AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೋಮವಾರದೊಳಗೆ ಕಟ್ಟಡ ಕಾರ್ಮಿಕರಿಗೆ ತಲುಪಲಿದೆ ಕೊವಿಡ್ ಪ್ಯಾಕೇಜ್: ಸಚಿವ ಶಿವರಾಮ್ ಹೆಬ್ಬಾರ್

Covid lockdown package to Building labor workers: ಕಮ್ಮಾರರು, ಗೃಹ ಕಾರ್ಮಿಕರು, ಅಕ್ಕಸಾಲಿಗ, ಹಮಾಲಿ, ಗೂಡು ಕೆಲಸಗಾರರು, ಮೆಕಾನಿಕ್, ಕುಂಬಾರರು, ಚಿಂದಿ ಆಯುವವರು, ಟೈಲರ್ಸ್, ಕ್ಷೌರಿಕರು, ಅಗಸರಿಗೆ ಪ್ಯಾಕೇಜ್ ಘೋಷಿಸಲಾಗಿದೆ. ಇನ್ನುಳಿದ ಕಾರ್ಮಿಕ ಸಂಘಟನೆಗಳಿಂದ ಪ್ಯಾಕೇಜ್ ನೀಡುವಂತೆ ಸರ್ಕಾರಕ್ಕೆ ಮನವಿ ನೀಡಲಾಗಿದೆ.

ಸೋಮವಾರದೊಳಗೆ ಕಟ್ಟಡ ಕಾರ್ಮಿಕರಿಗೆ ತಲುಪಲಿದೆ ಕೊವಿಡ್ ಪ್ಯಾಕೇಜ್: ಸಚಿವ ಶಿವರಾಮ್ ಹೆಬ್ಬಾರ್
ಶಿವರಾಮ ಹೆಬ್ಬಾರ್​
guruganesh bhat
|

Updated on: May 27, 2021 | 4:20 PM

Share

ಬೆಂಗಳೂರು: ಕಟ್ಟಡ ಕಾರ್ಮಿಕರಿಗೆ ಸೋಮವಾರದೊಳಗೆ ಲಾಕ್​ಡೌನ್ ಪ್ಯಾಕೇಜ್ ಹಣ ವರ್ಗಾವಣೆಯಾಗಲಿದೆ ಎಂದು ವಿಧಾನಸೌಧದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದರು. ಅಸಂಘಟಿತ ಕಾರ್ಮಿಕ ವರ್ಗದ 11 ವಲಯಗಳ 3,44,030 ಜನರಿಗೆ ಪ್ಯಾಕೇಜ್ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು.

ಮಹಿಳೆಯರಿಗೆ ಹೆಚ್ಚಿನ ಹೊತ್ತು ನೀಡಲಾಗಿದ್ದು, ಅವರಿಗೆ ಹೆಚ್ಚಿನ ಸೌಲಭ್ಯ ನೀಡಲಾಗಿದೆ. ಸದ್ಯ ಈಗ ಮತ್ತಷ್ಟು ವರ್ಗ ದವರನ್ನು ನಮ್ಮ ಇಲಾಖೆಗೆ ಸೇರಿಸಲಾಗಿದೆ. ಕಮ್ಮಾರರು, ಗೃಹ ಕಾರ್ಮಿಕರು, ಅಕ್ಕಸಾಲಿಗ, ಹಮಾಲಿ, ಗೂಡು ಕೆಲಸಗಾರರು, ಮೆಕಾನಿಕ್, ಕುಂಬಾರರು, ಚಿಂದಿ ಆಯುವವರು, ಟೈಲರ್ಸ್, ಕ್ಷೌರಿಕರು, ಅಗಸರಿಗೆ ಪ್ಯಾಕೇಜ್ ಘೋಷಿಸಲಾಗಿದೆ. ಇನ್ನುಳಿದ ಕಾರ್ಮಿಕ ಸಂಘಟನೆಗಳಿಂದ ಪ್ಯಾಕೇಜ್ ನೀಡುವಂತೆ ಸರ್ಕಾರಕ್ಕೆ ಮನವಿ ನೀಡಲಾಗಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪಗೆ ಮನವಿ ಮಾಡಲಾಗಿದೆ. ಶೀಘ್ರವೇ ಸಿಎಂ ಈ ಬಗ್ಗೆ ನಿರ್ಧಾರ ಮಾಡಲಿದ್ದಾರೆ. ಉಳಿದ ಸಂಘಟನೆಗಳಿಗೆ ಪ್ಯಾಕೇಜ್ ಘೋಷಿಸುವ ಬಗ್ಗೆ ತೀರ್ಮಾನ ಮಾಡಲಿದ್ದಾರೆ ಎಂದು ವಿಧಾನಸೌಧದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಮಾಹಿತಿ ನೀಡಿದರು.

ಕೊವಿಡ್​ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ; ನೇಮಕಾತಿ ಪತ್ರ ನೀಡಿದ ಸಚಿವ ಸುರೇಶ್ ಕುಮಾರ್ ಕೊವಿಡ್​ನಿಂದ ನಿಧನರಾದ ಶಿಕ್ಷಕರ ಕುಟುಂಬಸ್ಥರಿಗೆ ಅನುಕಂಪದ ಆಧಾರದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಸರ್ಕಾರಿ ನೌಕರಿ ನೀಡಿದೆ. ನೌಕರಿಯ ನೇಮಕಾತಿ ಪತ್ರವನ್ನು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್​ ಇಂದು ವಿತರಣೆ ಮಾಡಿದ್ದಾರೆ. ಈವರೆಗೆ ಕೊವಿಡ್​ನಿಂದ ಮೃತಪಟ್ಟ 130 ಶಿಕ್ಷಕರ ಕುಟುಂಬ ಸದಸ್ಯರಿಗೆ ಸರ್ಕಾರಿ ಕೆಲಸ ನೀಡಲಾಗಿದೆ.

ಕೊವಿಡ್​ನಿಂದ ಶಿಕ್ಷಣ ಪರಿವಾರದ ಅನೇಕ ಶಿಕ್ಷಕರು ಅಗಲಿದ್ದಾರೆ. ಇದರಿಂದ ನಾಡಿಗೆ ಅಪಾರ ನಷ್ಟವಾಗಿದೆ.  ಮೃತ ಶಿಕ್ಷಕರು ತಮ್ಮ ಕುಟುಂಬಗಳಷ್ಟನ್ನೇ ಅಲ್ಲದೇ, ನಮ್ಮ ನಾಡಿನ ಶಾಲಾ ಮಕ್ಕಳೂ ತಮ್ಮ ನೆಚ್ಚಿನ ಶಿಕ್ಷಕರನ್ನು ಕಳೆದುಕೊಂಡಿದ್ದಾರೆ. ಇಂತಹ ಸಂದರ್ಭದಲ್ಲಿ ಶಿಕ್ಷಕರ ಕುಟುಂಬಗಳಿಗೆ ತಕ್ಷಣವೇ ಸ್ಪಂದಿಸಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ಸರ್ಕಾರಿ ನೌಕರಿ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ನೇಮಕಾತಿ ಪತ್ರ ಪಡೆದು ನೌಕರಿಗೆ ಸೇರ್ಪಡೆಯಾಗುತ್ತಿರುವವರಿಗೆ ಪರಿಣಾಮಕಾರಿ ವೃತ್ತಿ ತರಬೇತಿ ಮತ್ತು ಆಡಳಿತ ವ್ಯವಸ್ಥೆ ಕುರಿತ ಪರಿಚಯಾತ್ಮಕ ತರಬೇತಿ ನೀಡಲು ಇಲಾಖೆಯ ಅಧಿಕಾರಿಗಳಿಗೆ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದ್ದಾರೆ.

ಇದನ್ನೂ ಓದಿ:  ‘ನಾನಿನ್ನು ಡಾ. ರಾಹುಲ್​..’ಎಂದು ಖುಷಿಯಿಂದ ಹೇಳಿಕೊಂಡಿದ್ದ ವೈದ್ಯ ಕೊವಿಡ್​ 19ನಿಂದ ಸಾವು; ಆಸ್ಪತ್ರೆ ಬೆಡ್​ ಮೇಲೆ ಒಂದು ತಿಂಗಳು ಹೋರಾಟ

ಕೊವಿಡ್​ನಿಂದ ಮೃತಪಟ್ಟ ಶಿಕ್ಷಕರ ಕುಟುಂಬಸ್ಥರಿಗೆ ಸರ್ಕಾರಿ ನೌಕರಿ; ನೇಮಕಾತಿ ಪತ್ರ ನೀಡಿದ ಸಚಿವ ಸುರೇಶ್ ಕುಮಾರ್

(Covid lockdown package will reach Building labor workers by Monday says Karnataka labour minister Shivaram Hebbar)

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್