AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಸಿಟಿವ್-ನೆಗೆಟಿವ್ ಇದ್ದರೂ ಒಂದೇ ಮನೆಯಲ್ಲೇ ವಾಸ.. ಯಾವ ಅಧಿಕಾರಿಗಳೂ ಸಹಾಯಕ್ಕೆ ಬರಲಿಲ್ಲ ಎಂದು ಕಣ್ಣೀರಾಕಿದ ಸೋಂಕಿತ ದಂಪತಿ

ಗ್ರಾಮದಲ್ಲಿ 9 ಜನ ಕೊರೊನಾ ಸೋಂಕಿತರು ಇದ್ದಾರೆ. ಆದ್ರೆ ಕೊರೊನಾ ಸೋಂಕಿತರು ಬಡವರಾಗಿದ್ದು ಚಿಕಿತ್ಸೆಗೆ ಹಣವೂ ಇಲ್ಲ. ಜೊತೆಗೆ ಸಣ್ಣ ಸಣ್ಣ ಮನೆಗಳಲ್ಲಿ ವಾಸವಾಗಿದ್ದಾರೆ. ಒಂದೇ ಕುಟುಂಬದ ದಂಪತಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಅವರ ಚಿಕ್ಕ ಮಗುವಿಗೆ ಕೊರೊನಾ ನೆಗೆಟಿವ್ ಇದೆ. ಮಗುವನ್ನು ಕರೆದುಕೊಂಡು ಆಸ್ಪತ್ರೆ ಇಲ್ಲಾ ಸಿಸಿಸಿ ಕೇಂದ್ರ ದಾಖಲು ಆಗಲು ನಿರಾಕರಿಸಿದ್ದು ಮನೆಯಲ್ಲೆ ಹೋಮ್ ಐಸೋಲೇಷನ್ ಆಗಿದ್ದಾರೆ.

ಪಾಸಿಟಿವ್-ನೆಗೆಟಿವ್ ಇದ್ದರೂ ಒಂದೇ ಮನೆಯಲ್ಲೇ ವಾಸ.. ಯಾವ ಅಧಿಕಾರಿಗಳೂ ಸಹಾಯಕ್ಕೆ ಬರಲಿಲ್ಲ ಎಂದು ಕಣ್ಣೀರಾಕಿದ ಸೋಂಕಿತ ದಂಪತಿ
ಚಿಕ್ಕಬಳ್ಳಾಪುರ ಗ್ರಾಮವೊಂದರ ದೃಶ್ಯ
ಆಯೇಷಾ ಬಾನು
|

Updated on: May 21, 2021 | 12:54 PM

Share

ಚಿಕ್ಕಬಳ್ಳಾಪುರ: ಮಂಚನಬಲೆ ಗ್ರಾಮವೊಂದರಲ್ಲಿ 90 ಜನಕ್ಕೆ ಕೊರೊನಾ ಸೋಂಕು ಹರಡಿದ್ದು, ಬಹುತೇಕರು ಗುಣಮುಖರಾಗಿದ್ದಾರೆ. ಆದರೆ ಈ ಪೈಕಿ 10 ಜನ ಮೃತಪಟ್ಟಿದ್ದಾರೆ. ಮೃತರಲ್ಲಿ 5 ಜನರಿಗೆ ಕೊರೊನಾ ಸೋಂಕು ತಗುಲಿರುವು ದೃಢಪಟ್ಟಿದೆ. ಇದ್ರಿಂದ ಗ್ರಾಮಸ್ಥರು ಭಯಭೀತರಾಗಿದ್ದಾರೆ.

ಇನ್ನು ಗ್ರಾಮದಲ್ಲಿ 9 ಜನ ಕೊರೊನಾ ಸೋಂಕಿತರು ಇದ್ದಾರೆ. ಆದ್ರೆ ಕೊರೊನಾ ಸೋಂಕಿತರು ಬಡವರಾಗಿದ್ದು ಚಿಕಿತ್ಸೆಗೆ ಹಣವೂ ಇಲ್ಲ. ಜೊತೆಗೆ ಸಣ್ಣ ಸಣ್ಣ ಮನೆಗಳಲ್ಲಿ ವಾಸವಾಗಿದ್ದಾರೆ. ಒಂದೇ ಕುಟುಂಬದ ದಂಪತಿಗೆ ಕೊರೊನಾ ಪಾಸಿಟಿವ್ ಬಂದಿದ್ದು ಅವರ ಚಿಕ್ಕ ಮಗುವಿಗೆ ಕೊರೊನಾ ನೆಗೆಟಿವ್ ಇದೆ. ಮಗುವನ್ನು ಕರೆದುಕೊಂಡು ಆಸ್ಪತ್ರೆ ಇಲ್ಲಾ ಸಿಸಿಸಿ ಕೇಂದ್ರ ದಾಖಲು ಆಗಲು ನಿರಾಕರಿಸಿದ್ದು ಮನೆಯಲ್ಲೆ ಹೋಮ್ ಐಸೋಲೇಷನ್ ಆಗಿದ್ದಾರೆ.

ಸೋಂಕಿತನ ತಂದೆಗೆ ನೆಗಟಿವ್ ವರದಿ ಇದ್ದು ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ರೇಷನ್ ಆಂಗಡಿಗಳಿಗೆ ಹೋದ್ರೆ ಜನ ಅನುಮಾನದಿಂದ ನೋಡುತ್ತಿದ್ದಾರೆ. ಅಗತ್ಯ ವಸ್ತುಗಳನ್ನು ಕೊಡುತ್ತಿಲ್ಲ ಆದ್ರೆ ಯಾರೊ ಪುಣ್ಯಾತ್ಮರು ದಿನಸಿ ಕಿಟ್ ನೀಡಿ ಮಾನವಿಯತೆ ಮೆರೆದಿದ್ದಾರೆ. ಸೋಂಕಿತರ ಮನೆಗೆ ಸ್ಥಳಿಯ ಪಿ.ಡಿ.ಓ ಹಾಗೂ ಸ್ಥಳೀಯ ಕಾರ್ಯಪಡೆ ಸದಸ್ಯರು ಮಾತ್ರ ಭೇಟಿ ನೀಡಿ ಅಗತ್ಯ ಔಷಧಿ ನೀಡಿದ್ದಾರೆ, ದೈರ್ಯ ತುಂಬಿದ್ದಾರೆ. ಆದ್ರೆ ಆರೋಗ್ಯಾಧಿಕಾರಿಗಳು, ವೈದ್ಯರು, ತಹಶೀಲ್ದಾರ್ ಕಚೇರಿ ಸಿಬ್ಬಂದಿಗಳು ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ಸೋಂಕಿತರ ಮನೆಗಳ ಕಡೆ ಸುಳಿದಿಲ್ಲವೆಂದು ನೊಂದ ದಂಪತಿ ಅವಲತ್ತುಕೊಂಡಿದ್ದಾರೆ.

ಇದನ್ನೂ ಓದಿ: Income tax return filing: ಆದಾಯ ತೆರಿಗೆ ಫೈಲಿಂಗ್​ ಗಡುವು ವಿಸ್ತರಿಸಿದ ಸಿಬಿಡಿಟಿ

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ