AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ತೆಗೆಯುವಾಗ ಸೂಪಾ‌ ಡ್ಯಾಂಗೆ ಬಿದ್ದ ಜೋಡಿ.. ಕಾರ್ಯಾಚರಣೆ ಬಳಿಕ ಇಂದು ಶವ ಪತ್ತೆ

ರಕ್ಷಿತಾ ಮತ್ತು ಪುರುಷೋತ್ತಮ್, ಜೊಯಿಡಾ ತಾಲೂಕಿನ‌ ಗಣೇಶಗುಡಿಗೆ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಆದ್ರೆ ನಿನ್ನೆ ಸೂಪಾ‌ ಡ್ಯಾಂ ಬಳಿಯಿರುವ ಕಾಳಿ ಸೇತುವೆಯಲ್ಲಿ‌ ನಿಂತು ಸೆಲ್ಫಿ ತೆಗೆಯುತ್ತಿದ್ದ ವೇಳೆ ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಸೆಲ್ಫಿ ತೆಗೆಯುವಾಗ ಸೂಪಾ‌ ಡ್ಯಾಂಗೆ ಬಿದ್ದ ಜೋಡಿ.. ಕಾರ್ಯಾಚರಣೆ ಬಳಿಕ ಇಂದು ಶವ ಪತ್ತೆ
ಸೆಲ್ಫಿ ತೆಗೆಯುವಾಗ ಸೂಪಾ‌ ಡ್ಯಾಂಗೆ ಬಿದ್ದ ಜೋಡಿ ಶವ ಪತ್ತೆ
ಆಯೇಷಾ ಬಾನು
ಆಯೇಷಾ ಬಾನು|

Updated on:Apr 13, 2021 | 11:44 AM

Share

ಕಾರವಾರ: ಸೆಲ್ಫಿ ತೆಗೆಯಲು ಹೋಗಿ ಜೋಡಿಯೊಂದು ಸೂಪಾ‌ ಡ್ಯಾಂಗೆ ಬಿದ್ದ ಕೇಸ್​ ಸಂಬಂಧ ಜಲಾಶಯಕ್ಕೆ ಬಿದ್ದಿದ್ದ ಜೋಡಿಯ ಮೃತದೇಹ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲೂಕಿನ ಜಲಾಶಯದಲ್ಲಿ ಬೀದರ್‌ನ ರಕ್ಷಿತಾ ಚಿದ್ರಿ ಮತ್ತು ಪುರುಷೋತ್ತಮ್ ಶವ ಪತ್ತೆಯಾಗಿದೆ. ಈ ಬಗ್ಗೆ ಜೊಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ಅಂದ್ರೆ ಏಪ್ರಿಲ್ 12ರಂದು ಸೂಪಾ‌ ಡ್ಯಾಂ ಬಳಿ ಸೆಲ್ಫಿ ತೆಗೆಸಿಕೊಳ್ಳುವ ಎಂದು ಹೋಗಿದ್ದ ಜೋಡಿ ಕಾಳಿ ನದಿಗೆ ಬಿದ್ದಿದ್ರು. ಕಾರ್ಯಾಚರಣೆ ಬಳಿಕ ಇಂದು ಬೆಳಗ್ಗೆ ಜೋಡಿಯ ಮೃತದೇಹ ಪತ್ತೆಯಾಗಿದೆ. ರಕ್ಷಿತಾ ಗುಲ್ಬರ್ಗಾದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದರು. ರಕ್ಷಿತಾ ಮತ್ತು ಪುರುಷೋತ್ತಮ್, ಜೊಯಿಡಾ ತಾಲೂಕಿನ‌ ಗಣೇಶಗುಡಿಗೆ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಆದ್ರೆ ನಿನ್ನೆ ಸೂಪಾ‌ ಡ್ಯಾಂ ಬಳಿಯಿರುವ ಕಾಳಿ ಸೇತುವೆಯಲ್ಲಿ‌ ನಿಂತು ಸೆಲ್ಫಿ ತೆಗೆಯುತ್ತಿದ್ದ ವೇಳೆ ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಕಾಳಿ ನದಿಯಲ್ಲಿ ಬಿದ್ದಿದ್ದ ಜೋಡಿಗಾಗಿ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ನಿನ್ನೆಯಿಂದ ಹುಡುಕಾಡುತ್ತಿದ್ದರು. ಮುಳುಗು ತಜ್ಞರು, ಟ್ಯೂಬ್ ಬೋಟ್ ಹಾಗೂ ಕಯಾಕ್ ಮೂಲಕ ಹುಡುಕಾಟ ನಡೆದಿತ್ತು. ಸದ್ಯ ಇಂದು ಬೆಳಗ್ಗೆ ಕಾಳಿ ನದಿಯಲ್ಲಿ ಜೋಡಿಗಳ ಮೃತದೇಹ ಪತ್ತೆಯಾಗಿದೆ. ಪ್ರವಾಸಕ್ಕೆ ಬಂದ ಜೋಡಿ ಪ್ರಾಣ ಕಳೆದುಕೊಂಡಿದೆ.

ಸೂಪಾ ಆಣೆಕಟ್ಟನ್ನು ಕಾಳಿ ನದಿಗೆ ಕಟ್ಟಲಾಗಿದ್ದು, ಇದು ಕಾಳಿ ನದಿಗೆ ಕಟ್ಟಲಾದ ಅತಿ ದೊಡ್ಡ ಡ್ಯಾಂ ಆಗಿದೆ. ಅಲ್ಲದೇ ಉತ್ತರ ಕನ್ನಡ ಜಿಲ್ಲೆಯ ಅತಿದೊಡ್ಡ ಆಣೆಕಟ್ಟು ಎಂಬ ಖ್ಯಾತಿಯು ಸಹ ಸೂಪಾ ಆಣೆಕಟ್ಟಿಗಿದೆ.

ಇದನ್ನೂ ಓದಿ: ಜೋಯ್ಡಾ: ಸೆಲ್ಫಿ ಕ್ಲಿಕ್ಕಿಸುವ ಭರದಲ್ಲಿ ಸೂಪಾ ಡ್ಯಾಂಗೆ ಬಿದ್ದ ಯುವಕ-ಯುವತಿ

(Couple Body Found in Kali River in Karwar)

Published On - 11:43 am, Tue, 13 April 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ