AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಗೆದ್ದ ಅಜ್ಜಿ; ಕೊರೊನಾ ಮಣಿಸುವ ಮೂಲಕ ಅಚ್ಚರಿ ಮೂಡಿಸಿದ 108 ವರ್ಷದ ಶತಾಯುಷಿ ಅಜ್ಜಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಸರ್ಕಾರಿ ಕೊವಿಡ್ ಆಸ್ವತ್ರೆಯಲ್ಲಿ ಇಂದು ಸಂಭ್ರಮದ ವಾತಾವರಣ ಕಂಡು ಬಂದಿದೆ. ಏಕೆಂದರೆ ತಾಲೂಕಿನ ಬುಳ್ಳಹಳ್ಳಿ ಗ್ರಾಮದ ಶತಾಯುಷಿ 108 ವರ್ಷದ ಅಕ್ಕಾಯಮ್ಮ ಎಂಬ ವೃದ್ದೆ ಕೊರೊನಾವನ್ನು ಮಣಿಸಿ ಗೆದ್ದಿದ್ದಾರೆ.

ಕೊರೊನಾ ಗೆದ್ದ ಅಜ್ಜಿ; ಕೊರೊನಾ ಮಣಿಸುವ ಮೂಲಕ ಅಚ್ಚರಿ ಮೂಡಿಸಿದ 108 ವರ್ಷದ ಶತಾಯುಷಿ ಅಜ್ಜಿ
ಕೊರೊನಾ ಗೆದ್ದ 108 ವರ್ಷದ ಶತಾಯುಷಿ ಅಜ್ಜಿ
TV9 Web
| Edited By: |

Updated on: Jun 03, 2021 | 1:34 PM

Share

ದೇವನಹಳ್ಳಿ: ಕೊರೊನಾ ಮಹಾಮಾರಿ ವೃದ್ಧರು ಯುವಕರು ಅನ್ನದೆ ಸಾಕಷ್ಟು ಜನರನ್ನ ತನ್ನ ಬಲಿಪಡೆದುಕೊಳ್ಳುತ್ತಿದೆ. ಆದರೆ ಇದರ ನಡುವೆ ಒಂದು ಸಂತೋಷ ಸುದ್ದಿ ಹೊರ ಬಿದ್ದಿದೆ. ಇಲ್ಲೊಂದು ಸಂಪೂರ್ಣ ಕುಟುಂಬದ ಜೊತೆಗೆ 108 ವರ್ಷದ ಶತಾಯುಷಿ ಅಜ್ಜಿ ಕೊರೊನಾ ಗೆದ್ದು ಬರುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಪಟ್ಟಣದ ಸರ್ಕಾರಿ ಕೊವಿಡ್ ಆಸ್ವತ್ರೆಯಲ್ಲಿ ಇಂದು ಸಂಭ್ರಮದ ವಾತಾವರಣ ಕಂಡು ಬಂದಿದೆ. ಏಕೆಂದರೆ ತಾಲೂಕಿನ ಬುಳ್ಳಹಳ್ಳಿ ಗ್ರಾಮದ ಶತಾಯುಷಿ 108 ವರ್ಷದ ಅಕ್ಕಾಯಮ್ಮ ಎಂಬ ವೃದ್ದೆ ಕೊರೊನಾವನ್ನು ಮಣಿಸಿ ಗೆದ್ದಿದ್ದಾರೆ. ಹೀಗಾಗಿ ಶತಾಯುಷಿ ಅಜ್ಜಿಗೆ ಶುಭ ಕೂರುವ ಮೂಲಕ ಬೀಳ್ಕೂಡುಗೆ ಕೊಟ್ಟು ಆಸ್ಪತ್ರೆ ಸಿಬ್ಬಂದಿ ಡಿಸ್ಚಾರ್ಜ್ ಮಾಡಿದ್ದಾರೆ.

ಕೆಲ ದಿನಗಳ ಹಿಂದೆ ಅಕ್ಕಾಯಮ್ಮರಿಗೆ ಪಾಸಿಟಿವ್ ಬಂದಿತ್ತು. ಹೀಗಾಗಿ ಅವರನ್ನು ದೇವನಹಳ್ಳಿ ಸರ್ಕಾರಿ ತಾಲೂಕು ಆಸ್ಪತ್ರೆಗೆ ಸೇರಿಸಿ ಕೊರೊನಾಗೆ ಚಿಕಿತ್ಸೆ ಕೊಡಿಸಲಾಗಿತ್ತು. ಸತತ 15 ದಿನಗಳ ಕಾಲ ಚಿಕಿತ್ಸೆ ಪಡೆದ ಅಕ್ಕಾಯಮ್ಮ ಇಂದು ಕೊರೊನಾದಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದು ಕೊರೊನಾವನ್ನ ಮಣಿಸಿ ಗೆದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ವತ್ರೆ ವೈದ್ಯರು ಸಿಬ್ಬಂದಿ ಸೇರಿದಂತೆ ತಾಲೂಕು ಆರೋಗ್ಯಾಧಿಕಾರಿ ಶತಾಯುಷಿ ಅಜ್ಜಿಗೆ ಆತ್ಮೀಯವಾಗಿ ಬೀಳ್ಕೂಡುಗೆ ನೀಡುವ ಮೂಲಕ ಆಸ್ವತ್ರೆಯಿಂದ ಮನೆಗೆ ಕಳಿಸಿಕೊಟ್ಟಿದ್ದಾರೆ.

ಶತಾಯುಷಿ ಅಕ್ಕಾಯಮ್ಮ ಕುಟುಂಬದಲ್ಲಿ ನಾಲ್ವರಿಗೆ ಕಳೆದ ತಿಂಗಳು ಕೊರೊನಾ ಪಾಸಿಟಿವ್ ಬಂದಿದ್ದು ಎಲ್ಲರಿಗೂ ಕೊರೊನಾ ಟೆಸ್ಟ್ ಮಾಡಿದಾಗ ಶತಾಯುಷಿ ವೃದ್ದೆಗೂ ಪಾಸಿಟಿವ್ ಬಂದಿತ್ತು. ಹೀಗಾಗಿ ಕಳೆದ ತಿಂಗಳು 22 ರಂದು ಆಸ್ವತ್ರೆಗೆ ದಾಖಲಿಸಿದ್ದ ಕುಟುಂಬಸ್ಥರು ಸೇರಿದಂತೆ ಗ್ರಾಮಸ್ಥರಿಗೂ ಅಜ್ಜಿಗೆ ವಯ್ಯಸ್ಸಾಗಿರೂ ಕಾರಣ ಏನಾಗುತ್ತೋ ಎನ್ನುವ ಆತಂಕದಲ್ಲಿದ್ದರು. ಆದ್ರೆ ಇದೀಗ ಶತಾಯುಷಿ ವೃದ್ದೆ 15 ದಿನಗಳಲ್ಲೇ ಸಂಪೂರ್ಣ ಗುಣಮುಖಳಾರಾಗಿ ವಾಪಸ್ ಗ್ರಾಮಕ್ಕೆ ತೆರಳಿರುವುದು ಎಲ್ಲರ ಸಂತಸಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ಕೊರೊನಾ ಗೆದ್ದ ಬಳ್ಳಾರಿಯ ಶತಾಯುಷಿ ದಂಪತಿ; ಹದಿನೈದು ದಿನಗಳಲ್ಲಿ ಕೊವಿಡ್​ನಿಂದ ಗುಣಮುಖ

Follow Us
Web contact
Web contact

TV9 Kannada

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ