AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ದೃಢಪಟ್ಟರೂ ಕೇರ್​ ಸೆಂಟರ್​ಗೆ ಬಾರದೇ ಕಾಡಿಗೆ ಓಡಿದ ದಂಪತಿ; ಬಿಪಿಎಲ್​ ಕಾರ್ಡ್​, ವಿದ್ಯುತ್ ಕಡಿತಗೊಳಿಸಿದ ಅಧಿಕಾರಿಗಳು

ತಹಶೀಲ್ದಾರ, ಪೊಲೀಸ್ ಅಧಿಕಾರಿಗಳ ಮನವಿಗೂ ಬಗ್ಗದೇ ಪರಾರಿಯಾಗಿ ದೂರದ ಗುಡ್ಡಕ್ಕೆ ಹೋಗಿ ಅಜ್ಞಾತ ಸ್ಥಳದಲ್ಲಿ ಅವಿತುಕೊಂಡಿರುವ ದಂಪತಿ ನಡೆಯಿಂದ ಬೇಸತ್ತ ಅಧಿಕಾರಿಗಳು ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸಿ, ಮನೆಯ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದಾರೆ.

ಕೊರೊನಾ ದೃಢಪಟ್ಟರೂ ಕೇರ್​ ಸೆಂಟರ್​ಗೆ ಬಾರದೇ ಕಾಡಿಗೆ ಓಡಿದ ದಂಪತಿ; ಬಿಪಿಎಲ್​ ಕಾರ್ಡ್​, ವಿದ್ಯುತ್ ಕಡಿತಗೊಳಿಸಿದ ಅಧಿಕಾರಿಗಳು
ಜಾಗೃತಿ ಮೂಡಿಸಲು ಗ್ರಾಮಕ್ಕೆ ಬಂದಿದ್ದ ಅಧಿಕಾರಿಗಳು
Skanda
|

Updated on: May 29, 2021 | 7:32 AM

Share

ರಾಯಚೂರು: ಕೊರೊನಾ ಪಾಸಿಟಿವ್​ ದೃಢಪಟ್ಟ ನಂತರವೂ ಕೊವಿಡ್​ ಕೇರ್ ಸೆಂಟರ್​ಗೆ ತೆರಳಲು ಒಪ್ಪದೆ ಪರಾರಿಯಾಗಿರುವ ದಂಪತಿ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಿಪಿಎಲ್​ ಕಾರ್ಡ್​, ಮನೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲ್ಲೂಕಿನ ವೀರಗೋಟ ಗ್ರಾಮದಲ್ಲಿ ನಡೆದಿದೆ. ದಂಪತಿಗೆ ಕೊರೊನಾ ಇರುವುದು ಖಚಿತವಾದ ಹಿನ್ನೆಲೆ ಮನೆಯ ಬಳಿಗೆ ಬಂದ ಅಧಿಕಾರಿಗಳು ಕೊವಿಡ್​ ಕೇರ್ ಸೆಂಟರ್​ಗೆ ದಾಖಲಾಗುವಂತೆ ಎಷ್ಟೇ ಕೇಳಿಕೊಂಡರೂ ಅದಕ್ಕೊಪ್ಪದ ಗಂಡ, ಹೆಂಡತಿ ಪರಾರಿಯಾಗಿದ್ದಾರೆ.

ಕೊರೊನಾ ಪೀಡಿತ ದಂಪತಿಯನ್ನು ದೇವಪ್ಪ ಮತ್ತು ಹಮನಂತಿ ಎಂದು ಗುರುತಿಸಲಾಗಿದ್ದು, ಅವರು ಕೊರೊನಾ ಬಗ್ಗೆ ನಿರ್ಲಕ್ಷ್ಯ ತೋರಿದ ಕಾರಣ ಕೊವಿಡ್-19 ವಿಪತ್ತು ಕಾಯ್ದೆ ಉಲ್ಲಂಘನೆ ಆರೋಪದ ಮೇಲೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಹಶೀಲ್ದಾರ, ಪೊಲೀಸ್ ಅಧಿಕಾರಿಗಳ ಮನವಿಗೂ ಬಗ್ಗದೇ ಪರಾರಿಯಾಗಿ ದೂರದ ಗುಡ್ಡಕ್ಕೆ ಹೋಗಿ ಅಜ್ಞಾತ ಸ್ಥಳದಲ್ಲಿ ಅವಿತುಕೊಂಡಿರುವ ದಂಪತಿ ನಡೆಯಿಂದ ಬೇಸತ್ತ ಅಧಿಕಾರಿಗಳು ಬಿಪಿಎಲ್ ಪಡಿತರ ಚೀಟಿ ರದ್ದುಪಡಿಸಿ, ಮನೆಯ ವಿದ್ಯುತ್ ಸಂಪರ್ಕ ಸ್ಥಗಿತಗೊಳಿಸಿದ್ದಾರೆ. ಅಲ್ಲದೇ ಅವರು ಪಡೆಯುತ್ತಿದ್ದ ಸರ್ಕಾರಿ ಸೌಲಭ್ಯ ರದ್ದುಪಡಿಸಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಗೆಡ್ಡೆ ಗೆಣಸು ಸಂಗ್ರಹಕ್ಕೆ ಗುಡ್ಡಕ್ಕೆ ತರೆಳಿದ ವ್ಯಕ್ತಿ ಮೇಲೆ ಹುಲಿ ದಾಳಿ ಮೈಸೂರು: ಲಾಕ್​ಡೌನ್​ ಹಿನ್ನೆಲೆ ಗೆಡ್ಡೆ ಗೆಣಸು ಸಂಗ್ರಹಕ್ಕೆಂದು ಅರಣ್ಯ ಪ್ರದೇಶಕ್ಕೆ ತೆರಳಿದ್ದ ರಾಜು ಎಂಬುವವರ ಮೇಲೆ ಹುಲಿ ದಾಳಿ ಮಾಡಿದೆ. ಹೆಚ್​.ಡಿ ಕೋಟೆ ತಾಲ್ಲೂಕು ವ್ಯಾಪ್ತಿಯ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ಅರಣ್ಯ ಪ್ರದೇಶದಲ್ಲಿ ಘಟನೆ ನಡೆದಿದೆ. 56 ವರ್ಷ ವಯಸ್ಸಿನ ರಾಜು ಅರಣ್ಯ ಪ್ರದೇಶಕ್ಕೆ ಸಮೀಪದ ಹಾಡಿ ನಿವಾಸಿಯಾಗಿದ್ದು ಗೆಡ್ಡೆ ಗೆಣಸು ಸಂಗ್ರಕ್ಕೆಂದು ಕಾಡಿನೊಳಗೆ ಹೋದಾಗ ಹುಲಿ ದಾಳಿ ನಡೆಸಿದೆ. ದಾಳಿ ವೇಳೆ ರಾಜು ಕೂಗಿಕೊಂಡ ಕಾರಣ ಹುಲಿ ಸ್ಥಳದಿಂದ ಕಾಲ್ಕಿತ್ತಿದ್ದು, ನಂತರ ನಿತ್ರಾಣಗೊಂಡರೂ ಘಟನಾ ಸ್ಥಳದಿಂದ ಕಾಲು ನಡಿಗೆಯಲ್ಲೇ ನಡೆದು ಬಂದ ರಾಜು ಹಾಡಿ ಸೇರಿದ್ದಾರೆ. ಹುಲಿ ದಾಳಿಯಿಂದ ಎದೆ ಭಾಗ ಮತ್ತು ತೊಡೆಗಳಿಗೆ ಗಾಯವಾಗಿದ್ದು, ಹೆಚ್.ಡಿ ಕೋಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

TIGER ATTACK

ಹುಲಿ ದಾಳಿಗೆ ಒಳಗಾದ ವ್ಯಕ್ತಿ

ಇದನ್ನೂ ಓದಿ: ಅಧಿಕಾರಿಗಳಿಗೆ ಸುಳ್ಳು ಹೇಳಿಕಳಿಸಿ ಅಪ್ರಾಪ್ತ ಮಗಳಿಗೆ ಮದುವೆ ಮಾಡಿದ ಪೋಷಕರು.. ರಕ್ಷಣೆ ಬಳಿಕ ಬಾಲಕಿಗೆ ಕೊರೊನಾ ಪಾಸಿಟಿವ್ 

ಕೊರೊನಾ ಭಯದ ನಡುವೆ ಮೈಸೂರು ಕಾಡಂಚಿನ ಗ್ರಾಮದ ಜನರಲ್ಲಿ ಹೆಚ್ಚಾದ ಹುಲಿ ಭಯ, ಕೂಂಬಿಂಗ್ ನಡೆಸಿದರೂ ಪ್ರಯೋಜನವಾಗಿಲ್ಲ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?