AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಧಾನಿ ಸಹವಾಸ ಬೇಡವೇ ಬೇಡ ಎಂದ ಜನರು, ಬೆಂಗಳೂರಿಗೆ ಬರಲು ಹಿಂದೇಟು

ಬೆಂಗಳೂರು: ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗ್ತಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ಸಹವಾಸ ಬೇಡವೇ ಬೇಡ ಅಂತಾ ಬೇರೆ ಜಿಲ್ಲೆಯ ಜನರು ಇತ್ತ ಮುಖಮಾಡುತ್ತಿಲ್ಲವಂತೆ. ನಗರಕ್ಕೆ ಜನ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಬೆಂಗಳೂರಿನತ್ತ ಬರುವವರ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದೆ. ಇದಕ್ಕೆ ಸಾಕ್ಷಿಯೆಂಬಂತೆ ಬೆಂಗಳೂರಿಗೆ ಬೇರೆ ಬೇರೆ ಜಿಲ್ಲೆಗಳಿಂದ ಬರುತ್ತಿರುವ ಸರ್ಕಾರಿ ಬಸ್​ಗಳ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದೆ. ಉದಾಹರಣೆಗೆ, ನಿತ್ಯ ದಾವಣಗೆರೆಯಿಂದ ಬೆಂಗಳೂರಿಗೆ ಸುಮಾರು 25 KSRTC ಬಸ್​ಗಳು ಸಂಚರಿಸುತ್ತಿದ್ದವು. ಆದರೆ, ಇದೀಗ ಕೇವಲ 10 […]

ರಾಜಧಾನಿ ಸಹವಾಸ ಬೇಡವೇ ಬೇಡ ಎಂದ ಜನರು, ಬೆಂಗಳೂರಿಗೆ ಬರಲು ಹಿಂದೇಟು
KUSHAL V
| Edited By: |

Updated on:Jul 11, 2020 | 1:57 PM

Share

ಬೆಂಗಳೂರು: ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ವಿಪರೀತವಾಗಿ ಹೆಚ್ಚಳವಾಗ್ತಿದೆ. ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯ ಸಹವಾಸ ಬೇಡವೇ ಬೇಡ ಅಂತಾ ಬೇರೆ ಜಿಲ್ಲೆಯ ಜನರು ಇತ್ತ ಮುಖಮಾಡುತ್ತಿಲ್ಲವಂತೆ. ನಗರಕ್ಕೆ ಜನ ಬರಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ, ಬೆಂಗಳೂರಿನತ್ತ ಬರುವವರ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದೆ.

ಇದಕ್ಕೆ ಸಾಕ್ಷಿಯೆಂಬಂತೆ ಬೆಂಗಳೂರಿಗೆ ಬೇರೆ ಬೇರೆ ಜಿಲ್ಲೆಗಳಿಂದ ಬರುತ್ತಿರುವ ಸರ್ಕಾರಿ ಬಸ್​ಗಳ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದೆ. ಉದಾಹರಣೆಗೆ, ನಿತ್ಯ ದಾವಣಗೆರೆಯಿಂದ ಬೆಂಗಳೂರಿಗೆ ಸುಮಾರು 25 KSRTC ಬಸ್​ಗಳು ಸಂಚರಿಸುತ್ತಿದ್ದವು. ಆದರೆ, ಇದೀಗ ಕೇವಲ 10 KSRTC ಬಸ್​ಗಳ ಮಾತ್ರ ಸಂಚಾರ ನಡೆಸುತ್ತಿವೆ. ಹೀಗಾಗಿ, ನಿತ್ಯ 4 ಲಕ್ಷ ರೂಪಾಯಿ ಆದಾಯ ಗಳಿಸುತ್ತಿದ್ದ ಸಂಸ್ಥೆಯು ಇದೀಗ ಕೇವಲ 2 ಲಕ್ಷ ರೂಪಾಯಿ ಆದಾಯ ಪಡೆಯುತ್ತಿದೆ.

ಇನ್ನು, ಹುಬ್ಬಳ್ಳಿಯಿಂದಲೂ ಬೆಂಗಳೂರಿಗೆ ತೆರಳುವರರ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದೆ. ಅನ್​ಲಾಕ್ ಬಳಿಕ ಪ್ರತಿ ದಿನ ಹುಬ್ಬಳ್ಳಿಯಿಂದ ಬೆಂಗಳೂರಿಗೆ 10-15 ಬಸ್​ಗಳು ತೆರಳುತ್ತಿದ್ದವು. ಆದ್ರೆ ಕಳೆದೊಂದ ವಾರದಿಂದ ಪ್ರಾಯಾಣಿಕರ ಸಂಖ್ಯೆಯಲ್ಲಿ ಭಾರಿ ಇಳಿಮುಖವಾಗಿದ್ದು ಸದ್ಯಕ್ಕೆ 3 ರಿಂದ 4 ಬಸ್​ಗಳು ಮಾತ್ರ ಸಂಚರಿಸುತ್ತಿವೆ. ಇದರಿಂದ ಪ್ರತಿದಿನ 2 ರಿಂದ 3 ಲಕ್ಷ ಆದಾಯ ಬರುತ್ತಿದ್ದ ವಾಯುವ್ಯ ಸಾರಿಗೆ ಸಂಸ್ಥೆಗೆ ಇದೀಗ 50 ರಿಂದ 70 ಸಾವಿರ ಆದಾಯ ಮಾತ್ರ ಬರುತ್ತಿದೆ ಎಂದು ತಿಳದುಬಂದಿದೆ. ಜೊತೆಗೆ, ಇಂಥ ಪರಿಸ್ಥಿತಿ ಇತರೆ ಜಿಲ್ಲೆಗಳಲ್ಲೂ ವರದಿಯಾಗಿದೆ.

ಈ ಮಧ್ಯೆ, ಬೆಳಗಾವಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಹೋಗುವವರ ಸಂಖ್ಯೆ ಸಹ ಕಡಿಮೆಯಾಗಿದೆ. ಈ ಹಿಂದೆ ಬೆಂಗಳೂರು ಮತ್ತು ಬೆಳಗಾವಿಯ ಮಧ್ಯೆ ನಿತ್ಯವೂ ಮೂರು ವಿಮಾನಗಳು ಹಾರಾಟ ನಡೆಸುತ್ತಿದ್ದವು. ಆದರೆ, ಇದೀಗ ಎರಡು ದಿನಕ್ಕೊಮ್ಮೆ ಮೂರು ಬದಲಿಗೆ ಎರಡು ವಿಮಾನಗಳು ಮಾತ್ರ ಹಾರಾಟ ನಡೆಸುತ್ತಿವೆ. ಕೆಲವೊಮ್ಮೆ ಪ್ರಯಾಣಿಕರ ಕೊರತೆಯಿಂದ ಫ್ಲೈಟ್​ ಕ್ಯಾನ್ಸಲ್ ಕೂಡ ಆಗುತ್ತಿವೆ ಎಂದು ತಿಳಿದುಬಂದಿದೆ.

Published On - 10:26 am, Sat, 11 July 20

Follow Us
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!