AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್; ಹೇಗಿರಲಿದೆ ಲಸಿಕೆ ನೀಡುವ ಡ್ರೈ ರನ್ ಪ್ರಕ್ರಿಯೆ?

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್ ನಡೆಯಲ್ಲಿದ್ದು, ಮೊದಲಿಗೆ ಬೆಂಗಳೂರು, ಕಲ್ಬುರ್ಗಿ, ಮೈಸೂರು, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿ ಜಿಲ್ಲೆಯ 3 ಕೇಂದ್ರಗಳಲ್ಲಿ ಲಸಿಕೆ ಡ್ರೈ ರನ್ ನಡೆಸಲಾಗುತ್ತದೆ.

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್; ಹೇಗಿರಲಿದೆ ಲಸಿಕೆ ನೀಡುವ ಡ್ರೈ ರನ್ ಪ್ರಕ್ರಿಯೆ?
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
|

Updated on:Jan 02, 2021 | 10:44 AM

Share

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್ ನಡೆಯಲ್ಲಿದ್ದು, ಮೊದಲಿಗೆ ಬೆಂಗಳೂರು, ಕಲ್ಬುರ್ಗಿ, ಮೈಸೂರು, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿ ಜಿಲ್ಲೆಯ 3 ಕೇಂದ್ರಗಳಲ್ಲಿ ಲಸಿಕೆ ಡ್ರೈ ರನ್ ನಡೆಸಲಾಗುತ್ತದೆ. ಪ್ರತಿ ಆರೋಗ್ಯ ಕೇಂದ್ರದಲ್ಲಿ 5 ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ನಿಯೋಜಿತ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.

ಹೇಗಿರಲಿದೆ ಲಸಿಕೆ ನೀಡುವ ಪ್ರಕ್ರಿಯೆ? ಆರೋಗ್ಯ ಕೇಂದ್ರದಲ್ಲಿರುವ ಕೊರೊನಾ ವಾರಿಯರ್ಸ್‌ಗಳನ್ನು ಫಲಾನುಭವಿಗಳಾಗಿ ಆಯ್ಕೆ ಮಾಡಲಾಗಿದೆ. ಇಂದು ಮುಂಜಾನೆ ಹತ್ತು ಗಂಟೆಯಿಂದ ಹನ್ನೆರಡು ಗಂಟೆವರಗೆ ಮೂರು ಕೇಂದ್ರಗಳಲ್ಲಿ ಏಕಕಾಲಕ್ಕೆ ಡ್ರೈ ರನ್ ನಡೆಯಲಿದೆ. ಆಯ್ಕೆಯಾದ ಫಲಾನುಭವಿಗಳು ತಮ್ಮ ಹೆಸರು ನೋಂದಣಿ ಮಾಡುವಾಗ ಯಾವ ದಾಖಲಾತಿ ನೀಡಿದ್ದಾರೋ ಆ ದಾಖಲಾತಿಯನ್ನ ವ್ಯಾಕ್ಸಿನ್ ಪಡೆಯಲು ಬರುವಾಗ ತರಲು ಸೂಚಿಸಲಾಗಿದೆ. ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಓಟರ್ ಐಡಿ ತರಲು ಹೇಳಿದ್ದಾರೆ.

ಪ್ರತಿ ಕೇಂದ್ರದಲ್ಲಿ ಐದು ಜನ ಸಿಬ್ಬಂದಿ ನಿಯೋಜಿಸಲಾಗುತ್ತದೆ. ನಿಯೋಜಿತ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಆಯ್ಕೆಯಾದ ಫಲಾನುಭವಿ ನಿಗದಿ ಪಡಿಸಿದ ಕೇಂದ್ರಕ್ಕೆ ಬರ್ತಾನೆ. ಬಳಿಕ ಕೇಂದ್ರಕ್ಕೆ ಬಂದ ಫಲಾನುಭವಿಯ ದಾಖಲಾತಿ ಪರಿಶೀಲನೆ ನಡೆಯುತ್ತದೆ. ನಿಜವಾದ ಫಲಾನುಭವಿ ಹೌದೋ ಅಲ್ಲವೋ ಅನ್ನೋದನ್ನು ಕನ್ಪರ್ಮ್ ಮಾಡಿಕೊಳ್ಳಲಾಗುತ್ತದೆ. ಕನ್ಪರ್ಮ್ ಆದ ಮೇಲೆ ವೈಟಿಂಗ್ ರೂಮ್​ನಲ್ಲಿ ಕೂರಿಸಲಾಗುತ್ತದೆ. ವೈಟಿಂಗ್ ರೂಮ್​ನಲ್ಲಿ ಓರ್ವ ಸಿಬ್ಬಂದಿ ಫಲಾನುಭವಿಗೆ ವ್ಯಾಕ್ಸಿನ್ ಬಗ್ಗೆ ಮಾಹಿತಿ ನೀಡುತ್ತಾನೆ.

ವೈಟಿಂಗ್ ರೂಮ್​ನಲ್ಲಿರುವ ಓರ್ವ ಫಲಾನುಭವಿಯನ್ನು ವ್ಯಾಕ್ಸಿನ್ ರೂಮ್​ಗೆ ಕರೆದುಕೊಂಡು ಹೋಗಲಾಗುತ್ತದೆ. ವ್ಯಾಕ್ಸಿನ್ ರೂಮ್​ನಲ್ಲಿರುವ ಸಿಬ್ಬಂದಿ ಫಲಾನುಭವಿಗೆ ವ್ಯಾಕ್ಸಿನ್ ನೀಡ್ತಾನೆ. ವ್ಯಾಕ್ಸಿನ್ ಪಡೆದ ಫಲಾನುಭವಿಯನ್ನು ನಿಗಾ ಕೋಣೆಗೆ ಕರೆದುಕೊಂಡು ಹೋಗಲಾಗುತ್ತದೆ. ವ್ಯಾಕ್ಸಿನ್ ಪಡೆದ ಫಲಾನುಭವಿ ನಿಗಾ ಕೋಣೆಯಲ್ಲಿ ಮೂವತ್ತು ನಿಮಿಷ ಇರಬೇಕಾಗುತ್ತದೆ. ಮೂವತ್ತು ನಿಮಿಷದಲ್ಲಿ ಯಾವುದೇ ಸಮಸ್ಯೆ ಕಂಡು ಬರದೇ ಇದ್ರೆ ಆತನನ್ನು ಮನೆಗೆ ಕಳುಹಿಸಲಾಗುತ್ತದೆ.

Published On - 8:03 am, Sat, 2 January 21

Follow Us
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ದೆಹಲಿಯಲ್ಲಿ ಪ್ರಧಾನಿ ಮೋದಿಯನ್ನು ಭೇಟಿಯಾದ ಕೆನಡಾ ಪಿಎಂ ಮಾರ್ಕ್ ಕಾರ್ನಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ
ಯುದ್ಧ ಪೀಡಿತ ಪ್ರದೇಶದಲ್ಲಿರೋ ಕನ್ನಡಿಗರ ಬಗ್ಗೆ ಕುಮಾರಸ್ವಾಮಿ ಶಾಕಿಂಗ್ ಹೇಳಿ