AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಸ್ಪೀಟ್ ಆಟ; ದುಡ್ಡು ಕಟ್ಟಿ ಜೂಜು ಆಡುತ್ತಿರುವ ಸೋಂಕಿತರು

ಸೋಂಕು ಬಂದಿರುವುದನ್ನು ಮರೆತು ಕೊವಿಡ್ ಕೇರ್ ಸೆಂಟರ್​ನಲ್ಲಿ ಜೂಜಾಟ ಆಡಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಇರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಜೂಜಾಟ ಆಡಿದ್ದು, ಪ್ರತ್ಯೇಕವಾಗಿ ಎರಡು ಗುಂಪುಗಳನ್ನು ಮಾಡಿಕೊಂಡು ಜೂಜಾಟ ಆಡಿದ್ದಾರೆ.

ತುಮಕೂರು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಸ್ಪೀಟ್ ಆಟ; ದುಡ್ಡು ಕಟ್ಟಿ ಜೂಜು ಆಡುತ್ತಿರುವ ಸೋಂಕಿತರು
ಕೊವಿಡ್ ಕೇರ್ ಸೆಂಟರ್​ನಲ್ಲಿ ಜೂಜು ಆಡುತ್ತಿರುವ ಸೋಂಕಿತರು
sandhya thejappa
sandhya thejappa|

Updated on: May 29, 2021 | 10:41 AM

Share

ತುಮಕೂರು: ಕೊವಿಡ್ ಕೇರ್ ಸೆಂಟರ್​ನಲ್ಲಿ ಕೊರೊನಾ ಸೋಂಕು ತಗುಲಿರುವವರಿಗೆ ಚಿಕಿತ್ಸೆ ನೀಡಲಾಗುತ್ತದೆ. ಸಾಧ್ಯವಾದಷ್ಟು ಬೇಗ ಕೊರೊನಾ ಸೋಂಕು ನಿವಾರಣೆಯಾಗಿ ಮನೆಗಳಿಗೆ ತೆರಳಲಿ ಹಾಗೂ ಗ್ರಾಮದಲ್ಲಿ ಇತರರಿಗೆ ಸೋಂಕು ತಗುಲದೆ ಇರಲಿ ಅಂತಾ ಜಿಲ್ಲಾ ಆರೋಗ್ಯ ಇಲಾಖೆ ಆಯಾ ತಾಲೂಕುಗಳಲ್ಲಿ ಕೊವಿಡ್ ಕೇರ್ ಸೆಂಟರ್​ಗಳನ್ನು ತೆರದಿದೆ. ಪಾಸಿಟಿವ್ ಬಂದವರನ್ನು ಕೂಡಲೇ ಕೊವಿಡ್ ಕೇರ್ ಸೆಂಟರ್​ಗೆ ದಾಖಲಿಸಿ ಚಿಕಿತ್ಸೆ ನೀಡುವ ಜೊತೆಗೆ ಮೂರು ಹೊತ್ತು ಆಹಾರ, ಬಿಸಿ ನೀರು ವ್ಯವಸ್ಥೆ ಕೂಡ ಕಲ್ಪಿಸಲಾಗುತ್ತದೆ. ಈ ನಡುವೆ ಸೋಂಕಿತರು ಕೊವಿಡ್ ಕೇರ್ ಸೆಂಟರ್​ನಲ್ಲಿ ಯಾರ ಭಯವಿಲ್ಲದೆ ಇಸ್ಪೀಟ್ ಆಟವನ್ನು ಶುರು ಮಾಡಿದ್ದಾರೆ.

ಸೋಂಕು ನಿವಾರಿಸಿಕೊಂಡು ಸಾಧ್ಯವಾದಷ್ಟು ಬೇಗ ತಮ್ಮ ಊರಿಗೆ ತೆರಳಬೇಕಾಗಿರುವ ಸೋಂಕಿತರು, ಸೋಂಕು ಬಂದಿರುವುದನ್ನು ಮರೆತು ಕೊವಿಡ್ ಕೇರ್ ಸೆಂಟರ್​ನಲ್ಲಿ ಜೂಜಾಟ ಆಡಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಇರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಜೂಜಾಟ ಆಡಿದ್ದು, ಪ್ರತ್ಯೇಕವಾಗಿ ಎರಡು ಗುಂಪುಗಳನ್ನು ಮಾಡಿಕೊಂಡು ಜೂಜಾಟ ಆಡಿದ್ದಾರೆ. ಜೂಜಾಟ ಆಡುವ ವಿಡಿಯೋ ವೈರಲ್ ಆಗಿದ್ದು, 100, 200 ರಿಂದ 500 ರೂ.ಗಳ ವರೆಗೆ ಜೂಜಾಟ ಆಡಿದ್ದಾರೆ. ಸೋಂಕಿತರು ಪ್ರತಿದಿನ ಜೂಜಾಟ ಆಡುತ್ತಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕೊವಿಡ್ ಕೇರ್ ಸೆಂಟರ್​ನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸೋಂಕಿತರು ರಾಜಾರೋಷವಾಗಿ ಜೂಜಾಟ ಆಡುತ್ತಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ನಾಗೇಂದ್ರಪ್ಪ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹಾಗೂ ನಮ್ಮ ಗಮನಕ್ಕೂ ಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಚಿಕ್ಕನಾಯಕನಹಳ್ಳಿ ಪೊಲೀಸರಿಗೆ ಸೂಚಿಸಲಾಗಿದೆ ಎಂದಿದ್ದಾರೆ. ಕೊರೊನಾ ಸೋಂಕು ನಿವಾರಣೆಯಾಗಿ ಕೊವಿಡ್ ಕೇರ್ ಸೆಂಟರ್​ನಿಂದ ಬಿಡುಗಡೆಯಾದ ಬಳಿಕ ಜೂಜಾಟದಲ್ಲಿ ಭಾಗಿಯಾಗಿದ್ದ ಸೊಂಕಿತರು ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದಿದ್ದಾರೆ. ಸಚಿವ ಮಾಧುಸ್ವಾಮಿ ಕೂಡ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

ಇದನ್ನೂ ಓದಿ

ಜೂಜುಕೋರರ ಬಗ್ಗೆ ಮಾಹಿತಿ ನೀಡಿದವನನ್ನೇ ಥಳಿಸಿದ ವಿಜಯಪುರ ಪೊಲೀಸರು

ತಿಂಗಳ ಹಿಂದೆ ಇದ್ದ ಭೀಕರ ಪರಿಸ್ಥಿತಿ ಕೊಂಚ ತಿಳಿಯಾಗಿದೆ… ಐಸಿಯು, ವೆಂಟಿಲೇಟರ್ ಬೆಡ್ ಅಭಾವ ಕೊಂಚ ಇಳಿಕೆಯಾಗಿದೆ

(Corona infected people are gambling at Tumkur Covid Care Centre)

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ