DySp ಗಣಪತಿ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದ ಕೋರ್ಟ್

ಬೆಂಗಳೂರು: ರಾಜ್ಯದ ರಾಜಕೀಯ ವಲಯದಲ್ಲಿ ಹೆಚ್ಚಿನ ಸಂಚಲನ ಮೂಡಿಸಿದ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟನ್ನು ನ್ಯಾಯಾಲಯ ತಿರಸ್ಕರಿಸಿದೆ. ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ. ಕೆ.ಜೆ.ಜಾರ್ಜ್, ಐಪಿಎಸ್‌ ಅಧಿಕಾರಿಗಳಾದ ಎಂ.ಎಂ.ಪ್ರಸಾದ್, ಪ್ರಣಬ್ ಮೊಹಂತಿಗೆ ನೋಟಿಸ್ ನೀಡಿದೆ. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಪುತ್ರ ನೇಹಾಲ್ ಅರ್ಜಿ ಸಲ್ಲಿಸಿದ್ದರು. ಸದ್ಯ ಈಗ ಬಿ ರಿಪೋರ್ಟನ್ನು ತಿರಸ್ಕರಿಸಿದ ನ್ಯಾಯಾಲಯ ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ.

DySp ಗಣಪತಿ ಆತ್ಮಹತ್ಯೆ ಪ್ರಕರಣ: ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದ ಕೋರ್ಟ್
ಆಯೇಷಾ ಬಾನು

Updated on: Aug 28, 2020 | 1:40 PM

ಬೆಂಗಳೂರು: ರಾಜ್ಯದ ರಾಜಕೀಯ ವಲಯದಲ್ಲಿ ಹೆಚ್ಚಿನ ಸಂಚಲನ ಮೂಡಿಸಿದ ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಸಲ್ಲಿಸಿದ್ದ ಬಿ ರಿಪೋರ್ಟನ್ನು ನ್ಯಾಯಾಲಯ ತಿರಸ್ಕರಿಸಿದೆ.

ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ. ಕೆ.ಜೆ.ಜಾರ್ಜ್, ಐಪಿಎಸ್‌ ಅಧಿಕಾರಿಗಳಾದ ಎಂ.ಎಂ.ಪ್ರಸಾದ್, ಪ್ರಣಬ್ ಮೊಹಂತಿಗೆ ನೋಟಿಸ್ ನೀಡಿದೆ. ಸಿಬಿಐ ಈ ಪ್ರಕರಣದ ತನಿಖೆ ನಡೆಸಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಗಣಪತಿ ಪುತ್ರ ನೇಹಾಲ್ ಅರ್ಜಿ ಸಲ್ಲಿಸಿದ್ದರು. ಸದ್ಯ ಈಗ ಬಿ ರಿಪೋರ್ಟನ್ನು ತಿರಸ್ಕರಿಸಿದ ನ್ಯಾಯಾಲಯ ಆರೋಪಿಗಳಿಗೆ ಹಾಜರಾಗಲು ಸಮನ್ಸ್ ನೀಡಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us