AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಪ್ಪಳದ ಈ ಕೊವಿಡ್ ಹೀರೋಗೆ ಥ್ಯಾಂಕ್ಸ್​ ಹೇಳೋಣ: ಮಗ ಹುಟ್ಟಿ ತಿಂಗಳಾದರೂ ವಿಡಿಯೋದಲ್ಲಿ ಮಗು ಮುಖ ನೋಡಿ ಸಮಾಧಾನ ಪಡ್ತಿರೋ ತಂದೆ​!

ಮೂಲತಃ ವಿಜಯಪುರ ಜಿಲ್ಲೆಯ ಮಂಜುನಾಥ್, ಕಳೆದ ಆರು ವರ್ಷಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದಾರೆ. ಒಂದು ತಿಂಗಳ ಹಿಂದೆ ಮಗು‌ ಜನಿಸಿದ್ರೂ ಎತ್ತಿ ಮುದ್ದಾಡದ ಸ್ಥಿತಿಗೆ ಈ ಕೊರೊನಾ ತಂದು ನಿಲ್ಲಿಸಿದೆ. ಇವರ ಈ ಸೇವಾ ಕೈಕಂಕರ್ಯ ನೋಡಿದರೆ, ಸ್ವಂತಃ ಅವರು ಅನುಭವಿಸುತ್ತಿರುವ ಪಡಿಪಾಟಲು ನೋಡಿದರೆ ಯಾರಿಗೇ ಆಗಲಿ ಕಣ್ಣಾಲಿಗಳು ತೇವವಾಗದೆ ಇರದು. ಧಿಕ್ಕಾರವಿರಲಿ ಕೊರೊನಾ ಕ್ರಿಮಿಗೆ, ಜಯಕಾರ ಹಾಕಿ ಈ ತಂದೆಗೆ

ಕೊಪ್ಪಳದ ಈ ಕೊವಿಡ್ ಹೀರೋಗೆ ಥ್ಯಾಂಕ್ಸ್​ ಹೇಳೋಣ: ಮಗ ಹುಟ್ಟಿ ತಿಂಗಳಾದರೂ ವಿಡಿಯೋದಲ್ಲಿ ಮಗು ಮುಖ ನೋಡಿ ಸಮಾಧಾನ ಪಡ್ತಿರೋ ತಂದೆ​!
ಕೊಪ್ಪಳದ ಕೋವಿಡ್ ಹೀರೋ ಮಂಜುನಾಥ್ ಅವರಿಗೆ ಒಂದು ಥ್ಯಾಂಕ್ಸ್​ ಹೇಳೋಣ
Follow us
ಸಾಧು ಶ್ರೀನಾಥ್​
| Updated By: Skanda

Updated on: May 01, 2021 | 12:27 PM

ಕೊಪ್ಪಳ: ಈ ಕೊರೊನಾ ಕಾಲದಲ್ಲಿ ಸರ್ಕಾರಿ ವ್ಯವಸ್ಥೆ ಅದರಲ್ಲೂ ಸರ್ಕಾರಿ ವೈದ್ಯಕೀಯ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂಬುದು ಜನರ ಅನುಭವಕ್ಕೆ ಬಂದ ಸಂಗತಿಯಾಗಿದೆ. ಆದರೆ ಇಲ್ಲೊಬ್ಬ ಕೊವಿಡ್ ಹೀರೋ ಒಂದು ತಿಂಗಳಿಂದ ಆಸ್ಪತ್ರೆಯಲ್ಲೇ ಉಳಿದುಕೊಂಡು ತನ್ನವರನ್ನ ಬರೀ ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿ, ಸಮಾಧಾನ ಪಟ್ಟುಕೊಳ್ಳುತ್ತಿರುವುದನ್ನ ನೋಡಿದರೆ ಕರುಳು ಕಿವುಚಿಬರುತ್ತದೆ; ಆತನ ತ್ಯಾಗಕ್ಕೆ ಕೃತಜ್ಞತೆ ಸೂಚಿಸೋಣ ಅನ್ನಿಸದಿರದು.

ಎದುರಿಗೆ ಕೊವಿಡ್ ಡ್ಯೂಟಿ ಹರಡಿಕೊಂಡು, ಅದಾಗತಾನೇ ಹುಟ್ಟಿದ ತನ್ನ ಮಗುವನ್ನೂ ನೋಡದ ತಂದೆಯೊಬ್ಬರು ನಮ್ಮ ವೈದ್ಯಕೀಯ ವ್ಯವಸ್ಥೆಯಲ್ಲಿ ಮಾದರಿಯಾಗಿ ಕಾಣುತ್ತಿದ್ದಾರೆ. ಕೊಪ್ಪಳದ ಜಿಲ್ಲಾ ಆಸ್ಪತ್ರೆಯಲ್ಲಿ ಮನಕಲಕುವ ಪ್ರಸಂಗ ನಡೆದಿದೆ. ಗಮನಾರ್ಹ ಸಂಗತಿಯೆಂದರೆ ಆ ತಂದೆ ಇನ್ನಾದರೂ ತನ್ನ ಮನೆಗೆ ತೆರಳಿ ಮಗುವನ್ನು ಅಪ್ಪಿ ಮುದ್ದಾಡುತ್ತಾರಾ ಅಂದ್ರೆ ಉಹುಃ ಅವರು ಆಸ್ಪತ್ರೆ ಬಿಟ್ಟು ಕದಲುತ್ತಿಲ್ಲ. ಮೊದಲು ಕೆಲಸ ಆಮೇಲೆ ಮಗ, ಮನೆಯನ್ನು ನೋಡುವೆ ಅನ್ನುತ್ತಿದ್ದಾರೆ!

ಜಿಲ್ಲಾ ಆಸ್ಪತ್ರೆಯಲ್ಲಿ ನರ್ಸಿಂಗ್ ಆಫೀಸರ್ ಆಗಿರೋ‌ ಮಂಜುನಾಥ್ ಅವರೇ ಈ ನಮ್ಮ ಕೋವಿಡ್​ ಹೀರೋ. ಏಪ್ರಿಲ್ ಒಂದರಂದು ತಮಗೆ ಗಂಡು ಮಗು ಜನಿಸಿದ್ರೂ ಮಗು ಮುಖ ನೋಡದೆ ಒದ್ದಾಟದಲ್ಲೇ ರೋಗಿಗಳ ಆರೈಕೆಗೆ ನಿಂತಿದ್ದಾರೆ ಈ ಸಹೃದಯಿ ತಂದೆ. ಇಡೀ ಜಗತ್ತಲ್ಲೇ ಇರುವಂತೆ ತಮ್ಮ ಜಿಲ್ಲೆಯಲ್ಲಿಯೂ ಕೊವಿಡ್ ಮಹಾಮಾರಿ ಠಿಕಾಣಿ ಹೂಡಿರುವುದರಿಂದ ಮಗು ಮುಖ ನೋಡದಿರೋ‌ ಮಂಜುನಾಥ್ ಮನೆ ಆಮೇಲೆ ಎಂದು ತಮ್ಮ ಸರ್ಕಾರಿ ಉದ್ಯೋಗವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿದ್ದಾರೆ.

Covid hero father manjunath in Koppal daily look at his new born baby through video call (1)

ಸ್ವಂತ ಮಗುವಿನ ಮುಖ ನೋಡದೆ‌ ತಮ್ಮ ಸರ್ಕಾರಿ ಉದ್ಯೋಗವನ್ನು ಅಚ್ಚುಕಟ್ಟಾಗಿ ನಿಭಾಯಿಸುತ್ತಿರುವ ಮಂಜುನಾಥ್

ಮಂಜುನಾಥ್ ಹಾಗೂ ಸುಮಲತಾ ದಂಪತಿಗೆ ಏಪ್ರಿಲ್ ಒಂದರಂದು ಮುದ್ದಾದ ಗಂಡು ಮಗು ಜನಿಸಿದೆ. ಇತ್ತ ಮಗುವಿನ ತಂದೆ ಮಂಜುನಾಥ್ ಕೊವಿಡ್ ಡ್ಯೂಟಿಯಲ್ಲಿ ತಮ್ಮನ್ನು ಅರ್ಪಿಸಿಕೊಂಡಿದ್ದಾರೆ. ಮುಖ ನೋಡಲು ಹೋಗಲಾರದೆ ತಂದೆ ಮಂಜುನಾಥ್ ಅವರು ನಿತ್ಯವೂ ಒಂದಷ್ಟು ಸಮಯ ಮಾಡಿಕೊಂಡು ಮನೆಗೆ ವಿಡಿಯೋ ಕಾಲ್‌ ಮಾಡುತ್ತಾರೆ. ಆ ವೇಳೆ ಮಡದಿ, ಮತ್ತೊಂದು ಮಗು, ಜೊತೆಗೆ ಹೊಸದಾಗಿ ಮನೆಗೆ ಬಂದಿರುವ ನವಜಾತ ಶಿಶುವನ್ನು ನೋಡಿ, ಸಂತಸಪಟ್ಟು, ಮಡದಿಯನ್ನು ಸಂತೈಸಿ, ಮಗಳಿಗೆ ಧೈರ್ಯ ತುಂಬುತ್ತಾರೆ. ಇದು ಸರ್ಕಾರಿ ಕೆಲಸದ ಜೊತೆಗೆ ಅವರ ನಿತ್ಯದ ಕಾಯಕವಾಗಿದೆ.

N Covid hero father manjunath in Koppal daily look at his new born baby through video call (4)

ವಿಡಿಯೋ ಕಾಲ್ ಮೂಲಕ ನವಜಾತ ಶಿಶುವನ್ನು ನೋಡಿ ಸಂತಸಪಟ್ಟು, ಮಡದಿಯನ್ನು ಸಂತೈಸಿ, ಮಗಳಿಗೆ ಧೈರ್ಯ ತುಂಬುತ್ತಿರುವ ಕೊಪ್ಪಳದ ಕೋವಿಡ್ ಹೀರೋ

ಮೂಲತಃ ವಿಜಯಪುರ ಜಿಲ್ಲೆಯ ಮಂಜುನಾಥ್, ಕಳೆದ ಆರು ವರ್ಷಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿ ಕೆಲಸ ಮಾಡ್ತಿದ್ದಾರೆ. ಒಂದು ತಿಂಗಳ ಹಿಂದೆ ಮಗು‌ ಜನಿಸಿದ್ರೂ ಎತ್ತಿ ಮುದ್ದಾಡದ ಸ್ಥಿತಿಗೆ ಈ ಕೊರೊನಾ ತಂದು ನಿಲ್ಲಿಸಿದೆ. ಇವರ ಈ ಸೇವಾ ಕೈಕಂಕರ್ಯ ನೋಡಿದರೆ, ಸ್ವಂತಃ ಅವರು ಅನುಭವಿಸುತ್ತಿರುವ ಪಡಿಪಾಟಲು ನೋಡಿದರೆ ಯಾರಿಗೇ ಆಗಲಿ ಕಣ್ಣಾಲಿಗಳು ತೇವವಾಗದೆ ಇರದು. ಧಿಕ್ಕಾರವಿರಲಿ ಕೊರೊನಾ ಕ್ರಿಮಿಗೆ.. ಜಯಕಾರ ಹಾಕಿ ಈ ತಂದೆಗೆ.

(Covid hero father manjunath in Koppal daily look at his new born baby through video call and console him self)

ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಕೃಷ್ಣ ನಟನೆಯ ‘ಬ್ರ್ಯಾಟ್’ ಚಿತ್ರದ ಟೀಸರ್ ನೋಡಿದ ಮಗಳು ಪರಿ ರಿಯಾಕ್ಷನ್ ನೋಡಿ
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ಶ್ರೀನಿವಾಸಪುರದಿಂದ ಬೇರೆ ಊರುಗಳಿಗೆ ಹೋಗುವ ರಸ್ತೆಗಳು ಬಂದ್
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
ರಾಜಾ ರಘುವಂಶಿ ಕೊಲೆ ಆರೋಪಿಗೆ ಏರ್​ಪೋರ್ಟ್​ನಲ್ಲಿ ಪ್ರಯಾಣಿಕರಿಂದ ಕಪಾಳಮೋಕ್ಷ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Devotional: ನಿತ್ಯ ಪೂಜೆಯಲ್ಲಿ ಗಣಪತಿ ಸ್ಮರಣೆಯ ಮಹತ್ವ ತಿಳಿಯಿರಿ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
Daily Horoscope: ಜೇಷ್ಠ ನಕ್ಷತ್ರದಲ್ಲಿ ಚಂದ್ರನ ಸಂಚಾರ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ಹಾಡಿನ ಒಂದು ಸಾಲಿನಿಂದಲೇ ಶುರುವಾಗಿದ್ದು ‘ದೂರ ತೀರ ಯಾನ’ ಸಿನಿಮಾ: ಮಂಸೋರೆ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ನನ್ನ ವಯಸ್ಸು 35, ಶಿವಣ್ಣ ಚಿತ್ರರಂಗಕ್ಕೆ ಬಂದೇ 40 ವರ್ಷ ಆಗಿದೆ: ಧ್ರುವ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?