AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್; ಹೇಗಿರಲಿದೆ ಲಸಿಕೆ ನೀಡುವ ಡ್ರೈ ರನ್ ಪ್ರಕ್ರಿಯೆ?

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್ ನಡೆಯಲ್ಲಿದ್ದು, ಮೊದಲಿಗೆ ಬೆಂಗಳೂರು, ಕಲ್ಬುರ್ಗಿ, ಮೈಸೂರು, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿ ಜಿಲ್ಲೆಯ 3 ಕೇಂದ್ರಗಳಲ್ಲಿ ಲಸಿಕೆ ಡ್ರೈ ರನ್ ನಡೆಸಲಾಗುತ್ತದೆ.

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್; ಹೇಗಿರಲಿದೆ ಲಸಿಕೆ ನೀಡುವ ಡ್ರೈ ರನ್ ಪ್ರಕ್ರಿಯೆ?
ಸಾಂದರ್ಭಿಕ ಚಿತ್ರ
ಪೃಥ್ವಿಶಂಕರ
|

Updated on:Jan 02, 2021 | 10:44 AM

Share

ರಾಜ್ಯದ 5 ಜಿಲ್ಲೆಗಳಲ್ಲಿಂದು ಕೊವಿಡ್ ವ್ಯಾಕ್ಸಿನ್ ಡ್ರೈ ರನ್ ನಡೆಯಲ್ಲಿದ್ದು, ಮೊದಲಿಗೆ ಬೆಂಗಳೂರು, ಕಲ್ಬುರ್ಗಿ, ಮೈಸೂರು, ಬೆಳಗಾವಿ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಡ್ರೈ ರನ್ ನಡೆಸಲು ತೀರ್ಮಾನಿಸಲಾಗಿದೆ. ಪ್ರತಿ ಜಿಲ್ಲೆಯ 3 ಕೇಂದ್ರಗಳಲ್ಲಿ ಲಸಿಕೆ ಡ್ರೈ ರನ್ ನಡೆಸಲಾಗುತ್ತದೆ. ಪ್ರತಿ ಆರೋಗ್ಯ ಕೇಂದ್ರದಲ್ಲಿ 5 ಸಿಬ್ಬಂದಿ ನಿಯೋಜನೆ ಮಾಡಲಾಗಿದ್ದು, ನಿಯೋಜಿತ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ.

ಹೇಗಿರಲಿದೆ ಲಸಿಕೆ ನೀಡುವ ಪ್ರಕ್ರಿಯೆ? ಆರೋಗ್ಯ ಕೇಂದ್ರದಲ್ಲಿರುವ ಕೊರೊನಾ ವಾರಿಯರ್ಸ್‌ಗಳನ್ನು ಫಲಾನುಭವಿಗಳಾಗಿ ಆಯ್ಕೆ ಮಾಡಲಾಗಿದೆ. ಇಂದು ಮುಂಜಾನೆ ಹತ್ತು ಗಂಟೆಯಿಂದ ಹನ್ನೆರಡು ಗಂಟೆವರಗೆ ಮೂರು ಕೇಂದ್ರಗಳಲ್ಲಿ ಏಕಕಾಲಕ್ಕೆ ಡ್ರೈ ರನ್ ನಡೆಯಲಿದೆ. ಆಯ್ಕೆಯಾದ ಫಲಾನುಭವಿಗಳು ತಮ್ಮ ಹೆಸರು ನೋಂದಣಿ ಮಾಡುವಾಗ ಯಾವ ದಾಖಲಾತಿ ನೀಡಿದ್ದಾರೋ ಆ ದಾಖಲಾತಿಯನ್ನ ವ್ಯಾಕ್ಸಿನ್ ಪಡೆಯಲು ಬರುವಾಗ ತರಲು ಸೂಚಿಸಲಾಗಿದೆ. ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಓಟರ್ ಐಡಿ ತರಲು ಹೇಳಿದ್ದಾರೆ.

ಪ್ರತಿ ಕೇಂದ್ರದಲ್ಲಿ ಐದು ಜನ ಸಿಬ್ಬಂದಿ ನಿಯೋಜಿಸಲಾಗುತ್ತದೆ. ನಿಯೋಜಿತ ಸಿಬ್ಬಂದಿಗೆ ಈಗಾಗಲೇ ತರಬೇತಿ ನೀಡಲಾಗಿದೆ. ಆಯ್ಕೆಯಾದ ಫಲಾನುಭವಿ ನಿಗದಿ ಪಡಿಸಿದ ಕೇಂದ್ರಕ್ಕೆ ಬರ್ತಾನೆ. ಬಳಿಕ ಕೇಂದ್ರಕ್ಕೆ ಬಂದ ಫಲಾನುಭವಿಯ ದಾಖಲಾತಿ ಪರಿಶೀಲನೆ ನಡೆಯುತ್ತದೆ. ನಿಜವಾದ ಫಲಾನುಭವಿ ಹೌದೋ ಅಲ್ಲವೋ ಅನ್ನೋದನ್ನು ಕನ್ಪರ್ಮ್ ಮಾಡಿಕೊಳ್ಳಲಾಗುತ್ತದೆ. ಕನ್ಪರ್ಮ್ ಆದ ಮೇಲೆ ವೈಟಿಂಗ್ ರೂಮ್​ನಲ್ಲಿ ಕೂರಿಸಲಾಗುತ್ತದೆ. ವೈಟಿಂಗ್ ರೂಮ್​ನಲ್ಲಿ ಓರ್ವ ಸಿಬ್ಬಂದಿ ಫಲಾನುಭವಿಗೆ ವ್ಯಾಕ್ಸಿನ್ ಬಗ್ಗೆ ಮಾಹಿತಿ ನೀಡುತ್ತಾನೆ.

ವೈಟಿಂಗ್ ರೂಮ್​ನಲ್ಲಿರುವ ಓರ್ವ ಫಲಾನುಭವಿಯನ್ನು ವ್ಯಾಕ್ಸಿನ್ ರೂಮ್​ಗೆ ಕರೆದುಕೊಂಡು ಹೋಗಲಾಗುತ್ತದೆ. ವ್ಯಾಕ್ಸಿನ್ ರೂಮ್​ನಲ್ಲಿರುವ ಸಿಬ್ಬಂದಿ ಫಲಾನುಭವಿಗೆ ವ್ಯಾಕ್ಸಿನ್ ನೀಡ್ತಾನೆ. ವ್ಯಾಕ್ಸಿನ್ ಪಡೆದ ಫಲಾನುಭವಿಯನ್ನು ನಿಗಾ ಕೋಣೆಗೆ ಕರೆದುಕೊಂಡು ಹೋಗಲಾಗುತ್ತದೆ. ವ್ಯಾಕ್ಸಿನ್ ಪಡೆದ ಫಲಾನುಭವಿ ನಿಗಾ ಕೋಣೆಯಲ್ಲಿ ಮೂವತ್ತು ನಿಮಿಷ ಇರಬೇಕಾಗುತ್ತದೆ. ಮೂವತ್ತು ನಿಮಿಷದಲ್ಲಿ ಯಾವುದೇ ಸಮಸ್ಯೆ ಕಂಡು ಬರದೇ ಇದ್ರೆ ಆತನನ್ನು ಮನೆಗೆ ಕಳುಹಿಸಲಾಗುತ್ತದೆ.

Published On - 8:03 am, Sat, 2 January 21

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?