ಕರ್ನಾಟಕದ ಮೂವರು ಶಂಕಿತ ಉಗ್ರರನ್ನ NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಎಲ್‌ಇಟಿ ಭಯೋತ್ಪಾದಕ ಟಿ ನಾಸೀರ್‌ಗೆ ನೆರವು ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರನ್ನ ಎನ್‌ಐಎ (NIA) ಅಧಿಕಾರಿಗಳು ಮಂಗಳವಾರ ಬಂಧಿಸಿದ್ದಾರೆ. ಬೆಂಗಳೂರು ಮತ್ತು ಕೋಲಾರದಲ್ಲಿ 5 ಕಡೆ ದಾಳಿ ನಡೆಸಿ ಮೂವರನ್ನ ಬಂಧಿಸಿ ವಿಚಾರಣೆಗೊಳಪಡಿಸಿದಾಗ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಹೀಗಾಗಿ ಇನ್ನಷ್ಟು ಹೆಚ್ಚಿನ ತನಿಖೆಗಾಗಿ ಮೂವರನ್ನು ಕೋರ್ಟ್​ ಗೆ ಹಾಜರುಪಡಿಸಿ ವಶಕ್ಕೆ ನೀಡುವಂತೆ ಎನ್​ಐಎ ಮನವಿ ಮಾಡಿದ್ದು, ಕೋರ್ಟ್​ ಸಹ ಮೂವರನ್ನ ಎನ್​ಐಎ ವಶಕ್ಕೆ ನೀಡಿದೆ.

ಕರ್ನಾಟಕದ ಮೂವರು ಶಂಕಿತ ಉಗ್ರರನ್ನ  NIA ಕಸ್ಟಡಿಗೆ ನೀಡಿ ಕೋರ್ಟ್ ಆದೇಶ
Chand Pasha And Nagaraj
Edited By:

Updated on: Jul 09, 2025 | 2:21 PM

ಬೆಂಗಳೂರು, (ಜುಲೈ 09): ಎನ್​ಐಎ ಅಧಿಕಾರಿಗಳು ನಿನ್ನೆ(ಜುಲೈ 08) ಬೆಂಗಳೂರು (Bengaluru) ಹಾಗೂ ಕೋಲಾರದಲ್ಲಿ (Kolar) ದಾಳಿ ನಡೆಸಿದ್ದು, ಉಗ್ರರಿಗೆ ನೆರವು ನೀಡಿದ ಆರೋಪದಡಿ ಮೂವರು ಶಂಕಿತ ಉಗ್ರರನ್ನ (suspected terrorists) ಬಂಧಿಸಿದ್ದಾರೆ. ಇದೀಗ ಕೋರ್ಟ್,​ ಸಹ ಬಂಧಿತ ಮನೋವೈದ್ಯ ನಾಗರಾಜ್‌, ಚಾಂದ್ ಪಾಷಾ ಹಾಗೂ ಅನೀಸ್ ಫಾತೀಮಾಳನ್ನು 6 ದಿನಗಳ ಕಾಲ ಎನ್​ಐಎ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಜುಲೈ 14ರವರೆಗೆ ಕಸ್ಟಡಿಗೆ ನೀಡಿ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ NIA ವಿಶೇಷ ಕೋರ್ಟ್ ಆದೇಶಿಸಿದ್ದು, ಪ್ರಕರಣ ಸಂಬಂಧ ಎನ್​ಐಎ ಅಧಿಕಾರಿಗಳು ತನಿಖೆ ಇನ್ನಷ್ಟು ತೀವ್ರಗೊಳಿಸಲಿದ್ದಾರೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮನೋವೈದ್ಯ ನಾಗರಾಜ್, ಎಎಸ್​ಐ ಚಾಂದ್ ಪಾಷಾ ಮತ್ತು ಶಂಕಿತ ಉಗ್ರನ ತಾಯಿ ಫಾತೀಮಾಳನ್ನು ಎನ್​ಐಎ ಅಧಿಕಾರಿಗಳು ನಿನ್ನೆ(ಜುಲೈ 09) ಬಂಧಿಸಿದ್ದರು. ಇವರೆಲ್ಲರೂ ದಕ್ಷಿಣ ಭಾರತದ ಹಲವು ಸ್ಫೋಟಗಳ ಮಾಸ್ಟರ್‌ಮೈಂಡ್ ನಾಸೀರ್‌ ಜೊತೆ ಸಂಪರ್ಕ ಹೊಂದಿದ್ದರು ಎಂದು ಸುಳಿವು ಸಿಕ್ಕಿದ್ದು, ಈ ಸಂಬಂಧ ಎನ್​ಐಎ, ಕೋರ್ಟ್​  ಅನುಮತಿ ಮೇರೆಗೆ ವಶಕ್ಕೆ ಪಡೆದುಕೊಂಡು ಹೆಚ್ಚಿನ ತನಿಖೆ ನಡೆಸಲಿದ್ದಾರೆ.

ಇದನ್ನೂ ಓದಿ: ಬೆಂಗಳೂರು, ಕೋಲಾರದಲ್ಲಿ NIA ದಾಳಿ: ಒಟ್ಟು ಮೂವರು ಶಂಕಿತ ಉಗ್ರರ ಬಂಧನ..!

ಉಗ್ರ ನಾಸೀರ್, ಕೊಲೆ ಕೇಸ್​​ನಲ್ಲಿ ಶಾಮೀಲಾಗಿದ್ದ ಯುವಕರ ತಂಡ ಕಟ್ಟಿದ್ದ. ಜುನೈದ್, ಮೊಹಮ್ಮದ್ ಹರ್ಷದ್ ಖಾನ್, ಸುಹೈಲ್, ಫೈಜಲ್, ಜಾಹಿದ್ ತಬ್ರೇಜ್, ಮುದಾಸಿರ್ ಇರುವ ತಂಡ ರೆಡಿ ಮಾಡಿದ್ದ. ಈ ತಂಡ ಗ್ರೆನೇಡ್, ಪಿಸ್ತೂಲ್, ಸ್ಫೋಟಕ ವಸ್ತುಗಳ ಸಮೇತ ಬೆಂಗಳೂರಿನ ಆರ್​.ಟಿ.ನಗರ, ಹೆಬ್ಬಾಳದಲ್ಲಿ ಸಿಕ್ಕಿ ಬಿದ್ದಿತ್ತು. ಇದೀಗ ಪ್ರಮುಖ ಆರೋಪಿ ಜುನೈದ್​ಗಾಗಿ ಎನ್​ಐಎ ಹುಡುಕಾಟ ನಡೆಸುತ್ತಿದೆ. ಈ ವಿಚಾರ ಸಂಬಂಧ ದಾಳಿ ನಡೆಸಿದಾಗ ಡಾ. ನಾಗರಾಜ್, ಚಂದ್ ಪಾಷಾ ಹಾಗೂ ಅನೀಸ್ ಫಾತೀಮಾ ಸಿಕ್ಕಿಬಿದ್ದಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:14 pm, Wed, 9 July 25