ಅಯ್ಯಪ್ಪ ಯಾತ್ರೆಗೆ ತೆರಳುವ ಕರ್ನಾಟಕದ ಭಕ್ತರಿಗೆ ವಿಶೇಷ ಸೂಚನೆ
ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ. ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ […]

ಬೆಂಗಳೂರು: ನವೆಂಬರ್ 16ರಿಂದ ಅಯ್ಯಪ್ಪ ಸ್ವಾಮಿ ಯಾತ್ರೆ ಆರಂಭವಾಗುತ್ತೆ. ಆದರೆ ಕೊರೊನಾ ಹಿನ್ನೆಲೆ ಅದು ಪ್ರತಿ ಬಾರಿ ಇದ್ದಂತೆ ಈ ಬಾರಿ ಇರುವುದಿಲ್ಲ. ಅಯ್ಯಪ್ಪ ಸ್ವಾಮಿ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಸುತ್ತೊಲೆ ಬಿಡುಗಡೆ ಮಾಡಿದೆ. ಕೇರಳ ಸರ್ಕಾರದ ಆದೇಶದನ್ವಯ, ಕರ್ನಾಟಕ ರಾಜ್ಯದ ಭಕ್ತರಿಗೆ ಕೆಲವು ಸೂಚನೆಗಳನ್ನು ಮುಜರಾಯಿ ಇಲಾಖೆ ಬಿಡುಗಡೆ ಮಾಡಿದೆ.
ದೇಶದಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದ ಹಿನ್ನೆಲೆಯಲ್ಲಿ ಈ ಬಾರಿ ಶಬರಿಮಲೈಗೆ ಹೋಗುವ ಭಕ್ತರಿಗೆ ಕೆಲವು ನಿಯಮಗಳನ್ನು ಹಾಕಲಾಗಿದೆ. -ಶಬರಿಮಲೈ ವೆಬ್ ಸೈಟ್ನಲ್ಲಿ ನೋಂದಣಿ ಮಾಡಿಕೊಂಡವರಿಗಷ್ಟೇ ಪ್ರವೇಶಕ್ಕೆ ಅನುಮತಿ ನೀಡಲಾಗುತ್ತೆ. ಹೀಗಾಗಿ ಯಾತ್ರೆಗೆ ತೆರಳುವ ಮುನ್ನ ನೋಂದಣಿ ಮಾಡುವುದು ಕಡ್ಡಾಯ. -ಒಂದು ದಿನಕ್ಕೆ 1 ಸಾವಿರ ಭಕ್ತರಿಗೆ ಮಾತ್ರ ದರ್ಶನಕ್ಕೆ ಅವಕಾಶ ನೀಡಲಾಗುತ್ತೆ. ವಾರಾಂತ್ಯಕ್ಕೆ ಅದನ್ನು ಎರಡು ಸಾವಿರಕ್ಕೆ ಹೆಚ್ಚಿಸಲಾಗುತ್ತೆ. -ದೇವರ ದರ್ಶನಕ್ಕೂ 48 ಗಂಟೆಯ ಮುನ್ನ ಕೋವಿಡ್ ಟೆಸ್ಟ್ ಮಾಡಿಸುವುದು ಕಡ್ಡಾಯ. -10 ವರ್ಷದೊಳಗಿನ ಹಾಗೂ 60 ವರ್ಷ ಮೇಲ್ಪಟ್ಟ ಭಕ್ತರಿಗೆ ಅವಕಾಶ ಇರುವುದಿಲ್ಲ. -ಬಿಪಿಎಲ್ ಕಾರ್ಡ್, ಆಯುಷ್ಮಾನ್ ಕಾರ್ಡ್ ಹೊಂದಿರುವವರು ಯಾತ್ರೆಗೆ ಹೋಗುವಾಗ ತೆಗೆದುಕೊಂಡು ಹೋಗಬೇಕು -ಪಂಪಾನದಿ ಸ್ನಾನ ಇರೋದಿಲ್ಲ