AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭೂ ಸ್ವಾಧೀನಕ್ಕೆ ಪರಿಹಾರ ನೀಡುವಲ್ಲಿ ವಿಳಂಬ: ಜಪ್ತಿಯಾಯ್ತು ಮೈಸೂರು ಮುಡಾ ಆಯುಕ್ತರ ಕಾರು!

ದಶಕಗಳ ಹಿಂದೆ ಬಡಾವಣೆ ನಿರ್ಮಾಣಕ್ಕೆ ರೈತರ ಜಮೀನನ್ನು ಮುಡಾ ಭೂ ಸ್ವಾಧೀನ ಮಾಡಿಕೊಂಡಿತ್ತು. ಚಿನ್ನಸ್ವಾಮಿ ಎಂಬವರ 1 ಎಕರೆ 25 ಗುಂಟೆ ಜಮೀನನ್ನು ಮುಡಾ ಸ್ವಾಧೀನ ಪಡಿಸಿಕೊಂಡಿತ್ತು.

ಭೂ ಸ್ವಾಧೀನಕ್ಕೆ ಪರಿಹಾರ ನೀಡುವಲ್ಲಿ ವಿಳಂಬ: ಜಪ್ತಿಯಾಯ್ತು ಮೈಸೂರು ಮುಡಾ ಆಯುಕ್ತರ ಕಾರು!
ಮುಡಾ ಕಾರ್ ಜಪ್ತಿ
TV9 Web
| Edited By: |

Updated on:Apr 06, 2022 | 8:36 PM

Share

ಮೈಸೂರು: ಭೂ ಸ್ವಾಧೀನಕ್ಕೆ ಹೆಚ್ಚುವರಿ ಪರಿಹಾರ ನೀಡುವಲ್ಲಿ ವಿಳಂಬವಾದ ಕಾರಣ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಆಯುಕ್ತರ ಕಾರು ಜಪ್ತಿ ಮಾಡಲಾಗಿದೆ. ಚಿನ್ನಸ್ವಾಮಿ ಎಂಬುವರ ಆಸ್ತಿಗೆ ಪರಿಹಾರ ನೀಡುವಲ್ಲಿ ಮುಡಾ ತಡಮಾಡಿತ್ತು. ಪರಿಹಾರಧನ ನೀಡುವುದಕ್ಕೆ ವಿಳಂಬವಾದ ಹಿನ್ನೆಲೆಯಲ್ಲಿ ಮುಡಾಗೆ ಸಂಬಂಧಪಟ್ಟ ವಾಹನಗಳನ್ನು ಜಪ್ತಿ ಮಾಡುವ ಬಗ್ಗೆ ಕೋರ್ಟ್ ಆದೇಶ ನೀಡಿದೆ.

ದಶಕಗಳ ಹಿಂದೆ ಬಡಾವಣೆ ನಿರ್ಮಾಣಕ್ಕೆ ರೈತರ ಜಮೀನನ್ನು ಮುಡಾ ಭೂ ಸ್ವಾಧೀನ ಮಾಡಿಕೊಂಡಿತ್ತು. ಚಿನ್ನಸ್ವಾಮಿ ಎಂಬವರ 1 ಎಕರೆ 25 ಗುಂಟೆ ಜಮೀನನ್ನು ಮುಡಾ ಸ್ವಾಧೀನ ಪಡಿಸಿಕೊಂಡಿತ್ತು. ನಾಲ್ಕನೇ ಎಸಿಜೆ ನ್ಯಾಯಾಲಯ ಭೂ ಸ್ವಾಧೀನಕ್ಕೆ ರೈತರಿಗೆ ಪರಿಹಾರ ನೀಡುವಂತೆ ಆದೇಶಿಸಿತ್ತು.

ಆದರೆ, ಪರಿಹಾರ ವಿಳಂಬವಾದ ಹಿನ್ನೆಲೆ ಮುಡಾ ಆಯುಕ್ತರ ಕಾರು ಜಪ್ತಿಪಡಿಸಲು ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶದಂತೆ, ಆಯುಕ್ತರ ಕಾರ್ ಸಹಿತ ಪ್ರಾಧಿಕಾರದ ಎರಡು ಕಾರ್​ಗೆ ಅಮೀನರು ನೋಟಿಸ್ ಪ್ರತಿ ಅಂಟಿಸಿದ್ದಾರೆ.

ಮುಡಾ ಕಾರ್​ಗಳಿಗೆ ಅಂಟಿಸಿರುವ ನೋಟೀಸ್

ಮೈಸೂರು ಪ್ರವಾಸಿಗರಿಗಾಗಿ.. ಅಂಬಾರಿ ಹೆಸರಿನ ಡಬಲ್ ಡೆಕ್ಕರ್ ಬಸ್ ಸಂಚಾರಕ್ಕೆ ಸಿದ್ಧ

ಮುಡಾದಲ್ಲಿ ಬಗೆದಷ್ಟೂ ಹೊರ ಬರ್ತಿದೆ ಗೋಲ್​ಮಾಲ್, ಒಬ್ಬನಿಗೆ 3 ನಿವೇಶನ ಮಂಜೂರು

Published On - 6:24 pm, Thu, 28 January 21

ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ಹೇಗಿದೆ ನೋಡಿ ‘ಗಿಚ್ಚಿ ಗಿಲಿಗಿಲಿ’ ಜೂನಿಯರ್ ಟೀಂ
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ನದಿಗೆ ಬಿದ್ದ ಪ್ಯಾರಾಗ್ಲೈಡರ್​ಗಳು, ಹೇಗೋ ಅಪಾಯದಿಂದ ಪಾರು
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಲಂಚ ಪಡೆಯುತ್ತಾ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿ ಬಿದ್ದ ಇನ್ಸ್‌ಪೆಕ್ಟರ್!
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಆಟೋ ಚಾಲಕನನ್ನು ಬಾನೆಟ್ ಮೇಲೆ ಹೊತ್ತೊಯ್ದ ಜೀಪ್ ಚಾಲಕ
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಲಕ್ಕುಂಡಿಯಲ್ಲಿ ಉತ್ಖನನ ನಡೆಯುತ್ತಿರುವ ಸ್ಥಳದಲ್ಲೇ ಹಾವು ಪ್ರತ್ಯಕ್ಷ!
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಗುರುಗ್ರಾಮದ ವಿಜಯ್ ವಿಹಾರದಲ್ಲಿ ಜನರ ಮೇಲೆ ಬೀದಿ ನಾಯಿಗಳ ದಾಳಿ
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕಿರಿದಾದ ರಸ್ತೆಯಲ್ಲಿ ಸ್ಕೂಲ್ ಬಸ್ ಅಟ್ಟಾಡಿಸಿದ ಭಾರಿ ಗಾತ್ರದ ಒಂಟಿ ಸಲಗ!
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಕೆಲ‌ಕಾಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ಕೊಪ್ಪಳ: ಕಿಮ್ಸ್ ಆಡಳಿತಾಧಿಕಾರಿ ಕಲ್ಲೇಶ್ ಮನೆ ಸೇರಿ 6 ಕಡೆ ಲೋಕಾಯುಕ್ತ ದಾಳಿ
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್
ನಟಿಯರ ಪರವಾಗಿ ಚಿತ್ರರಂಗಕ್ಕೆ ವಿಶೇಷ ಮನವಿ ಮಾಡಿದ ರಚಿತಾ ರಾಮ್