AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಅಕ್ರಮ: ಎಫ್​ಐಆರ್​ ದಾಖಲು, ಹಲವು ರಾಜಕಾರಣಿಗಳಿಗೆ ಶುರುವಾಯ್ತು ಸಂಕಷ್ಟ!

ಕರ್ನಾಟಕದಲ್ಲಿ ಕೊವಿಡ್​ನಲ್ಲಿಅಕ್ರಮ ಆರೋಪ ಪ್ರಕರಣ ಮತ್ತೊಂದು ಹಂತಕ್ಕೆ ಹೋಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೊವಿಡ್ ಹಗರಣ ಸಂಬಂಧ ಇದೀಗ ಎಫ್​ಐಆರ್ ದಾಖಲಾಗಿದೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಅಂದಿನ ಆರೋಗ್ಯ ಸಚಿವರಿಗೆ ಢವಢವ ಶುರುವಾಗಿದೆ. ಇನ್ನು ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಲಿದೆ.

ಕೊವಿಡ್ ಅಕ್ರಮ: ಎಫ್​ಐಆರ್​ ದಾಖಲು, ಹಲವು ರಾಜಕಾರಣಿಗಳಿಗೆ ಶುರುವಾಯ್ತು ಸಂಕಷ್ಟ!
ರಾಚಪ್ಪಾಜಿ ನಾಯ್ಕ್
| Edited By: |

Updated on:Dec 13, 2024 | 11:16 PM

Share

ಬೆಂಗಳೂರು, (ಡಿಸೆಂಬರ್ 13): ಈ ಹಿಂದಿನ ಬಿಜೆಪಿ ಸರ್ಕಾರವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಐಆರ್ ದಾಖಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ಅವರ ದೂರು ಆಧರಿಸಿ ಬೆಂಗಳೂರಿನ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  ಐವರು ವೈದ್ಯರು, ಲ್ಯಾಗ್​ ಎಕ್ಸ್​ಪರ್ಟ್​​ ಕಂಪನಿ‌ ಹಾಗೂ ಜನಪ್ರತಿನಿಧಿಗಳ‌ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ SIT ರಚನೆ ಮಾಡುವ ಸಾಧ್ಯತೆ ಇದೆ.  ಹೀಗಾಗಿ ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಲಿದೆ.

ಪಿಪಿಇ ಕಿಟ್, N-95 ಮಾಸ್ಕ್​ ಖರದಿಯಲ್ಲಿ ಅವ್ಯವಹಾರವಾಗಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಹಾಗೂ ನಿಯಮ ಬಾಹಿರವಾಗಿ ಹೆಚ್ಚುವರಿ ಕಿಟ್ ಖರೀದಿಗೆ ಆದೇಶ, ಕೋಟ್ಯಂತರ ಹಣ ಸಂದಾಯದ ಬಳಿಕವೂ ಕಿಟ್​ ನೀಡಿಲ್ಲ. ಹಾಗೇ ಷಡ್ಯಂತ್ರ ರೂಪಿಸಿ ಜನರ ಹಣ ದುರ್ಬಳಕೆ ಆರೋಪದಡಿ FIR ದಾಖಲಾಗಿದೆ.

ಒಟ್ಟು 167 ಕೋಟಿಗೂ ಅಧಿಕ ಹಣ ಅಕ್ರಮ ಆರೋಪ ಕೇಳಿಬಂದಿದ್ದು, ಡಾ.ಗಿರೀಶ್, ಜಿ.ಪಿ.ರಘು, ​.ಮುನಿರಾಜ್, ಲಾಜ್ ಎಕ್ಸ್​ಪೋರ್ಟ್, ಪ್ರೂಡೆಂಟ್‌ ಮ್ಯಾನೆಜ್‌ಮೆಂಟ್‌ ಸಲೂಷನ್ಸ್ ಕಂಪನಿ ಸೇರಿದಂತೆ ಕೆಲ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಇನ್ನು ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ಅಂದಿನ ಸಚಿವರು ಹಾಗು ಕೆಲ ಜನಪ್ರತಿನಿಧಿಗಳ ಎದೆಯಲ್ಲಿ ಢವಢವ ಶುರುವಾಗಿದೆ.

Published On - 11:14 pm, Fri, 13 December 24

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ