AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Covid 3rd Wave: ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಭೀತಿ: ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ, ಲಾಕ್​ಡೌನ್ ಸುಳಿವು ಕೊಟ್ಟ ಸಚಿವ ಅಶೋಕ್

ಸಾಮಾಜಿಕ ಅಂತರ ಪಾಲನೆಯೂ ಸೇರಿದಂತೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಜನರು ಮುನ್ನೆಚ್ಚರಿಕೆ ವಹಿಸುವುದು ಅನಿವಾರ್ಯ. ನಿರ್ಲಕ್ಷ್ಯ ವಹಿಸಿದರೆ ಲಾಕ್‌ಡೌನ್ ಮಾಡಬೇಕಾಗುತ್ತದ ಎಂದು ಪರೋಕ್ಷವಾಗಿ ಕಠಿಣ ನಿರ್ಧಾರದ ಸುಳಿವು ನೀಡಿದರು.

Covid 3rd Wave: ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಭೀತಿ: ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ, ಲಾಕ್​ಡೌನ್ ಸುಳಿವು ಕೊಟ್ಟ ಸಚಿವ ಅಶೋಕ್
ಸಚಿವ ಆರ್ ಅಶೋಕ್
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Jan 02, 2022 | 3:09 PM

Share

ಬೆಂಗಳೂರು: ಕರ್ನಾಟಕ ಸೇರಿದಂತೆ ಭಾರತದ ಹಲವು ರಾಜ್ಯಗಳಲ್ಲಿ ಕೊರೊನಾ ಪಿಡುಗಿನ (Coronavirus Pandemic) ಆತಂಕ ಮತ್ತೆ ಕಾಣಿಸಿಕೊಂಡಿದೆ. ಬೆಂಗಳೂರನ್ನು ರೆಡ್​ಜೋನ್ (Red Zone) ಎಂದು ಕೇಂದ್ರ ಸರ್ಕಾರ ಘೋಷಿಸಿದೆ. ರಾಜ್ಯದಲ್ಲಿ ಕೊರೊನಾ 3ನೇ ಅಲೆಯ ಭೀತಿ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಲಾಕ್​ಡೌನ್ ಸೇರಿದಂತೆ ಕಠಿಣ ಕ್ರಮಗಳನ್ನು ಜಾರಿಗೊಳಿಸಲು ಸರ್ಕಾರ ಮುಂದಾಗಿದೆ. ಕಂದಾಯ ಸಚಿವ ಆರ್.ಅಶೋಕ್ (R Ashoka) ಸರ್ಕಾರದ ಚಿಂತನೆಗಳ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕರ್ನಾಟಕದಲ್ಲಿ ಕೊರೊನಾ 3ನೇ ಅಲೆ ಕಾಣಿಸಿಕೊಳ್ಳುವ ವಾತಾವರಣ ನಿರ್ಮಾಣವಾಗಿದೆ. ಕೊರೊನಾ ಸೋಂಕಿನ ನಿಯಂತ್ರಣ ಸಂಬಂಧ ಮತ್ತೊಮ್ಮೆ ಸಭೆ ಕರೆಯಲಾಗಿದೆ. ಜನವರಿ 7ರೊಳಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಕೇಂದ್ರ ಸರ್ಕಾರವು ಬೆಂಗಳೂರನ್ನು ರೆಡ್​ ಝೋನ್ ಎಂದು ಘೋಷಿಸಿರುವುದರಿಂದ ಕಠಿಣ ನಿಯಮಗಳ ಜಾರಿ ಅನಿವಾರ್ಯವಾಗಬಹುದು. ಮುಖ್ಯಮಂತ್ರಿ ನೇತೃತ್ವದ ಸಭೆಯಲ್ಲಿ ತಜ್ಞರು ನೀಡುವ ಸಲಹೆಗಳನ್ನು ಯಥಾವತ್ತಾಗಿ ಜಾರಿ ಮಾಡುತ್ತೇವೆ. ಸಾಮಾಜಿಕ ಅಂತರ ಪಾಲನೆಯೂ ಸೇರಿದಂತೆ ಕೊರೊನಾ ಸೋಂಕು ನಿಯಂತ್ರಣಕ್ಕೆ ಜನರು ಮುನ್ನೆಚ್ಚರಿಕೆ ವಹಿಸುವುದು ಅನಿವಾರ್ಯ. ನಿರ್ಲಕ್ಷ್ಯ ವಹಿಸಿದರೆ ಲಾಕ್‌ಡೌನ್ ಮಾಡಬೇಕಾಗುತ್ತದ ಎಂದು ಪರೋಕ್ಷವಾಗಿ ಕಠಿಣ ನಿರ್ಧಾರದ ಸುಳಿವು ನೀಡಿದರು.

ಕರ್ನಾಟಕದ ಇತರ ಜಿಲ್ಲೆಗಳ ವಿಚಾರ ಒಂದು ಥರ ಇದ್ದರೆ ಬೆಂಗಳೂರಿನ ಬೆಳವಣಿಗೆ ಮತ್ತೊಂದು ರೀತಿಯಿದೆ. ಬೆಂಗಳೂರು ನಗರದಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡಿದರೆ ಮಾತ್ರ ಜನರನ್ನು ಉಳಿಸಲು ಸಾಧ್ಯವಾಗುತ್ತದೆ. ನೈಟ್ ಕರ್ಫ್ಯೂ ವಿಧಿಸಿರುವ ಅವಧಿ ಮುಗಿಯುವ ಮೊದಲೇ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಸಿ, ಸಭೆ ನಡೆಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುತ್ತೇವೆ. ತಜ್ಞರ ಸೂಚನೆಗಳನ್ನು ಯಥಾವತ್ತಾಗಿ ಪಾಲನೆ ಮಾಡುತ್ತೇವೆ. 2ನೇ ಅಲೆಯಲ್ಲಿ ಆದಂತೆ ಈ ಬಾರಿ ಆಗುವುದಿಲ್ಲ. ಈ ಬಾರಿ ನಾವು ಸರ್ವಸನ್ನದ್ಧರಾಗಿದ್ದೇವೆ ಎಂದು ಭರವಸೆ ನೀಡಿದರು.

ರಾಜ್ಯದ ಜನರು ಕೂಡ ಕಠಿಣ ನಿಯಮಗಳನ್ನು ಜಾರಿಗೊಳಿಸಲು ಸಹಕರಿಸಬೇಕು. ಇಲ್ಲದಿದ್ದರೆ ನಾವು ಕೂಡ ಮುಂಬೈನಂಥದ್ದೇ ಪರಿಸ್ಥಿತಿ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ತಜ್ಞರ ಸಭೆ ಎಂದು ನಡೆಸಬೇಕು ಎಂಬ ಬಗ್ಗೆ ಈವರೆಗೆ ಅಧಿಕೃತ ದಿನಾಂಕ ನಿಗದಿಯಾಗಿಲ್ಲ. ದಿನಾಂಕ ನಿಗದಿಯಾದ ಬಳಿಕ ಸಭೆಯಲ್ಲಿ ಈ ಕುರಿತು ಚರ್ಚಿಸುತ್ತೇವೆ. ಯಾವುದೇ ಱಲಿ ಅಥವಾ ಜಾತ್ರೆಗಳು ನಮಗೆ ಮುಖ್ಯವಲ್ಲ. ರಾಜ್ಯದ ಜನರ ಮಾತ್ರ ನಮ್ಮ ಗಮನದಲ್ಲಿದ್ದಾರೆ. ಕಾಂಗ್ರೆಸ್, ಜೆಡಿಎಸ್​ನವರು ಅವರ ಪಕ್ಷಗಳ ಉಳಿವಿಗಾಗಿ ಏನು ಬೇಕಾದರೂ ಮಾಡಿಕೊಳ್ಳಲಿ. ಅವುಗಳ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ನಮಗೆ ರಾಜ್ಯದ ಜನರ ಹಿತದೃಷ್ಟಿಯೇ ಮುಖ್ಯ ಎಂದು ನುಡಿದರು.

ಇದನ್ನೂ ಓದಿ: 15-18 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ; ವ್ಯಾಕ್ಸಿನ್ ಪಡೆದ ಮಕ್ಕಳಿಗೆ ರಜೆ ನೀಡಲು ರಾಜ್ಯ ಸರ್ಕಾರ ತೀರ್ಮಾನ ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಾಗುತ್ತಿದೆ ಕೊರೊನಾ ಸೋಂಕಿತರ ಸಂಖ್ಯೆ; ದೆಹಲಿ ಮಾದರಿ ಕ್ರಮಕ್ಕೆ ತಜ್ಞರ ಶಿಫಾರಸು

Published On - 2:57 pm, Sun, 2 January 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ