AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi News: ಫೇಸ್‌ಬುಕ್ ಲೈವ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹೊರಗುತ್ತಿಗೆ ನೌಕರ

ವಕೀಲರೊಬ್ಬರ ಕಿರುಕುಳ ತಾಳಲಾರದೆ ಹೊರಗುತ್ತಿಗೆ ನೌಕರ ಫೇಸ್‌ಬುಕ್​​ ಲೈವ್​ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Belagavi News: ಫೇಸ್‌ಬುಕ್ ಲೈವ್‌ನಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಹೊರಗುತ್ತಿಗೆ ನೌಕರ
ಆತ್ಮಹತ್ಯೆಗೆ ಯತ್ನಿಸಿದ ಹಾಲಪ್ಪ ಸುರಾಣಿ
Vinayak Hanamant Gurav
| Edited By: |

Updated on:Jul 19, 2023 | 10:46 AM

Share

ಚಿಕ್ಕೋಡಿ: ವಕೀಲರೊಬ್ಬರ ಕಿರುಕುಳ ತಾಳಲಾರದೆ ಹೊರಗುತ್ತಿಗೆ ನೌಕರ ಫೇಸ್‌ಬುಕ್​​ ಲೈವ್​ ಬಂದು (Facebook Live) ವಿಷ ಸೇವಿಸಿ ಆತ್ಮಹತ್ಯೆಗೆ (Sucide) ಯತ್ನಿಸಿದ್ದಾರೆ. ಹಾಲಪ್ಪ ಸುರಾಣಿ ಹೊರಗುತ್ತಿಗೆ ನೌಕರ. ಇನ್ನು ಪತಿ ವಿಷಸೇವಿಸಿದ್ದನ್ನು ಕಂಡು ಪತಿ ಮಹಾದೇವಿ ಸುರಾಣಿ ಕೂಡ ವಿಷ ಸೇವಿಸಿದ್ದಾಳೆ. ಸದ್ಯ ಹಾಲಪ್ಪ ಸುರಾಣಿ ಹಾಗೂ ಪತ್ನಿ ಮಹಾದೇವಿ ಸುರಾಣಿ ಅವರನ್ನು ಹಾರೂಗೇರಿ (Harugeri) ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗಾವಿ (Belagavi) ಜಿಲ್ಲೆಯ ರಾಯಬಾಗ (Raibag) ತಾಲೂಕಿನ ಸವಸುದ್ದಿ ಗ್ರಾಮದ ಹಾಲಪ್ಪ ಸುರಾಣಿ ರಾಯಬಾಗ ತಹಶಿಲ್ದಾರ ಕಚೇರಿಯ ಭೂ ದಾಖಲಾತಿ ವಿಭಾಗದಲ್ಲಿ ಹೊರಗುತ್ತಿಗೆ ಆದಾರದ ಮೇಲೆ ಕೆಲಸ ಮಾಡುತ್ತಿದ್ದಾರೆ.

ಇವರಿಗೆ ರಾಯಬಾಗದ ವಕೀಲ ಸದಾಶಿವ ನಿಡೋಣಿ ಎಂಬುವವರು 2018ರಲ್ಲಿ ಪರಿಚಯವಾಗುತ್ತಾರೆ. ನಂತರ ಭೂ ದಾಖಲೆ ವಿಚಾರಕ್ಕೆ ಇಬ್ಬರ ನಡುವೆ ಮನಸ್ತಾಪವಾಗಿದೆ. ಈ ಹಿನ್ನೆಲೆ ಹಾಲಪ್ಪ ಸುರಾಣಿ ಮೇಲೆ ವಕೀಲ ಸದಾಶಿವ ನಿಡೋಣಿ ಪ್ರಕರಣ ದಾಖಲಿಸಿದ್ದಾರೆ.

ಈ ವಿಚಾರವಾಗಿ ಹಾಲಪ್ಪ ಸುರಾಣಿ ತಡರಾತ್ರಿ ಫೇಸ್‌ಬುಕ್ ಲೈವ್‌ ಬಂದು “ನನ್ನ ಮೇಲೆ ವಕೀಲ ಸದಾಶಿವ ನಿಡೋಣಿ ಸುಳ್ಳು ಪ್ರಕರಣ ದಾಖಲಿಸಿ 2018 ರಿಂದ ಮಾನಸಿಕ ಕಿರುಕುಳ ನೀಡುತ್ತಿದ್ದಾರೆ. ಅಲ್ಲದೆ ಸದಾಶಿವ ನಿಡೋಣಿ ಹಾಲಪ್ಪ ಸುರಾಣಿ ಅವರ ಕಛೇರಿಗೆ ಬಂದು ಅವಾಚ್ಯವಾಗಿ ಬೈದು, 10 ಲಕ್ಷ ರೂ. ನೀಡುವಂತೆ ಬೆದರಿಕೆ ಹಾಕಿದ್ದಾರೆ. 10 ಲಕ್ಷ ನೀಡಲು ಆಗಲ್ಲಾ ಎಂದಿದ್ದಕ್ಕೆ ಕೊಡದೆ ಹೋದರೆ ಜೈಲಿಗೆ ಕಳಿಸುವುದಾಗಿ ಹೆದರಿಸಿದ್ದರು. ಅವರಿಗೆ ಹೆದರಿ ನಾನು ಮನೆಯಿಂದ ಹೊರಗಡೆ ಇದ್ದೆ ಜು.18 ರಂದು ಬೇಲ್ ಸಿಕ್ಕ ಬಳಿಕ ಮನೆಗೆ ಬಂದಿದ್ದೇನೆ” ಎಂದು ಹೇಳಿದರು.

ಇದನ್ನೂ ಓದಿ: Belagavi News: ಗಂಡನ ಪಾದ ಪೂಜೆ ಮಾಡಿ ಬಳಿಕ ದೇಗುಲಕ್ಕೆ ಕರೆದೊಯ್ದು ಪತಿಯನ್ನು ಬಲಿ ಕೊಟ್ಟ ಪತ್ನಿ

ಹೆಂಡತಿ ಮಕ್ಕಳ ಮುಖ ನೋಡಿಕೊಂಡು ಸಾಯಲು ನಿರ್ಧಾರ ಮಾಡಿದ್ದೇನೆ. ನಮ್ಮ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿ ಹಾಲಪ್ಪ ಸುರಾಣ ವಿಷ ಸೇವಿಸಿದ್ದಾರೆ. ಇದನ್ನು ಕಂಡ ಪತ್ನಿ ತಾನು ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹಾರೂಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ.

ಜಿಲ್ಲಾಸ್ಪತ್ರೆ 4ನೇ ಮಹಡಿಯಿಂದ ಬಿದ್ದು ರೋಗಿ ಸಾವು

ಕೊಡಗು: ಜಿಲ್ಲಾಸ್ಪತ್ರೆ ನಾಲ್ಕನೇ ಮಹಡಿಯಿಂದ ಬಿದ್ದು ಖಾಸಗಿ ಆಸ್ಪತ್ರೆಯ ವೈದ್ಯ ಸಾವನ್ನಪ್ಪಿದ್ದಾನೆ. ವೈದ್ಯ ಪೂಣಚ್ಚ (80) ಮೃತ ದುರ್ದೈವಿ. ಡಾ.ಪೂಣಚ್ಚ ಕಣ್ಣಿನಪೊರೆ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ರಾತ್ರಿ ನಿದ್ದೆ ಮಂಪರಿನಲ್ಲಿ ಆಕಸ್ಮಿಕವಾಗಿ ಬಿದ್ದಿರುವ ಸಾಧ್ಯತೆ ಇದೆ. ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:42 am, Wed, 19 July 23

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?