Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ ಚಾಲಕರಿಗೆ ಇನ್ನೂ ಬಾರದ ಕೊವಿಡ್​ ಪರಿಹಾರ ಪ್ಯಾಕೇಜ್​; ಧಾರವಾಡ ಆಟೋ ಚಾಲಕರ ಆಕ್ರೋಶ

Covid relief for auto drivers: ರಾಜ್ಯ ಸರ್ಕಾರ ಘೋಷಿಸಿದ್ದ 3 ಸಾವಿರ ರೂ. ಪರಿಹಾರ ಮೊತ್ತ ರಾಜ್ಯದ ಅನೇಕ ಕಡೆ ಆಟೋ ಚಾಲಕರಿಗೆ ಇನ್ನೂ ತಲುಪಿಲ್ಲ.  ​ಧಾರವಾಡದಲ್ಲಿಯೂ ಆಟೋ ಚಾಲಕರಿಗೆ ಪರಿಹಾರ ಸಿಗದಿರುವುದರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ.

ಆಟೋ ಚಾಲಕರಿಗೆ ಇನ್ನೂ ಬಾರದ ಕೊವಿಡ್​ ಪರಿಹಾರ ಪ್ಯಾಕೇಜ್​; ಧಾರವಾಡ ಆಟೋ ಚಾಲಕರ ಆಕ್ರೋಶ
ಆಟೋ ಚಾಲಕರಿಗೆ ಇನ್ನೂ ಬಾರದ ಸರ್ಕಾರದ ಪ್ಯಾಕೇಜ್​
Follow us
TV9 Web
| Updated By: ಸಾಧು ಶ್ರೀನಾಥ್​

Updated on: Jun 26, 2021 | 4:21 PM

ಧಾರವಾಡ: ಕರ್ನಾಟಕ ಸರ್ಕಾರ ಕೊರೊನಾ ಲಾಕ್​ಡೌನ್​​ ಪರಿಣಾಮ ಸಂತ್ರಸ್ತರಾದ ಕೆಲ ವರ್ಗದವರಿಗೆ ಪರಿಹಾರ ಘೋಷಿಸಿದೆ. ಆದರೆ ಈ ಮಹತ್ವಾಕಾಂಕ್ಷಿ ಯೋಜನೆ ಫಲಾನುಭವಿಗಳಿಗೆ ಸಕಾಲಕ್ಕೆ ತಲುಪುತ್ತಿಲ್ಲ  ಎಂಬ ಕೂಗು ಎದ್ದಿದೆ. ಅದರಲ್ಲೂ ಆಟೋ ಚಾಲಕರಿಗೆ ಪರಿಹಾರ ಕೈಗೆ ಬಾರದೆ ಪರದಾಡುವಂತಾಗಿದೆ.  

ರಾಜ್ಯ ಸರ್ಕಾರ ಘೋಷಿಸಿದ್ದ 3 ಸಾವಿರ ರೂ. ಪರಿಹಾರ ಮೊತ್ತ ರಾಜ್ಯದ ಅನೇಕ ಕಡೆ ಆಟೋ ಚಾಲಕರಿಗೆ ಇನ್ನೂ ತಲುಪಿಲ್ಲ.  ​ಧಾರವಾಡದಲ್ಲಿಯೂ ಆಟೋ ಚಾಲಕರಿಗೆ ಪರಿಹಾರ ಸಿಗದಿರುವುದರಿಂದ ಭಾರೀ ಆಕ್ರೋಶ ವ್ಯಕ್ತವಾಗಿದೆ. ಅರ್ಜಿ ಸಲ್ಲಿಸಿದ್ದರೂ ಪರಿಹಾರ ಸಿಗದ ಹಿನ್ನೆಲೆಯಲ್ಲಿ ಚಾಲಕರು ಆಕ್ರೋಶಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಆಟೋ ಚಾಲಕರ ಸಂಘದ ಕಾರ್ಯದರ್ಶಿ ಎಂ.ಎಂ.ಬೇಪಾರಿ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಚಾಲಕರು ಕರ್ನಾಟಕ ಸರ್ಕಾರದ ಕೋವಿಡ್ ಪ್ಯಾಕೇಜ್ ರೂ. 3000 ಪಡೆಯುವುದು ಹೇಗೆ?

ಹಂತ 1: ಸೇವಾಸಿಂಧು ಪೋರ್ಟಲ್ ಲಾಗ್​ ಇನ್ ಆಗಬೇಕು.

ಹಂತ 2: ಮುಖಪುಟ ಎಂಬುದರ ಆಯ್ಕೆ ಮೇಲೆ ಕ್ಲಿಕ್ ಮಾಡಿದಲ್ಲಿ, ಮೇಲ್ಭಾಗದಲ್ಲಿ ಇರುವಂಥ ಕೋವಿಡ್-19 ಎರಡನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ಆಟೋರಿಕ್ಷಾ ಚಾಲಕರು , ಟ್ಯಾಕ್ಸಿ ಚಾಲಕರು ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ಪರಿಹಾರ ವಿತರಣೆ ಎಂಬ ಆಯ್ಕೆ ಕಾಣುತ್ತದೆ. ಅದನ್ನು ಆಯ್ಕೆ ಮಾಡಬೇಕು.

ಹಂತ 3: ಅರ್ಜಿದಾರರ ಹೆಸರು, ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆ, ವಿಳಾಸ, ಡಿ.ಎಲ್​. ಹಾಗೂ ಅದರ ವ್ಯಾಲಿಡಿಟಿ, ಬ್ಯಾಡ್ಜ್​ ಸಂಖ್ಯೆ, ಲಾಕ್​ಡೌನ್​ಗಿಂತ ಮುಂಚೆ ಚಲಾಯಿಸುತ್ತಿದ್ದ ವಾಹನಕ್ಕೆ ಸಂಬಂಧಿಸಿದ ದಾಖಲೆ, ಬ್ಯಾಂಕ್ ವಿವರಗಳು ಹೀಗೆ ಕಡ್ಡಾಯವಾಗಿ ಭರ್ತಿ ಮಾಡಬೇಕಾದ ಮಾಹಿತಿಯನ್ನು ಕೆಂಪು ನಕ್ಷತ್ರ ಚಿಹ್ನೆಯಲ್ಲಿ ತೋರಿಸಲಾಗಿದೆ. ಅವನ್ನೆಲ್ಲ ಭರ್ತಿ ಮಾಡಬೇಕು.

ಹಂತ 4: ಘೋಷಣೆ ಇರುವಂಥ ಸ್ಥಳದಲ್ಲಿ ಚೌಕಾಕಾರದ ಗುರತುಗಳಿದ್ದು, ಅದನ್ನು ಆಯ್ಕೆ ಮಾಡಿಕೊಳ್ಳುವುದಕ್ಕೆ ಕ್ಲಿಕ್ ಮಾಡಬೇಕು.

ಹಂತ 5: ದೃಢೀಕರಣಕ್ಕಾಗಿ ಆರಂಕಿಯ ಸಂಖ್ಯೆಗಳಿರುತ್ತವೆ. ಅದನ್ನು ಟೈಪ್​ ಮಾಡಿ, ದೃಢೀಕರಿಸಿದ ನಂತರ Submit ಎಂಬುದರ ಮೇಲೆ ಕ್ಲಿಕ್ ಮಾಡಬೇಕು.

ಅಂದ ಹಾಗೆ, ಕೋವಿಡ್ ಪ್ಯಾಕೇಜ್ ಪರಿಹಾರ ಧನವು ಚಾಲನೆ ಪರವಾನಗಿ ಪ್ರಮಾಣಪತ್ರ ಹೊಂದಿರುವ ಹಾಗೂ ಅಗತ್ಯವಿರುವ ಚಾಲಕರ ಬ್ಯಾಂಕ್ ಖಾತೆಗೆ DBT (ನೇರ ಅನುಕೂಲ ವರ್ಗಾವಣೆ) ಮೂಲಕವೇ ಸಂದಾಯ ಆಗುತ್ತದೆ. ಕೆಲವು ಆಟೋ, ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್ ಮಾಲೀಕರು ಹೆಚ್ಚಿನ ಸಂಖ್ಯೆಯ ವಾಹನಗಳನ್ನು ಹೊಂದಿದ್ದು, ಅವರಿಗೆ ಪರಿಹಾರ ಧನ ಸಂದಾಯವಾದಲ್ಲಿ ಜೀವನ ನಿರ್ವಹಣೆಯನ್ನು ಎದುರಿಸುತ್ತಿರುವ ಚಾಲಕರಿಗೆ ಸಿಗದಂತಾಗುತ್ತದೆ. ಆದ್ದರಿಂದ ನಕಲು ಅಥವಾ ದುಪ್ಪಟ್ಟು ಪಾವತಿ ಆಗದಂತೆ ಅವರ ಆಧಾರ್, ಪ್ಯಾನ್ ಕಾರ್ಡ್, ಬ್ಯಾಂಕ್ ಖಾತೆಗೆ ಮಾತ್ರ ಲಿಂಕ್ ಆಗಿರುವ ಬಗ್ಗೆ ಗಮನಹರಿಸಿ, ವರ್ಗಾಯಿಸಬೇಕು.

ಈ ಪ್ಯಾಕೇಜ್ ಪರಿಹಾರವನ್ನು ಪಡೆದುಕೊಳ್ಳುವುದಕ್ಕೆ ಯಾವುದೇ ಮಧ್ಯವರ್ತಿಗಳ ಅಗತ್ಯ ಇಲ್ಲ. ನೇರವಾಗಿ ಆನ್​ಲೈನ್​ನಲ್ಲಿ ಅರ್ಜಿ ಹಾಕಬಹುದು. Mozilla Firefox ಅಥವಾ Google Chrome ಬ್ರೌಸರ್ ಬಳಸಿ, ಅರ್ಜಿ ಸಲ್ಲಿಸುವುದು ಉತ್ತಮ. ಇನ್ನೂ ಏನಾದರೂ ಪ್ರಶ್ನೆಗಳು ಅಥವಾ ಅನುಮಾನಗಳು ಅಥವಾ ತಾಂತ್ರಿಕ ಸಮಸ್ಯೆಗಳು ಎದುರಾದಲ್ಲಿ ಸಹಾಯವಾಣಿ ಸಂಖ್ಯೆ 80883 04855, 63617 99796, 93802 04364, 93802 06704 ಇವುಗಳನ್ನು ಸರ್ಕಾರಿ ರಜಾ ದಿನಗಳನ್ನು ಹೊರತುಪಡಿಸಿ, ಉಳಿದ ದಿನಗಳಲ್ಲಿ ಬೆಳಗ್ಗೆ 9ರಿಂದ ಸಂಜೆ 6 ಗಂಟೆ ಮಧ್ಯೆ ಸಂಪರ್ಕಿಸಬಹುದು.

ಅರ್ಜಿ ಸಲ್ಲಿಕೆ ನಂತರ ಅದು ಮುಂದಿನ ಹಂತಕ್ಕೆ ಹೋಗುತ್ತದೆ. ಎಲ್ಲ ಪರಿಶೀಲಿಸಿ, ಸರಿಯಾಗಿದೆ ಎಂದಾದಲ್ಲಿ ಪರಿಹಾರ ಮೊತ್ತ ನೇರವಾಗಿ ಬ್ಯಾಂಕ್​ ಖಾತೆಗೆ ಬರುತ್ತದೆ. ಈ ಹಣಕ್ಕಾಗಿ ಯಾರ ಪ್ರಭಾವ, ಮಧ್ಯಸ್ತಿಕೆ, ಸಹಾಯ ಏನೂ ಅಗತ್ಯ ಇಲ್ಲ. ಆದ್ದರಿಂದ ಚಾಲಕರು ಸಂಬಂಧಪಟ್ಟ ಅರ್ಜಿ ಸಲ್ಲಿಸಿದರೆ ಸಾಕು.

(Covid relief fund for auto drivers in dharwad not yet disbursed)

ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಪತಿ ಉಪೇಂದ್ರ ಅವರ ಮಿಮಿಕ್ರಿ ಮಾಡಿ ರಂಜಿಸಿದ ಪ್ರಿಯಾಂಕಾ ಉಪೇಂದ್ರ
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಅಬ್ಬಬ್ಬಾ.. ಚೈತ್ರಾ ವಾಸುದೇವನ್ ಮದುವೆ ಸೀರೆ ಬೆಲೆ ಬರೋಬ್ಬರಿ 2 ಲಕ್ಷ ರೂ!
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಕಾಪು ಹೊಸ ಮಾರಿಗುಡಿಗೆ ಪತ್ನಿ ಹೆಸರಲ್ಲಿ 9,99,999 ರೂ ಡಿಕೆಶಿ​ ದೇಣಿಗೆ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಹಾಲಮತ ಸಮಾಜದ ಕೈಯಲ್ಲಿರುವ ಅಧಿಕಾರ ಬಿಡಿಸಿಕೊಳ್ಳೋದು ಸುಲಭವಲ್ಲ: ಕೋಡಿಶ್ರೀ
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಕರ್ನಾಟಕದ ಬಗ್ಗೆ ಮಹತ್ವದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಎಲ್ಲಿಸ್ ಪೆರ್ರಿ ಸೂಪರ್​​ವುಮೆನ್ ಕ್ಯಾಚ್: ವಿಡಿಯೋ ವೈರಲ್
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಯಾದಗಿರಿ: ಸುರಪುರ ಪಟ್ಟಣದಲ್ಲಿ ಒಂದೇ ರಾತ್ರಿಯಲ್ಲಿ 7 ಅಂಗಡಿಗಳ ಕಳ್ಳತನ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ಕೊಪ್ಪಳದಲ್ಲಿ ಕಾರ್ಖಾನೆ ಆರಂಭಿಸುವುದು ಕೇಂದ್ರ ಸಂಬಂಧಿಸಿದ್ದಲ್ಲ: ಹೆಚ್​ಡಿಕೆ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ನಿರೂಪಕಿ ಚೈತ್ರಾ ವಾಸುದೇವನ್ ಎರಡನೇ ವಿವಾಹ, ಮಾಂಗಲ್ಯಧಾರಣೆ ವಿಡಿಯೋ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ
ಸುಳ್ಳು ಹೇಳಿದರೆ ಪಾಪ ತಟ್ಟುತ್ತದೆಯೇ? ವಿಡಿಯೋ ನೋಡಿ