AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ 3ನೇ ಅಲೆ ಮುಂಜಾಗ್ರತೆ; 30 ಜಿಲ್ಲೆಗಳಲ್ಲಿ ಮಕ್ಕಳಿಗಾಗಿ ಕೊವಿಡ್ ಕೇರ್ ಸೆಂಟರ್ ಆರಂಭ: ಶಶಿಕಲಾ ಜೊಲ್ಲೆ

ಇಲಾಖೆಯ ವಿಶೇಷ ಮಕ್ಕಳ ಶಾಲೆಯಲ್ಲಿ ಕೊವಿಡ್ ಕೇರ್ ಸೆಂಟರ್ ಮಾಡಲು ನಿರ್ಧರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಕೊರೊನಾ 3ನೇ ಅಲೆ ಮುಂಜಾಗ್ರತೆ; 30 ಜಿಲ್ಲೆಗಳಲ್ಲಿ ಮಕ್ಕಳಿಗಾಗಿ ಕೊವಿಡ್ ಕೇರ್ ಸೆಂಟರ್ ಆರಂಭ: ಶಶಿಕಲಾ ಜೊಲ್ಲೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Aug 21, 2021 | 10:11 AM

Share

ಬೆಳಗಾವಿ: ಕೊರೊನಾ 2ನೇ ಅಲೆ ಗಣನೀಯವಾಗಿ ಏರಿಕೆ ಕಂಡು ಸಂಕಷ್ಟದ ಪರಿಸ್ಥಿತಿ ಎದುರಾಗಿರುವುದು ನಮಗೆಲ್ಲಾ ತಿಳಿದೇ ಇದೆ. 3ನೇ ಅಲೆಯಲ್ಲಿ ಮಕ್ಕಳಿಗೆ ಕೊರೊನಾ ಹರಡಬಹುದು ಎಂಬ ಮುನ್ಸೂಚನೆ ಕೂಡ ಲಭ್ಯವಾಗಿದೆ. ಹೀಗೆಂದು ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೂಡ ಸೂಕ್ತ ಜಾಗ್ರತೆ ವಹಿಸಲಾಗುತ್ತಿದೆ. ಅದರಂತೆ 30 ಜಿಲ್ಲೆಗಳಲ್ಲಿ ಮಕ್ಕಳಿಗಾಗಿ ಕೊವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು ಎಂದು ಚಿಕ್ಕೋಡಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ.

ಸಿಸಿಸಿಗಳಿಗಾಗಿ ವಸತಿ ಶಾಲೆಗಳನ್ನು ಗುರುತಿಸಲಾಗಿದೆ. ಈಗಾಗಲೇ ನೋಡಲ್ ಅಧಿಕಾರಿಯನ್ನು ನೇಮಿಸಿದ್ದೇವೆ. ಅನಾಥ ಮಕ್ಕಳಿಗೆ ಸೌಲಭ್ಯ ಒದಗಿಸುವ ಸಂಬಂಧ ಚರ್ಚೆ ಮಾಡಿದ್ದೇವೆ. ಶಾಶ್ವತ ಪರಿಹಾರ ಕಲ್ಪಿಸುವುದಕ್ಕೆ ಮುಖ್ಯಮಂತ್ರಿಗಳಿಂದ ಸ್ಪಂದನೆ ಸಿಕ್ಕಿದೆ ಎಂದು ಚಿಕ್ಕೋಡಿಯಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿಕೆ ನೀಡಿದ್ದಾರೆ.

ಮೂರನೇ ಅಲೆಯಲ್ಲಿ ಮಕ್ಕಳಿಗೆ ಕೊರೊನಾ ಹರಡಬಹುದು ಎಂಬ ತಾಂತ್ರಿಕ ಸಲಹಾ ಸಮೀತಿ ವರದಿ ಹಿನ್ನೆಲೆಯಲ್ಲಿ, 30 ಜಿಲ್ಲೆಯಲ್ಲಿ ಮಕ್ಕಳಿಗೆ ಕೊವಿಡ್ ಕೇರ್ ಸೆಂಟರ್ ತೆರೆಯಲು ಈಗಾಗಲೇ ನಿರ್ಧರಿಸಲಾಗಿದೆ. ಇದಕ್ಕೆ ಮೊರಾರ್ಜಿ ದೇಸಾಯಿ ಹಾಗೂ ಕಿತ್ತೂರು ಚೆನ್ನಮ ಶಾಲೆಗಳನ್ನು ಗುರುತಿಸಲಾಗಿದೆ. ಇಲಾಖೆಯ ವಿಶೇಷ ಮಕ್ಕಳ ಶಾಲೆಯಲ್ಲಿ ಕೊವಿಡ್ ಕೇರ್ ಸೆಂಟರ್ ಮಾಡಲು ನಿರ್ಧರಿಸಲಾಗಿದೆ ಎಂದು ಜೊಲ್ಲೆ ಹೇಳಿದ್ದಾರೆ.

ಮಂಡ್ಯ ಮತ್ತು ಚಾಮರಾಜನಗರದಲ್ಲಿ ತಂದೆ ತಾಯಿಗೆ ಕೊರೊನಾ ಪಾಸಿಟಿವ್ ಬಂದು ತೀರಿ‌ಹೋಗಿದ್ದಾರೆ. ತಂದೆ ತಾಯಿಯನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದಾರೆ. ಆ ಮಕ್ಕಳ ಪಾಲನೆ ಪೋಷಣೆ ಮಾಡುವ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲ ಸೌಕರ್ಯ ನೀಡಲಾಗುವುದು. ಆ ಮಕ್ಕಳಿಗೆ ಶಾಶ್ವತವಾಗಿ ಪರಿಹಾರ ನೀಡುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ ಬಳಿ ಮಾತನಾಡಿದ್ದೇನೆ. ಇದಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ.

ರಾಜ್ಯದಲ್ಲಿ ಇನ್ನೊಂದು ವಾರ ಲಾಕ್​ಡೌನ್​ ವಿಸ್ತರಿಸಿದರೆ ಸೂಕ್ತ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶಶಿಕಲಾ ಜೊಲ್ಲೆ ಅಭಿಪ್ರಾಯಪಟ್ಟಿದ್ಧಾರೆ. ನಗರ ಪ್ರದೇಶಗಳ ಜೊತೆ ಹಳ್ಳಿಗಳಲ್ಲೂ ಕೊರೊನಾ ಹಬ್ಬುತ್ತಿದೆ. ಜೀವಹಾನಿ ತಡೆಯಲು ಇನ್ನೊಂದು ವಾರ ಲಾಕ್​ಡೌನ್​ ಸೂಕ್ತವಾಗಿದೆ ಎಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಇದನ್ನೂ ಓದಿ: BS Yediyurappa Press Meet LIVE: ರಾಜ್ಯದಲ್ಲಿ ಕೊವಿಡ್ ಮೂರನೇ ಅಲೆ ತಡೆಯಲು ಡಾ.ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಟಾಸ್ಕ್​​ಫೋರ್ಸ್ ರಚನೆ

ಆಶಾದಾಯಕ ಸುದ್ದಿ: ಈಗಲೇ ಕಠಿಣ ಕ್ರಮಗಳನ್ನು ಕೈಗೊಂಡರೆ ಮೂರನೇ ಅಲೆಯನ್ನು ತಡೆಗಟ್ಟಬಹುದು

Published On - 5:55 pm, Wed, 19 May 21

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ