AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಸ್ವಾಧೀನಕ್ಕೆ ಪರಿಹಾರ ನೀಡುವಲ್ಲಿ ವಿಳಂಬ: ಜಪ್ತಿಯಾಯ್ತು ಮೈಸೂರು ಮುಡಾ ಆಯುಕ್ತರ ಕಾರು!

ದಶಕಗಳ ಹಿಂದೆ ಬಡಾವಣೆ ನಿರ್ಮಾಣಕ್ಕೆ ರೈತರ ಜಮೀನನ್ನು ಮುಡಾ ಭೂ ಸ್ವಾಧೀನ ಮಾಡಿಕೊಂಡಿತ್ತು. ಚಿನ್ನಸ್ವಾಮಿ ಎಂಬವರ 1 ಎಕರೆ 25 ಗುಂಟೆ ಜಮೀನನ್ನು ಮುಡಾ ಸ್ವಾಧೀನ ಪಡಿಸಿಕೊಂಡಿತ್ತು.

ಭೂ ಸ್ವಾಧೀನಕ್ಕೆ ಪರಿಹಾರ ನೀಡುವಲ್ಲಿ ವಿಳಂಬ: ಜಪ್ತಿಯಾಯ್ತು ಮೈಸೂರು ಮುಡಾ ಆಯುಕ್ತರ ಕಾರು!
ಮುಡಾ ಕಾರ್ ಜಪ್ತಿ
TV9 Web
| Edited By: |

Updated on:Apr 06, 2022 | 8:36 PM

Share

ಮೈಸೂರು: ಭೂ ಸ್ವಾಧೀನಕ್ಕೆ ಹೆಚ್ಚುವರಿ ಪರಿಹಾರ ನೀಡುವಲ್ಲಿ ವಿಳಂಬವಾದ ಕಾರಣ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರ ಕಾರು ಜಪ್ತಿ ಮಾಡಲಾಗಿದೆ. ಚಿನ್ನಸ್ವಾಮಿ ಎಂಬುವರ ಆಸ್ತಿಗೆ ಪರಿಹಾರ ನೀಡುವಲ್ಲಿ ಮುಡಾ ತಡಮಾಡಿತ್ತು. ಪರಿಹಾರಧನ ನೀಡುವುದಕ್ಕೆ ವಿಳಂಬವಾದ ಹಿನ್ನೆಲೆಯಲ್ಲಿ ಮುಡಾಗೆ ಸಂಬಂಧಪಟ್ಟ ವಾಹನಗಳನ್ನು ಜಪ್ತಿ ಮಾಡುವ ಬಗ್ಗೆ ಕೋರ್ಟ್ ಆದೇಶ ನೀಡಿದೆ.

ದಶಕಗಳ ಹಿಂದೆ ಬಡಾವಣೆ ನಿರ್ಮಾಣಕ್ಕೆ ರೈತರ ಜಮೀನನ್ನು ಮುಡಾ ಭೂ ಸ್ವಾಧೀನ ಮಾಡಿಕೊಂಡಿತ್ತು. ಚಿನ್ನಸ್ವಾಮಿ ಎಂಬವರ 1 ಎಕರೆ 25 ಗುಂಟೆ ಜಮೀನನ್ನು ಮುಡಾ ಸ್ವಾಧೀನ ಪಡಿಸಿಕೊಂಡಿತ್ತು. ನಾಲ್ಕನೇ ಎಸಿಜೆ ನ್ಯಾಯಾಲಯ ಭೂ ಸ್ವಾಧೀನಕ್ಕೆ ರೈತರಿಗೆ ಪರಿಹಾರ ನೀಡುವಂತೆ ಆದೇಶಿಸಿತ್ತು.

ಆದರೆ, ಪರಿಹಾರ ವಿಳಂಬವಾದ ಹಿನ್ನೆಲೆ ಮುಡಾ ಆಯುಕ್ತರ ಕಾರು ಜಪ್ತಿಪಡಿಸಲು ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶದಂತೆ, ಆಯುಕ್ತರ ಕಾರ್ ಸಹಿತ ಪ್ರಾಧಿಕಾರದ ಎರಡು ಕಾರ್​ಗೆ ಅಮೀನರು ನೋಟಿಸ್ ಪ್ರತಿ ಅಂಟಿಸಿದ್ದಾರೆ.

ಮುಡಾ ಕಾರ್​ಗಳಿಗೆ ಅಂಟಿಸಿರುವ ನೋಟೀಸ್

ಮೈಸೂರು ಪ್ರವಾಸಿಗರಿಗಾಗಿ.. ಅಂಬಾರಿ ಹೆಸರಿನ ಡಬಲ್ ಡೆಕ್ಕರ್ ಬಸ್ ಸಂಚಾರಕ್ಕೆ ಸಿದ್ಧ

ಮುಡಾದಲ್ಲಿ ಬಗೆದಷ್ಟೂ ಹೊರ ಬರ್ತಿದೆ ಗೋಲ್​ಮಾಲ್, ಒಬ್ಬನಿಗೆ 3 ನಿವೇಶನ ಮಂಜೂರು

Published On - 6:24 pm, Thu, 28 January 21

ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಒಂದೇ ಓವರ್​ನಲ್ಲಿ 22 ರನ್ ಚಚ್ಚಿದ ರಿಚಾ ಘೋಷ್
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಬೆಂಕಿ ಹೊತ್ತಿಕೊಂಡ ಅಪಾರ್ಟ್​​ಮೆಂಟ್​​ನೊಳಗೆ ಸಿಲುಕಿದ್ದ ನಾಯಿಯ ರಕ್ಷಣೆ
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಹೊಸ ವರ್ಷಾಚರಣೆ ಮಾಡುವವರ ಅನುಕೂಲಕ್ಕೆ QR Code: ಏನಿದು? ಏನೆಲ್ಲಾ ಅನುಕೂಲ?
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಶ್ರೀಲಂಕಾ ವಿರುದ್ಧ ಸತತ 3ನೇ ಅರ್ಧಶತಕ ಸಿಡಿಸಿದ ಶಫಾಲಿ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಮನ್ ಕಿ ಬಾತ್ ವೀಕ್ಷಿಸಿದವರಿಗೆ ಬರಿಯಾನಿ ಭಾಗ್ಯ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ ದರೋಡೆ: ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಐಜಿಪಿ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮೈಸೂರಿನಲ್ಲಿ ಹಾಡಹಗಲೇ ಸಿನಿಮೀ ಸ್ಟೈಲ್‌ನಲ್ಲಿ ಚಿನ್ನದಂಗಡಿ ದರೋಡೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಮನ್‌ ಕಿ ಬಾತ್‌ನಲ್ಲಿ ಕನ್ನಡ ಭಾಷೆ ಬಗ್ಗೆ ಪ್ರಧಾನಿ ಮೋದಿ ಶ್ಲಾಘನೆ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಒಲಿಂಪಿಕ್ಸ್ ಹೀರೋ ನೀರಜ್ ಚೋಪ್ರಾ ಆರತಕ್ಷತೆಯಲ್ಲಿ ಪ್ರಧಾನಿ ಮೋದಿ ಭಾಗಿ
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು
ಮನೆಗಳ ತೆರವು: ಹೈಕಮಾಂಡ್​​ ಲೀಡರ್ ಮಧ್ಯಪ್ರವೇಶಕ್ಕೆ ಡಿಕೆಶಿ ಹೇಳಿದ್ದಿಷ್ಟು