AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ; ಮುರುಗೇಶ್ ನಿರಾಣಿ ವಿರುದ್ಧ ಎಫ್​ಐಆರ್ ಸಾಧ್ಯತೆ

ಗೋವಿಂದರಾಮ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ಇದೀಗ, ಜನಪ್ರತಿನಿಧಿಗಳ ಕೋರ್ಟ್ ಆದೇಶ ಹಿನ್ನೆಲೆ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತನಿಖೆ ನಡೆಯಲಿದೆ. ಹಾಗೂ ಎಫ್ಐಆರ್ ಆಗುವ ಸಾಧ್ಯತೆ ಇದೆ ಎಂದೂ ಅಂದಾಜಿಸಲಾಗಿದೆ.

ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ; ಮುರುಗೇಶ್ ನಿರಾಣಿ ವಿರುದ್ಧ ಎಫ್​ಐಆರ್ ಸಾಧ್ಯತೆ
ಸಚಿವ ಮುರುಗೇಶ್​ ನಿರಾಣಿ
TV9 Web
| Updated By: ganapathi bhat|

Updated on: Aug 18, 2021 | 10:24 PM

Share

ಬೆಂಗಳೂರು: ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ ವಿಚಾರಕ್ಕೆ ಸಂಬಂಧಿಸಿ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತನಿಖೆಗೆ ಕೋರ್ಟ್ ಆದೇಶ ನೀಡಿದೆ. ಸಚಿವ ಮುರುಗೇಶ್ ನಿರಾಣಿ ಮೇಲಿರುವ ಈ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಬೇಕು ಎಂದು ಕೊಡಿಗೇಹಳ್ಳಿ ಠಾಣೆ ಪೊಲೀಸರಿಗೆ ಕೋರ್ಟ್ ಸೂಚನೆ ಕೊಟ್ಟಿದೆ. ಸಪ್ಟೆಂಬರ್ 13 ರ ಒಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಲಾಗಿದೆ. ಕಳೆದ ವರ್ಷ ವಾಟ್ಸಾಪ್ ಗ್ರೂಪ್‌ನಲ್ಲಿ ನಿರಾಣಿ ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ ಹಂಚಿದ್ದರು. ಈ ಸಂಬಂಧ, ಐಪಿಸಿ ಸೆಕ್ಷನ್ 153 A, 295, 295-A ಅಡಿ ಕ್ರಮ ಕೋರಿ ದೂರು ಸಲ್ಲಿಸಲಾಗಿತ್ತು. ಗೋವಿಂದರಾಮ್ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. ಇದೀಗ, ಜನಪ್ರತಿನಿಧಿಗಳ ಕೋರ್ಟ್ ಆದೇಶ ಹಿನ್ನೆಲೆ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತನಿಖೆ ನಡೆಯಲಿದೆ. ಹಾಗೂ ಎಫ್ಐಆರ್ ಆಗುವ ಸಾಧ್ಯತೆ ಇದೆ ಎಂದೂ ಅಂದಾಜಿಸಲಾಗಿದೆ.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಝೀರೋ ಟ್ರಾಫಿಕ್ ಬಳಸಿ ಆಗಮಿಸಿದ ಹಿನ್ನೆಲೆಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಾಗಿದೆ. ಪಿಐಎಲ್ ವಿಚಾರಣೆಯನ್ನು ಇಂದು (ಆಗಸ್ಟ್ 18) ನಡೆಸಲಾಗಿದೆ. ವಕೀಲ ಬಾಲಾಜಿ ನಾಯ್ಡು ಸಲ್ಲಿಸಿದ್ದ ಪಿಐಎಲ್ ವಿಚಾರಣೆ ನಡೆಸಲಾಗಿದೆ. ಶಶಿಕಲಾ ಜೊಲ್ಲೆಗೆ ಏರ್​ಪೋರ್ಟ್​ನಿಂದ ರಾಜಭವನದವರೆಗೂ ಝೀರೋ ಟ್ರಾಫಿಕ್ ನೀಡಲಾಗಿತ್ತು. ಹೀಗೆ ಝೀರೋ ಟ್ರಾಫಿಕ್ ಒದಗಿಸಲು ಮಾನದಂಡವೇನು? ಝೀರೋ ಟ್ರಾಫಿಕ್​ಗೆ ಹೇಗೆ ಅನುಮತಿ ನೀಡಿದ್ದೀರಿ ಎಂದು ಕೇಳಿ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ನೋಟಿಸ್ ಜಾರಿಗೊಳಿಸಿದೆ. ಈ ಬಗ್ಗೆ ವಿವರಣೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ಕೊಡಲಾಗಿದೆ.

ಮಕ್ಕಳ ಮೇಲೆ ಸುಡುವ ಎಣ್ಣೆ ಸುರಿದಿದ್ದ ಮಹಿಳೆಗೆ ಶಿಕ್ಷೆ ಮಕ್ಕಳ ಮೇಲೆ ಸುಡುವ ಎಣ್ಣೆ ಸುರಿದಿದ್ದ ಮಹಿಳೆಗೆ ಐದು ವರ್ಷ ಜೈಲು ಶಿಕ್ಷೆ ಹಾಗೂ ಎರಡು ಲಕ್ಷ ರೂಪಾಯಿ ದಂಡ ವಿಧಿಸಿ ಕಲಬುರಗಿ ಜಿಲ್ಲಾ ಒಂದನೇ ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಶ್ರಿದೇವಿ ಕೊರವಾರ (57) ಎಂಬಾಕೆ ಶಿಕ್ಷೆಗೆ ಗುರಿಯಾದ ಮಹಿಳೆ ಆಗಿದ್ದಾಳೆ. 2019 ರ ಮಾರ್ಚ್ 25 ರಂದು ನಡೆದಿದ್ದ ಘಟನೆಯಲ್ಲಿ, ಅಹನಾ, ಪಾರ್ವತಿ ಎಂಬ ಇಬ್ಬರು ಮಕ್ಕಳ ಮೇಲೆ ಈ ಮಹಿಳೆ ಸುಡುವ ಎಣ್ಣೆ ಸುರಿದಿದ್ದಳು. ಈ ಬಗ್ಗೆ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ತೃತೀಯ ಲಿಂಗಿಗಳಿಗೆ ಸರ್ಕಾರಿ ನಿಗಮಗಳಲ್ಲೂ ಶೇಕಡಾ 1ರಷ್ಟು ಮೀಸಲಾತಿ ಸೂಕ್ತ: ಕರ್ನಾಟಕ ಹೈಕೋರ್ಟ್

Covishield: ಎರಡು ಡೋಸ್ ಕೊವಿಡ್ ಲಸಿಕೆ ಪಡೆದರೂ ಮತ್ತೆ ವ್ಯಾಕ್ಸಿನ್ ಬೇಕೆಂದು ಕೋರ್ಟ್ ಮೊರೆ ಹೋದ ಕೇರಳಿಗ!

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ