ಕೊವಿಡ್ ಅಕ್ರಮ: ಎಫ್​ಐಆರ್​ ದಾಖಲು, ಹಲವು ರಾಜಕಾರಣಿಗಳಿಗೆ ಶುರುವಾಯ್ತು ಸಂಕಷ್ಟ!

ಕರ್ನಾಟಕದಲ್ಲಿ ಕೊವಿಡ್​ನಲ್ಲಿಅಕ್ರಮ ಆರೋಪ ಪ್ರಕರಣ ಮತ್ತೊಂದು ಹಂತಕ್ಕೆ ಹೋಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೊವಿಡ್ ಹಗರಣ ಸಂಬಂಧ ಇದೀಗ ಎಫ್​ಐಆರ್ ದಾಖಲಾಗಿದೆ. ಹೀಗಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಅಂದಿನ ಆರೋಗ್ಯ ಸಚಿವರಿಗೆ ಢವಢವ ಶುರುವಾಗಿದೆ. ಇನ್ನು ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಲಿದೆ.

ಕೊವಿಡ್ ಅಕ್ರಮ: ಎಫ್​ಐಆರ್​ ದಾಖಲು, ಹಲವು ರಾಜಕಾರಣಿಗಳಿಗೆ ಶುರುವಾಯ್ತು ಸಂಕಷ್ಟ!
Edited By:

Updated on: Dec 13, 2024 | 11:16 PM

ಬೆಂಗಳೂರು, (ಡಿಸೆಂಬರ್ 13): ಈ ಹಿಂದಿನ ಬಿಜೆಪಿ ಸರ್ಕಾರವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ಎಫ್​ಐಆರ್ ದಾಖಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ಮುಖ್ಯ ಲೆಕ್ಕಾಧಿಕಾರಿ ಡಾ.ಎಂ.ವಿಷ್ಣುಪ್ರಸಾದ್ ಅವರ ದೂರು ಆಧರಿಸಿ ಬೆಂಗಳೂರಿನ ವಿಧಾನಸೌಧ ಪೊಲೀಸ್​ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.  ಐವರು ವೈದ್ಯರು, ಲ್ಯಾಗ್​ ಎಕ್ಸ್​ಪರ್ಟ್​​ ಕಂಪನಿ‌ ಹಾಗೂ ಜನಪ್ರತಿನಿಧಿಗಳ‌ ವಿರುದ್ಧ ಎಫ್​ಐಆರ್ ದಾಖಲಾಗಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ಪ್ರಕರಣದ ತನಿಖೆಗೆ SIT ರಚನೆ ಮಾಡುವ ಸಾಧ್ಯತೆ ಇದೆ.  ಹೀಗಾಗಿ ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಸಂಚಲನಕ್ಕೆ ಕಾರಣವಾಗಲಿದೆ.

ಪಿಪಿಇ ಕಿಟ್, N-95 ಮಾಸ್ಕ್​ ಖರದಿಯಲ್ಲಿ ಅವ್ಯವಹಾರವಾಗಿರುವುದು ಮೇಲ್ನೋಟಕ್ಕೆ ಕಂಡುಬಂದ ಹಿನ್ನೆಲೆಯಲ್ಲಿ ಹಾಗೂ ನಿಯಮ ಬಾಹಿರವಾಗಿ ಹೆಚ್ಚುವರಿ ಕಿಟ್ ಖರೀದಿಗೆ ಆದೇಶ, ಕೋಟ್ಯಂತರ ಹಣ ಸಂದಾಯದ ಬಳಿಕವೂ ಕಿಟ್​ ನೀಡಿಲ್ಲ. ಹಾಗೇ ಷಡ್ಯಂತ್ರ ರೂಪಿಸಿ ಜನರ ಹಣ ದುರ್ಬಳಕೆ ಆರೋಪದಡಿ FIR ದಾಖಲಾಗಿದೆ.

ಒಟ್ಟು 167 ಕೋಟಿಗೂ ಅಧಿಕ ಹಣ ಅಕ್ರಮ ಆರೋಪ ಕೇಳಿಬಂದಿದ್ದು, ಡಾ.ಗಿರೀಶ್, ಜಿ.ಪಿ.ರಘು, ​.ಮುನಿರಾಜ್, ಲಾಜ್ ಎಕ್ಸ್​ಪೋರ್ಟ್, ಪ್ರೂಡೆಂಟ್‌ ಮ್ಯಾನೆಜ್‌ಮೆಂಟ್‌ ಸಲೂಷನ್ಸ್ ಕಂಪನಿ ಸೇರಿದಂತೆ ಕೆಲ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳ ವಿರುದ್ಧ ಎಫ್​ಐಆರ್ ದಾಖಲಾಗಿದೆ. ಇನ್ನು ಈ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್​ಐಟಿ ರಚನೆ ಮಾಡುವ ಸಾಧ್ಯತೆಗಳಿವೆ. ಹೀಗಾಗಿ ಅಂದಿನ ಸಚಿವರು ಹಾಗು ಕೆಲ ಜನಪ್ರತಿನಿಧಿಗಳ ಎದೆಯಲ್ಲಿ ಢವಢವ ಶುರುವಾಗಿದೆ.

Published On - 11:14 pm, Fri, 13 December 24

Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
Follow Us