AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಸ್ಪೀಟ್ ಆಟ; ದುಡ್ಡು ಕಟ್ಟಿ ಜೂಜು ಆಡುತ್ತಿರುವ ಸೋಂಕಿತರು

ಸೋಂಕು ಬಂದಿರುವುದನ್ನು ಮರೆತು ಕೊವಿಡ್ ಕೇರ್ ಸೆಂಟರ್​ನಲ್ಲಿ ಜೂಜಾಟ ಆಡಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಇರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಜೂಜಾಟ ಆಡಿದ್ದು, ಪ್ರತ್ಯೇಕವಾಗಿ ಎರಡು ಗುಂಪುಗಳನ್ನು ಮಾಡಿಕೊಂಡು ಜೂಜಾಟ ಆಡಿದ್ದಾರೆ.

ತುಮಕೂರು ಕೊವಿಡ್ ಕೇರ್ ಸೆಂಟರ್​ನಲ್ಲಿ ಇಸ್ಪೀಟ್ ಆಟ; ದುಡ್ಡು ಕಟ್ಟಿ ಜೂಜು ಆಡುತ್ತಿರುವ ಸೋಂಕಿತರು
ಕೊವಿಡ್ ಕೇರ್ ಸೆಂಟರ್​ನಲ್ಲಿ ಜೂಜು ಆಡುತ್ತಿರುವ ಸೋಂಕಿತರು
sandhya thejappa
|

Updated on: May 29, 2021 | 10:41 AM

Share

ತುಮಕೂರು: ಕೊವಿಡ್ ಕೇರ್ ಸೆಂಟರ್​ನಲ್ಲಿ ಕೊರೊನಾ ಸೋಂಕು ತಗುಲಿರುವವರಿಗೆ ಚಿಕಿತ್ಸೆ ನೀಡಲಾಗುತ್ತದೆ. ಸಾಧ್ಯವಾದಷ್ಟು ಬೇಗ ಕೊರೊನಾ ಸೋಂಕು ನಿವಾರಣೆಯಾಗಿ ಮನೆಗಳಿಗೆ ತೆರಳಲಿ ಹಾಗೂ ಗ್ರಾಮದಲ್ಲಿ ಇತರರಿಗೆ ಸೋಂಕು ತಗುಲದೆ ಇರಲಿ ಅಂತಾ ಜಿಲ್ಲಾ ಆರೋಗ್ಯ ಇಲಾಖೆ ಆಯಾ ತಾಲೂಕುಗಳಲ್ಲಿ ಕೊವಿಡ್ ಕೇರ್ ಸೆಂಟರ್​ಗಳನ್ನು ತೆರದಿದೆ. ಪಾಸಿಟಿವ್ ಬಂದವರನ್ನು ಕೂಡಲೇ ಕೊವಿಡ್ ಕೇರ್ ಸೆಂಟರ್​ಗೆ ದಾಖಲಿಸಿ ಚಿಕಿತ್ಸೆ ನೀಡುವ ಜೊತೆಗೆ ಮೂರು ಹೊತ್ತು ಆಹಾರ, ಬಿಸಿ ನೀರು ವ್ಯವಸ್ಥೆ ಕೂಡ ಕಲ್ಪಿಸಲಾಗುತ್ತದೆ. ಈ ನಡುವೆ ಸೋಂಕಿತರು ಕೊವಿಡ್ ಕೇರ್ ಸೆಂಟರ್​ನಲ್ಲಿ ಯಾರ ಭಯವಿಲ್ಲದೆ ಇಸ್ಪೀಟ್ ಆಟವನ್ನು ಶುರು ಮಾಡಿದ್ದಾರೆ.

ಸೋಂಕು ನಿವಾರಿಸಿಕೊಂಡು ಸಾಧ್ಯವಾದಷ್ಟು ಬೇಗ ತಮ್ಮ ಊರಿಗೆ ತೆರಳಬೇಕಾಗಿರುವ ಸೋಂಕಿತರು, ಸೋಂಕು ಬಂದಿರುವುದನ್ನು ಮರೆತು ಕೊವಿಡ್ ಕೇರ್ ಸೆಂಟರ್​ನಲ್ಲಿ ಜೂಜಾಟ ಆಡಿದ್ದಾರೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ಇರುವ ಕೊವಿಡ್ ಕೇರ್ ಸೆಂಟರ್​ನಲ್ಲಿ ಜೂಜಾಟ ಆಡಿದ್ದು, ಪ್ರತ್ಯೇಕವಾಗಿ ಎರಡು ಗುಂಪುಗಳನ್ನು ಮಾಡಿಕೊಂಡು ಜೂಜಾಟ ಆಡಿದ್ದಾರೆ. ಜೂಜಾಟ ಆಡುವ ವಿಡಿಯೋ ವೈರಲ್ ಆಗಿದ್ದು, 100, 200 ರಿಂದ 500 ರೂ.ಗಳ ವರೆಗೆ ಜೂಜಾಟ ಆಡಿದ್ದಾರೆ. ಸೋಂಕಿತರು ಪ್ರತಿದಿನ ಜೂಜಾಟ ಆಡುತ್ತಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಕೊವಿಡ್ ಕೇರ್ ಸೆಂಟರ್​ನ ಅಧಿಕಾರಿಗಳ ನಿರ್ಲಕ್ಷ್ಯದಿಂದ ಸೋಂಕಿತರು ರಾಜಾರೋಷವಾಗಿ ಜೂಜಾಟ ಆಡುತ್ತಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿ ಡಾ.ನಾಗೇಂದ್ರಪ್ಪ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹಾಗೂ ನಮ್ಮ ಗಮನಕ್ಕೂ ಬಂದಿದೆ. ಈ ಬಗ್ಗೆ ಕ್ರಮ ಕೈಗೊಳ್ಳಲು ಚಿಕ್ಕನಾಯಕನಹಳ್ಳಿ ಪೊಲೀಸರಿಗೆ ಸೂಚಿಸಲಾಗಿದೆ ಎಂದಿದ್ದಾರೆ. ಕೊರೊನಾ ಸೋಂಕು ನಿವಾರಣೆಯಾಗಿ ಕೊವಿಡ್ ಕೇರ್ ಸೆಂಟರ್​ನಿಂದ ಬಿಡುಗಡೆಯಾದ ಬಳಿಕ ಜೂಜಾಟದಲ್ಲಿ ಭಾಗಿಯಾಗಿದ್ದ ಸೊಂಕಿತರು ಮೇಲೆ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದಿದ್ದಾರೆ. ಸಚಿವ ಮಾಧುಸ್ವಾಮಿ ಕೂಡ ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದು, ಪೊಲೀಸರಿಗೆ ಕ್ರಮ ಕೈಗೊಳ್ಳುವಂತೆ ಹೇಳಿದ್ದಾರೆ.

ಇದನ್ನೂ ಓದಿ

ಜೂಜುಕೋರರ ಬಗ್ಗೆ ಮಾಹಿತಿ ನೀಡಿದವನನ್ನೇ ಥಳಿಸಿದ ವಿಜಯಪುರ ಪೊಲೀಸರು

ತಿಂಗಳ ಹಿಂದೆ ಇದ್ದ ಭೀಕರ ಪರಿಸ್ಥಿತಿ ಕೊಂಚ ತಿಳಿಯಾಗಿದೆ… ಐಸಿಯು, ವೆಂಟಿಲೇಟರ್ ಬೆಡ್ ಅಭಾವ ಕೊಂಚ ಇಳಿಕೆಯಾಗಿದೆ

(Corona infected people are gambling at Tumkur Covid Care Centre)

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ