AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಲ್ಫಿ ತೆಗೆಯುವಾಗ ಸೂಪಾ‌ ಡ್ಯಾಂಗೆ ಬಿದ್ದ ಜೋಡಿ.. ಕಾರ್ಯಾಚರಣೆ ಬಳಿಕ ಇಂದು ಶವ ಪತ್ತೆ

ರಕ್ಷಿತಾ ಮತ್ತು ಪುರುಷೋತ್ತಮ್, ಜೊಯಿಡಾ ತಾಲೂಕಿನ‌ ಗಣೇಶಗುಡಿಗೆ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಆದ್ರೆ ನಿನ್ನೆ ಸೂಪಾ‌ ಡ್ಯಾಂ ಬಳಿಯಿರುವ ಕಾಳಿ ಸೇತುವೆಯಲ್ಲಿ‌ ನಿಂತು ಸೆಲ್ಫಿ ತೆಗೆಯುತ್ತಿದ್ದ ವೇಳೆ ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಸೆಲ್ಫಿ ತೆಗೆಯುವಾಗ ಸೂಪಾ‌ ಡ್ಯಾಂಗೆ ಬಿದ್ದ ಜೋಡಿ.. ಕಾರ್ಯಾಚರಣೆ ಬಳಿಕ ಇಂದು ಶವ ಪತ್ತೆ
ಸೆಲ್ಫಿ ತೆಗೆಯುವಾಗ ಸೂಪಾ‌ ಡ್ಯಾಂಗೆ ಬಿದ್ದ ಜೋಡಿ ಶವ ಪತ್ತೆ
ಆಯೇಷಾ ಬಾನು
|

Updated on:Apr 13, 2021 | 11:44 AM

Share

ಕಾರವಾರ: ಸೆಲ್ಫಿ ತೆಗೆಯಲು ಹೋಗಿ ಜೋಡಿಯೊಂದು ಸೂಪಾ‌ ಡ್ಯಾಂಗೆ ಬಿದ್ದ ಕೇಸ್​ ಸಂಬಂಧ ಜಲಾಶಯಕ್ಕೆ ಬಿದ್ದಿದ್ದ ಜೋಡಿಯ ಮೃತದೇಹ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆ ಜೊಯಿಡಾ ತಾಲೂಕಿನ ಜಲಾಶಯದಲ್ಲಿ ಬೀದರ್‌ನ ರಕ್ಷಿತಾ ಚಿದ್ರಿ ಮತ್ತು ಪುರುಷೋತ್ತಮ್ ಶವ ಪತ್ತೆಯಾಗಿದೆ. ಈ ಬಗ್ಗೆ ಜೊಯಿಡಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿನ್ನೆ ಅಂದ್ರೆ ಏಪ್ರಿಲ್ 12ರಂದು ಸೂಪಾ‌ ಡ್ಯಾಂ ಬಳಿ ಸೆಲ್ಫಿ ತೆಗೆಸಿಕೊಳ್ಳುವ ಎಂದು ಹೋಗಿದ್ದ ಜೋಡಿ ಕಾಳಿ ನದಿಗೆ ಬಿದ್ದಿದ್ರು. ಕಾರ್ಯಾಚರಣೆ ಬಳಿಕ ಇಂದು ಬೆಳಗ್ಗೆ ಜೋಡಿಯ ಮೃತದೇಹ ಪತ್ತೆಯಾಗಿದೆ. ರಕ್ಷಿತಾ ಗುಲ್ಬರ್ಗಾದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದರು. ರಕ್ಷಿತಾ ಮತ್ತು ಪುರುಷೋತ್ತಮ್, ಜೊಯಿಡಾ ತಾಲೂಕಿನ‌ ಗಣೇಶಗುಡಿಗೆ ಪ್ರವಾಸಕ್ಕೆ ಎಂದು ಆಗಮಿಸಿದ್ದರು. ಆದ್ರೆ ನಿನ್ನೆ ಸೂಪಾ‌ ಡ್ಯಾಂ ಬಳಿಯಿರುವ ಕಾಳಿ ಸೇತುವೆಯಲ್ಲಿ‌ ನಿಂತು ಸೆಲ್ಫಿ ತೆಗೆಯುತ್ತಿದ್ದ ವೇಳೆ ನೀರಿಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ.

ಕಾಳಿ ನದಿಯಲ್ಲಿ ಬಿದ್ದಿದ್ದ ಜೋಡಿಗಾಗಿ ಪೊಲೀಸರು ಹಾಗೂ ಅಗ್ನಿಶಾಮಕದಳ ಸಿಬ್ಬಂದಿ ನಿನ್ನೆಯಿಂದ ಹುಡುಕಾಡುತ್ತಿದ್ದರು. ಮುಳುಗು ತಜ್ಞರು, ಟ್ಯೂಬ್ ಬೋಟ್ ಹಾಗೂ ಕಯಾಕ್ ಮೂಲಕ ಹುಡುಕಾಟ ನಡೆದಿತ್ತು. ಸದ್ಯ ಇಂದು ಬೆಳಗ್ಗೆ ಕಾಳಿ ನದಿಯಲ್ಲಿ ಜೋಡಿಗಳ ಮೃತದೇಹ ಪತ್ತೆಯಾಗಿದೆ. ಪ್ರವಾಸಕ್ಕೆ ಬಂದ ಜೋಡಿ ಪ್ರಾಣ ಕಳೆದುಕೊಂಡಿದೆ.

ಸೂಪಾ ಆಣೆಕಟ್ಟನ್ನು ಕಾಳಿ ನದಿಗೆ ಕಟ್ಟಲಾಗಿದ್ದು, ಇದು ಕಾಳಿ ನದಿಗೆ ಕಟ್ಟಲಾದ ಅತಿ ದೊಡ್ಡ ಡ್ಯಾಂ ಆಗಿದೆ. ಅಲ್ಲದೇ ಉತ್ತರ ಕನ್ನಡ ಜಿಲ್ಲೆಯ ಅತಿದೊಡ್ಡ ಆಣೆಕಟ್ಟು ಎಂಬ ಖ್ಯಾತಿಯು ಸಹ ಸೂಪಾ ಆಣೆಕಟ್ಟಿಗಿದೆ.

ಇದನ್ನೂ ಓದಿ: ಜೋಯ್ಡಾ: ಸೆಲ್ಫಿ ಕ್ಲಿಕ್ಕಿಸುವ ಭರದಲ್ಲಿ ಸೂಪಾ ಡ್ಯಾಂಗೆ ಬಿದ್ದ ಯುವಕ-ಯುವತಿ

(Couple Body Found in Kali River in Karwar)

Published On - 11:43 am, Tue, 13 April 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?