 2024 | 6:44 AM

Share

ಬೆಂಗಳೂರು, ಏಪ್ರಿಲ್ 25: ಲೋಕಸಭೆ ಚುನಾವಣೆಗೆ (Lok Sabha polls) ಕರ್ನಾಟಕದಲ್ಲಿ (Karnataka) ಮೊದಲ ಹಂತದ ಮತದಾನಕ್ಕಿನ್ನು ಕೇವಲ ಒಂದು ದಿನ ಬಾಕಿ ಇದೆ. ಶುಕ್ರವಾರ ಬೆಳಗ್ಗೆ ಈ ಹೊತ್ತಿಗೆ ಮತದಾನ ಆರಂಭವಾಗಿರಲಿದೆ. ರಾಜ್ಯದಲ್ಲಿ ಮೊದಲ ಹಂತದಲ್ಲಿ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಇದಕ್ಕಾಗಿ ಚುನಾವಣಾ ಆಯೋಗ (Elecrtin Commission) ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬಹಿರಂಗ ಪ್ರಚಾರಕ್ಕೆ ಬುಧವಾರ ಸಂಜೆಯೇ ತೆರೆ ಬಿದ್ದಿದೆ. ಇಂದು ಮನೆ ಮನೆ ಪ್ರಚಾರ ನಡೆಯಲಿದೆ.

ಬೆಂಗಳೂರು ಸೇರಿ ಹಲವು ಕ್ಷೇತ್ರಗಳಲ್ಲಿ ನಿನ್ನೆ ಸಂಜೆಯಿಂದಲೇ ಸೆಕ್ಷನ್​ 144 ಜಾರಿ ಆಗಿದೆ. ಮದ್ಯದಂಗಡಿಗಳನ್ನೂ ಕೂಡ ಬಂದ್ ಮಾಡಲಾಗಿದೆ. ಅಹಿತಕರ ಘಟನೆ ನಡೆಯದಂತೆ ಪೊಲೀಸರು ಕಟ್ಟೆಚ್ಚರ ವಹಿಸಿದ್ದು, ಮತದಾನಕ್ಕೆ ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ.

ಎಲ್ಲೆಲ್ಲಿ ಮತದಾನ, ಯಾಱರು ಅಭ್ಯರ್ಥಿಗಳು?

ಬೆಂಗಳೂರು ಕೇಂದ್ರದಲ್ಲಿ ಬಿಜೆಪಿಯಿಂದ ಪಿಸಿ ಮೋಹನ್​ ಅಭ್ಯರ್ಥಿ ಆಗಿದ್ದರೆ, ಕಾಂಗ್ರೆಸ್​ನಿಂದ ಮನ್ಸೂರ್ ಅಲಿಖಾನ್​ ಇದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ಬಿಜೆಪಿಯಿಂದ ತೇಜಸ್ವಿ ಸೂರ್ಯ, ಕಾಂಗ್ರೆಸ್​ನಿಂದ ಸೌಮ್ಯಾ ರೆಡ್ಡಿ ಅಖಾಡದಲ್ಲಿದ್ದಾರೆ. ಬೆಂಗಳೂರು ಉತ್ತರದಲ್ಲಿ ಬಿಜೆಪಿಯಿಂದ ಶೋಭಾ ಕರಂದ್ಲಾಜೆ, ಕಾಂಗ್ರೆಸ್​ನಿಂದ ರಾಜೀವ್​ ಗೌಡ, ಬೆಂಗಳೂರು ಗ್ರಾಮಾಂತರ ಬಿಜೆಪಿಯಿಂದ ಡಾ. ಸಿಎನ್​ ಮಂಜುನಾಥ್​, ಕಾಂಗ್ರೆಸ್​ನಿಂದ ಡಿಕೆ ಸುರೇಶ್, ಕೋಲಾರದಲ್ಲಿ ಜೆಡಿಎಸ್​ನಿಂದ ಮಲ್ಲೇಶ್​ ಬಾಬು, ಕಾಂಗ್ರೆಸ್​ನಿಂದ ಕೆ.ವಿ ಗೌತಮ್, ತುಮಕೂರಿನಲ್ಲಿ ಬಿಜೆಪಿಯಿಂದ ವಿ.ಸೋಮಣ್ಣ, ಕಾಂಗ್ರೆಸ್​ನಿಂದ ಮುದ್ದಹನುಮೇಗೌಡ, ಮೈಸೂರು-ಕೊಡಗಿನಲ್ಲಿ ಬಿಜೆಪಿಯಿಂದ ಯದುವೀರ್ ಒಡೆಯರ್, ಕಾಂಗ್ರೆಸ್​ನಿಂದ ಲಕ್ಷ್ಮಣ್​ ಕಣದಲ್ಲಿದ್ದಾರೆ.

ಚಾಮರಾಜನಗರದಲ್ಲಿ ಬಿಜೆಪಿಯಿಂದ ಬಾಲರಾಜ್, ಕಾಂಗ್ರೆಸ್​ನಿಂದ ಸುನೀಲ್​ ಬೋಸ್, ದಕ್ಷಿಣ ಕನ್ನಡದಲ್ಲಿ ಬಿಜೆಪಿಯಿಂದ ಕ್ಯಾ.ಬ್ರಿಜೇಶ್​ ಚೌಟ, ಕಾಂಗ್ರೆಸ್​ನಿಂದ ಪದ್ಮರಾಜ್​, ಚಿಕ್ಕಮಗಳೂರು-ಉಡುಪಿಯಲ್ಲಿ ಬಿಜೆಪಿಯಿಂದ ಕೋಟ ಶ್ರೀನಿವಾಸ್ ಪೂಜಾರಿ, ಕಾಂಗ್ರೆಸ್​ನಿಂದ ಜಯಪ್ರಕಾಶ್ ಹೆಗ್ಡೆ, ಹಾಸನದಲ್ಲಿ ಜೆಡಿಎಸ್​ನಿಂದ ಪ್ರಜ್ವಲ್​ ರೇವಣ್ಣ, ಕಾಂಗ್ರೆಸ್​ನಿಂದ ಶ್ರೇಯಸ್​, ಮಂಡ್ಯದಲ್ಲಿ ಜೆಡಿಎಸ್​ನಿಂದ ಕುಮಾರಸ್ವಾಮಿ, ಕಾಂಗ್ರೆಸ್​ನಿಂದ ಸ್ಟಾರ್​ ಚಂದ್ರು, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿಯಿಂದ ಡಾ.ಕೆ ಸುಧಾಕರ್​, ಕಾಂಗ್ರೆಸ್​ನಿಂದ ರಕ್ಷಾ ರಾಮಯ್ಯ, ಚಿತ್ರದುರ್ಗದಲ್ಲಿ ಬಿಜೆಪಿಯಿಂದ ಗೋವಿಂದ ಕಾರಜೋಳ, ಕಾಂಗ್ರೆಸ್​ನಿಂದ ಬಿ.ಎನ್​ ಚಂದ್ರಪ್ಪ ಕಣದಲ್ಲಿದ್ದಾರೆ.

ಇದನ್ನೂ ಓದಿ: ಕರ್ನಾಟಕದ 14 ಕ್ಷೇತ್ರಗಳಲ್ಲಿ ಬಹಿರಂಗ ಪ್ರಚಾರಕ್ಕೆ ತೆರೆ, 3 ದಿನ ಮದ್ಯ ಮಾರಾಟ ನಿಷೇಧ

14ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆ ಎಷ್ಟಿದೆ?

ಬೆಂಗಳೂರು ಕೇಂದ್ರ ಕ್ಷೇತ್ರದ ಮತದಾರರ ಸಂಖ್ಯೆ 23,98,910. ಇದರಲ್ಲಿ ಪುರುಷರು 12,36,897, ಮಹಿಳೆಯರು 11,61,548, ಇತರರು 465 ಮತದಾರರು ಇದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 23,17,472. ಪುರುಷರು 11,21,788, ಮಹಿಳೆಯರು 11,95,285, ಇತರರು 650. ಬೆಂಗಳೂರು ಉತ್ತರ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 33,30,270, ಪುರುಷರು 18,24,300, ಮಹಿಳೆಯರು 15,05,420, ಇತರರು 550. ಗ್ರಾಮಾಂತರ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 27,63,910.. ಪುರುಷರು 14,06,042, ಮಹಿಳೆಯರು 13,57,547, ಇತರರು 321. ಮಂಡ್ಯ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 17,79,243. ಪುರುಷರು 8,76,112, ಮಹಿಳೆಯರು 9,02,963, ಇತರರು 168. ಹಾಸನ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 17,36,610. ಪುರುಷರು 8,63,727, ಮಹಿಳೆಯರು 8,72,840, ಇತರರು 43.. ಚಾಮರಾಜನಗರ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 17,78,310.. ಪುರುಷರು 8,78,702, ಮಹಿಳೆಯರು 8,99,501, ಇತರರು 107 ಮಂದಿ ಇದ್ದಾರೆ.

ಮತದಾನದ ಸಮಯ

ನಾಳೆ 14 ಕ್ಷೇತ್ರದಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ಗಂಟೆವರೆಗೂ ಮತದಾನ ನಡೆಯಲಿದೆ. 6 ಗಂಟೆ ನಂತತರ ಮತಗಟ್ಟಿಗೆ ನೋ ಎಂಟ್ರಿ ಬೋರ್ಡ್ ಹಾಕಲಾಗುತ್ತದೆ.

ಲೋಕಸಭೆ ಚುನಾವಣೆ ಕುರಿತ ಮತ್ತಷ್ಟು ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ