AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Updates: ರಾಜ್ಯದಲ್ಲಿ ಕೊರೊನಾ ಏರಿಕೆ, ಕಳೆದ 24 ಗಂಟೆಯಲ್ಲಿ 537 ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರುನಲ್ಲಿಯೇ 367 ಹೊಸ ಪ್ರಕರಣಗಳು ದಾಖಲಾಗಿದ್ದು, ನಗರವಾಸಿಗಳಲ್ಲಿ ಆತಂಕ ಶುರುವಾಗಿದೆ.

Karnataka Covid Updates: ರಾಜ್ಯದಲ್ಲಿ ಕೊರೊನಾ ಏರಿಕೆ, ಕಳೆದ 24 ಗಂಟೆಯಲ್ಲಿ 537 ಪ್ರಕರಣಗಳು ಪತ್ತೆ
ಕೊರೊನಾ
ವಿವೇಕ ಬಿರಾದಾರ
|

Updated on: Apr 22, 2023 | 10:59 AM

Share

ಬೆಂಗಳೂರು: ಕೊರೊನಾ ಸಾಂಕ್ರಾಮಿಕ (Covid-19) ರೋಗ ಕಡಿಮೆಯಾಯಿತೆಂದು ಅನ್ನುವಷ್ಟರಲ್ಲಿ ಮತ್ತೆ ಏರಿಕೆಯಾಗುತ್ತಿದ್ದು, ರಾಜ್ಯದ ಜನರಲ್ಲಿ ಆತಂಕ ಹೆಚ್ಚಿಸಿದೆ. ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 537 ಹೊಸ ಪ್ರಕರಣಗಳು ಪತ್ತೆಯಾಗಿವೆ. ಸಿಲಿಕಾನ್ ಸಿಟಿ ಬೆಂಗಳೂರುನಲ್ಲಿಯೇ (Bengaluru) 367 ಹೊಸ ಪ್ರಕರಣಗಳು ದಾಖಲಾಗಿದ್ದು, ನಗರವಾಸಿಗಳಲ್ಲಿ ಢವಢವ ಶುರುವಾಗಿದೆ. ರಾಜ್ಯದಲ್ಲಿ 2070 ಸಕ್ರಿಯ ಪ್ರಕರಣಗಳಿದ್ದು, ವಾರದ ಏರಿಕೆ ಪ್ರಮಾಣ 3.52ರಷ್ಟಿದೆ. ದೈನಂದಿನ ಏರಿಕೆಯು ಶೇ 3.06 ರಷ್ಟಿದೆ. ಕೊರೊನಾದಿಂದ ರಾಜ್ಯದಲ್ಲಿ ಕಳೆದ 15 ದಿನದಲ್ಲಿ 15 ಜನರು ಸಾವನ್ನಪ್ಪಿದ್ದಾರೆ. ಇನ್ನು ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 12 ಸಾವಿರ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಕೊರೊನಾದಿಂದ ಕಳೆದ 24 ಗಂಟೆಗಳಲ್ಲಿ 42 ಮಂದಿ‌ ಸಾವನ್ನಪ್ಪಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಇದನ್ನೂ ಓದಿ: ಸಾಂಕ್ರಾಮಿಕ ರೋಗ ಇನ್ನೂ ಮುಗಿದಿಲ್ಲ: ಕೋವಿಡ್ ಪ್ರಕರಣಗಳ ಬಗ್ಗೆ ನಿಗಾ ಇರಿಸುವಂತೆ 8 ರಾಜ್ಯಗಳಿಗೆ ಕೇಂದ್ರ ಸೂಚನೆ

ಎಚ್ಚರಿಕೆ ಗಂಟೆ ರವಾನಿಸಿದ ಕೇಂದ್ರ ಆರೋಗ್ಯ ಇಲಾಖೆ

ಕೋವಿಡ್ ಪಾಸಿಟಿವಿಟಿ ರೇಟ್ ಹೆಚ್ಚುತ್ತಿರುವುದರಿಂದ ಕೊರೊನಾ ಪರಿಸ್ಥಿತಿ ಮೇಲೆ ತೀವ್ರ ನಿಗಾ ವಹಿಸುವಂತೆ ಕೇಂದ್ರ ಸರ್ಕಾರ 8 ರಾಜ್ಯಗಳಿಗೆ ನಿರ್ದೇಶನ ನೀಡಿದೆ. ಉತ್ತರ ಪ್ರದೇಶ, ತಮಿಳುನಾಡು, ರಾಜಸ್ಥಾನ, ಮಹಾರಾಷ್ಟ್ರ, ಕೇರಳ, ಕರ್ನಾಟಕ, ಹರಿಯಾಣ ಮತ್ತು ದೆಹಲಿ ಈ ಎಂಟು ರಾಜ್ಯಗಳಿಗೆ ಭೂಷಣ್ ಪತ್ರ ಬರೆದಿದ್ದಾರೆ. ಈ ರಾಜ್ಯಗಳಲ್ಲಿ ಶೇಕಡಾ 10 ಕ್ಕಿಂತ ಹೆಚ್ಚು ಸಕಾರಾತ್ಮಕತೆಯ ಪ್ರಮಾಣ ಹೊಂದಿರುವ ಜಿಲ್ಲೆಗಳ ಸಂಖ್ಯೆ ಯುಪಿ (1), ತಮಿಳುನಾಡು (11), ರಾಜಸ್ಥಾನ (6), ಮಹಾರಾಷ್ಟ್ರ (8), ಕೇರಳ (14), ಹರಿಯಾಣ (12) ಮತ್ತು ದೆಹಲಿ (11).

ಕೊರೊನಾ ಲಕ್ಷಣಗಳ ಬಗ್ಗೆ ಅಲಕ್ಷ್ಯ ವಹಿಸಬೇಡಿ. ಪಾಸಿಟಿವಿಟಿ ಹೆಚ್ಚಿರುವ ಜಿಲ್ಲೆಗಳ ಮೇಲೆ ಹೆಚ್ಚು ನಿಗಾ ವಹಿಸಿ. ಕೊರೊನಾ ಹರಡದಂತೆ ಜಾಗರುಕತೆಯಿಂದಿರಿ. ಅಲ್ಲದೇ ಉಸಿರಾಟದ ತೊಂದರೆ, ಜ್ವರ ಮಾದರಿಯ ಐಎಲ್‌ಐ ಪ್ರಕರಣಗಳ ಬಗ್ಗೆ ನಿಗಾ ಇರಲಿ ಎಂದು ಕೇಂದ್ರ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಕೇಂದ್ರ ಸೂಚನೆ ಬೆನ್ನಲೆ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ