AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಗ್ರಿನ್ ಸಿಗ್ನಲ್ ನೀಡಿದ ತಾಂತ್ರಿಕ ಸಲಹಾ ಸಮಿತಿ: ಏನಿರುತ್ತೆ, ಏನಿರುವುದಿಲ್ಲ? ಇಲ್ಲಿದೆ ವಿವರ

Unlock 2.0 in Karnataka: ಜೂನ್ 21 ರಿಂದ ಕರ್ನಾಟಕದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ ಗಳನ್ನು ಸಹ ಓಪನ್ ಮಾಡಲು ತಾಂತ್ರಿಕ ಸಲಹಾ ಸಮಿತಿಯಿಂದ‌ ಗ್ರಿನ್ ಸಿಗ್ನಲ್ ದೊರೆತಿದೆ. ಆದರೆ ಥಿಯೇಟರ್, ಪಬ್, ಬಾರ್, ಜಿಮ್, ಸ್ವಿಮ್ಮಿಂಗ್ ಪೂಲ್, ಕ್ರೀಡಾಂಗಣಗಳು ಯಥಾಸ್ಥಿತಿ ಕ್ಲೋಸ್ ಆಗಿರಲಿವೆ. ಇವುಗಳನ್ನೆಲ್ಲ ಓಪನ್‌ ಮಾಡಲು ಮೂರನೇ ಹಂತದ ಅನ್​ಲಾಕ್ ವರೆಗೂ ಕಾಯಲು ತೀರ್ಮಾನ ಮಾಡಲಾಗಿದೆ.

ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಗ್ರಿನ್ ಸಿಗ್ನಲ್ ನೀಡಿದ ತಾಂತ್ರಿಕ ಸಲಹಾ ಸಮಿತಿ: ಏನಿರುತ್ತೆ, ಏನಿರುವುದಿಲ್ಲ? ಇಲ್ಲಿದೆ ವಿವರ
ಅನ್​ಲಾಕ್ 3.O
TV9 Web
| Edited By: |

Updated on:Jun 15, 2021 | 11:07 AM

Share

ಬೆಂಗಳೂರು: ಕೊರೊನಾ ಸೋಂಕನ್ನು ನಿಯಂತ್ರಿಸಲು ತಾಂತ್ರಿಕ ಸಲಹಾ ಸಮಿತಿ ನೀಡಿದ್ದ ಸಲಹೆಯನ್ನು ಪರಿಗಣಿಸಿ ರಾಜ್ಯ ಸರ್ಕಾರ ಎರಡನೆಯ ಅಲೆಯ ವೇಳೆ ಇಡೀ ರಾಜ್ಯದಲ್ಲಿ ಲಾಕ್​ಡೌನ್​ ಘೋಷಿಸಿತ್ತು. ಅದೀಗ ಹಂತಹಂತವಾಗಿ ಅನ್​ಲಾಕ್​ ಆಗುತ್ತಿದೆ. ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ತಾಂತ್ರಿಕ ಸಲಹಾ ಸಮಿತಿ ಇದೀಗ ಗ್ರಿನ್ ಸಿಗ್ನಲ್ ನೀಡಿದೆ. ಹಾಗಾಗಿ ರಾಜ್ಯದಲ್ಲಿ ಜೂನ್ 21 ರಿಂದ ಏನೆಲ್ಲಾ ಮುಕ್ತವಾಗಿ ಇರುತ್ತೆ, ಯಾವುದಕ್ಕೆಲ್ಲ ನಿರ್ಬಂಧವಿರುತ್ತದೆ ಎಂಬುದರ ವಿವರ ಮಾಹಿತಿ ಇಲ್ಲಿದೆ:

ಕರ್ನಾಟಕದಲ್ಲಿ ಎರಡನೇ ಹಂತದ ಅನ್​ಲಾಕ್​ಗೆ ಇದೀಗ ದಿನಾಂಕ ನಿಗದಿಯಾಗಿದ್ದು, ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಬರುತ್ತದೆ. ಜೂನ್ 21 ರಿಂದ ಮಾಲ್, ಹೋಟೆಲ್, ಚಿಕ್ಕ‌ಚಿಕ್ಕ ಮಾರುಕಟ್ಟೆ, ಹೇರ್​ ಕಟ್​ ಶಾಪ್, ಮದುವೆ ಸಮಾರಂಭಕ್ಕೆ 50 ಜನರಿಗೆ ಅವಕಾಶ ನೀಡಿ ಮುಕ್ತಗೊಳಿಸಲಾಗುವುದು.

ಬಟ್ಟೆ ಅಂಗಡಿ, ಚಿನ್ನದಂಗಡಿ ಸೇರಿದಂತೆ ಎಲ್ಲಾ ಬಗೆಯ ವಾಣಿಜ್ಯ ಮಳಿಗೆಗಳು ಸಹ ಜೂನ್ 21 ರಿಂದ ಓಪನ್ ಆಗಲಿವೆ. ದಿನಕ್ಕೆ ಎಂಟು ಗಂಟೆಗಳ ಕಾಲ ವ್ಯಾಪಾರ ವಹಿವಾಟು ಮಾಡಲು ಅವಕಾಶ ನೀಡಲಾಗುವುದು. ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಲ್ಲಿ ಶೇ.50 ರಷ್ಟು ಗ್ರಾಹಕರಿಗೆ ಪ್ರವೇಶ ಅವಕಾಶ ನೀಡಲಾಗಿದೆ.

ರಾಜ್ಯದಲ್ಲಿ ಅನ್‌ಲಾಕ್ 2.O ಜಾರಿಯಾಗುವ ಹಿನ್ನೆಲೆಯಲ್ಲಿ ಜೂ.21ರಿಂದ ಕರ್ನಾಟಕದಲ್ಲಿ ಬಸ್ ಸಂಚಾರ ಆರಂಭವಾಗುವ ಸಾಧ್ಯತೆಯಿದೆ. ಶೇ.50ರಷ್ಟು ಪ್ರಯಾಣಿಕರೊಂದಿಗೆ ಬಸ್ ಸಂಚಾರವಾಗುವ ಸಾಧ್ಯತೆ ಇದೆ.

ಈ ಕೆಳಗಿನ ವಹಿವಾಟು ನಡೆಸಲು ಮೂರನೇ ಹಂತದ ಅನ್​ಲಾಕ್ ವರೆಗೂ ಕಾಯಬೇಕು

ಶಾಪಿಂಗ್ ಕಾಂಪ್ಲೆಕ್ಸ್ ಗಳನ್ನು ಸಹ ಓಪನ್ ಮಾಡಲು ತಾಂತ್ರಿಕ ಸಲಹಾ ಸಮಿತಿಯಿಂದ‌ ಗ್ರಿನ್ ಸಿಗ್ನಲ್ ದೊರೆತಿದೆ. ಆದರೆ ಥಿಯೇಟರ್, ಪಬ್, ಬಾರ್, ಜಿಮ್, ಸ್ವಿಮ್ಮಿಂಗ್ ಪೂಲ್, ಕ್ರೀಡಾಂಗಣಗಳು ಯಥಾಸ್ಥಿತಿ ಕ್ಲೋಸ್ ಆಗಿರಲಿವೆ. ಇವುಗಳನ್ನೆಲ್ಲ ಓಪನ್‌ ಮಾಡಲು ಮೂರನೇ ಹಂತದ ಅನ್​ಲಾಕ್ ವರೆಗೂ ಕಾಯಲು ತೀರ್ಮಾನ ಮಾಡಲಾಗಿದೆ.

(covid 19 unlock 2 point 0 to begin from june 21 technical committee gives green signal to karnataka government)

ಅನ್​ಲಾಕ್​ ಮಾಡುವುದಕ್ಕೆ ಮೊದಲು ಇರಲಿ ಎಚ್ಚರ..ಕೊರೊನಾ ಇನ್ನೂ ನಿರ್ಮೂಲನಗೊಂಡಿಲ್ಲ: ತಜ್ಞರಿಂದ ಎಚ್ಚರಿಕೆ

Published On - 11:02 am, Tue, 15 June 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ