Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಮ್ ಐಸೋಲೇಷನ್​ನಲ್ಲಿ ಇರುವ ಮನೆಗಳಿಗೆ ರೆಡ್ ಟೇಪ್: ಅರವಿಂದ ಲಿಂಬಾವಳಿ ಮಾಹಿತಿ

ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ 9 ಲಕ್ಷ ಜನ ಗುಣಮುಖರಾಗಿದ್ದಾರೆ. ಸೋಂಕಿತರ ಸಂಪೂರ್ಣ ವೆಚ್ಚವನ್ನ ರಾಜ್ಯ ಸರ್ಕಾರ ಭರಿಸುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಕೊಡಲಾಗುತ್ತಿದೆ.

ಹೋಮ್ ಐಸೋಲೇಷನ್​ನಲ್ಲಿ ಇರುವ ಮನೆಗಳಿಗೆ ರೆಡ್ ಟೇಪ್: ಅರವಿಂದ ಲಿಂಬಾವಳಿ ಮಾಹಿತಿ
ಅರವಿಂದ ಲಿಂಬಾವಳಿ (ಸಂಗ್ರಹ ಚಿತ್ರ)
Follow us
TV9 Web
| Updated By: ganapathi bhat

Updated on:Aug 21, 2021 | 10:03 AM

ಬೆಂಗಳೂರು: ಹೋಂ ಐಸೋಲೇಷನ್‌ನಲ್ಲಿರುವವರು ಹೊರಗೆ ಓಡಾಡುತ್ತಿದ್ದಾರೆ. ಹೀಗಾಗಿ ದೊಡ್ಡ ಪ್ರಮಾಣದಲ್ಲಿ ಸೋಂಕು ಹರಡುತ್ತಿದೆ. ಹಳ್ಳಿಗಳಿಗೂ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿದೆ ಎಂದು ಬೆಂಗಳೂರಿನಲ್ಲಿ ಕೊವಿಡ್ ವಾರ್ ರೂಂ ಉಸ್ತುವಾರಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದ್ದಾರೆ. ತಾಲೂಕುಗಳಲ್ಲಿ 289 ಕೊವಿಡ್ ಕೇರ್ ಸೆಂಟರ್ ತೆರೆದಿದ್ದೇವೆ. ಇನ್ನೂ 19 ಸಾವಿರ ಬೆಡ್‌ಗಳು ಖಾಲಿ ಇವೆ ಎಂದು ಲಿಂಬಾವಳಿ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ 9 ಲಕ್ಷ ಜನ ಗುಣಮುಖರಾಗಿದ್ದಾರೆ. ಸೋಂಕಿತರ ಸಂಪೂರ್ಣ ವೆಚ್ಚವನ್ನ ರಾಜ್ಯ ಸರ್ಕಾರ ಭರಿಸುತ್ತಿದೆ. 45 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ಕೊಡಲಾಗುತ್ತಿದೆ. 18-44 ವರ್ಷ ವಯಸ್ಸಿನವರಿಗೆ ಸರ್ಕಾರ ಲಸಿಕೆ ಖರೀದಿಸಿ ಕೊಡ್ತಿದೆ ಎಂದು ಲಿಂಬಾವಳಿ ಮಾಹಿತಿ ನೀಡಿದ್ದಾರೆ.

ಹೋಮ್ ಐಸೋಲೇಷನ್‌ನಲ್ಲಿರುವವರ ನಿರ್ವಹಣೆಯಲ್ಲಿ ಲೋಪವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ನಿರ್ವಹಣೆಯಲ್ಲಿ ಲೋಪವಾಗಿದೆ. ಹಾಗಾಗಿ, ಹೋಮ್ ಐಸೋಲೇಷನ್‌ನಲ್ಲಿರುವವರ ಮನೆಗಳಿಗೆ ರೆಡ್ ಟೇಪ್ ಹಾಕುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. ಆದಷ್ಟು ಬೇಗ ಈ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಅವರು ಮಾಹಿತಿ ನೀಡಿದ್ದಾರೆ.

45 ವರ್ಷ ಮೇಲ್ಪಟ್ಟವರಿಗೆ ಕೊವ್ಯಾಕ್ಸಿನ್‌ ರಿಸರ್ವ್‌ ಮಾಡಿದ್ದೇವೆ. ಕೊವಿಶೀಲ್ಡ್‌ 2ನೇ ಡೋಸ್ ನೀಡಿಕೆ ಮುಂದೂಡಲಾಗಿತ್ತು. ಕೊವಿಶೀಲ್ಡ್‌ 2ನೇ ಡೋಸ್ ನೀಡಲು ಈಗ ಸಮಸ್ಯೆ ಇಲ್ಲ. ಜನಸಂಖ್ಯೆ ಆಧರಿಸಿ ಕೊರೊನಾ ಲಸಿಕೆ ಕೇಂದ್ರ ತೆರೆದಿದ್ದೇವೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ಲಸಿಕೆ ಇದೆ ಎಂದು ಲಿಂಬಾವಳಿ ಮಾಹಿತಿ ನೀಡಿದ್ದಾರೆ.

20 ಸಾವಿರ ಕೊವ್ಯಾಕ್ಸಿನ್ ಡೋಸ್‌ಗಳ ಕೊರತೆ ಇದೆ. 2ನೇ ಡೋಸ್ ನೀಡಲು ಕೊವ್ಯಾಕ್ಸಿನ್ ಲಸಿಕೆ ಕೊರತೆ ಇದೆ. ರಾಜ್ಯಕ್ಕೆ ಕೊವ್ಯಾಕ್ಸಿನ್ ಲಸಿಕೆ ತರಿಸಿಕೊಳ್ಳುತ್ತಿದ್ದೇವೆ. ರಾಜ್ಯದಲ್ಲಿ ಕೊವಿಶೀಲ್ಡ್‌ ಲಸಿಕೆ ಕೊರತೆ ಇಲ್ಲ. ಆದರೆ, ಕೊವಿಶೀಲ್ಡ್‌ ಲಸಿಕೆ ಪೂರೈಕೆಯಲ್ಲಿ ಕೆಲವೊಮ್ಮೆ ವಿಳಂಬ ಆಗ್ತಿದೆ ಎಂದು ತಿಳಿಸಿದ್ದಾರೆ.

ಕೊರೊನಾ ಲಸಿಕೆ ನಿರ್ವಹಣೆಯಲ್ಲಿ ಲೋಪ ಇದೆ. ಜನರು ಮೆಸೇಜ್ ಬಂದ ಮೇಲೆ ಲಸಿಕೆ ಹಾಕಿಸಿಕೊಳ್ಳಲು ಬರಬೇಕು. ಹಲವರು ಆನ್‌ಲೈನ್‌ನಲ್ಲಿ ಅಪ್ಲೈ ಮಾಡಿದ ತಕ್ಷಣ ಬರ್ತಿದ್ದಾರೆ. ಹೀಗಾಗಿ ಸಮಸ್ಯೆ ಆಗ್ತಿದೆ. ಇದನ್ನು ಕೂಡ ಆದಷ್ಟು ಬೇಗ ಸರಿಪಡಿಸಲಾಗುವುದು ಎಂದು ಸಚಿವ ಲಿಂಬಾವಳಿ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Corona Vaccine: ಕೊರೊನಾ ಲಸಿಕೆಯನ್ನು ಕೈಗೆ ಏಕೆ ನೀಡಲಾಗುತ್ತದೆ? ಸೊಂಟಕ್ಕೆ ಏಕಿಲ್ಲ? ಇಲ್ಲಿದೆ ಸಂಪೂರ್ಣ ವಿವರ

ದೆಹಲಿಯಲ್ಲಿ 18ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಇಲ್ಲ ಕೊವಿಡ್​ 19 ಲಸಿಕೆ; 24ಗಂಟೆಯಲ್ಲಿ ವಿದೇಶದಿಂದ ತರಿಸಿಕೊಡಿ ಎಂದ ಸಿಎಂ

Published On - 8:09 pm, Sat, 22 May 21

ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮುನ್ನ ಎಚ್ಚರ...!
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
Live: ದ್ವಿತೀಯ ಪಿಯುಸಿ ಫಲಿತಾಂಶ 2025 ಲೈವ್​ ವಿಡಿಯೋ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಸಿಲಿಂಡರ್ ಬೆಲೆ ಹೆಚ್ಚಾಗಿರುವುದನ್ನು ಸರ್ಕಾರ ಗುರಾಣಿಯಾಗಿ ಬಳಸಬಾರದು: ರವಿ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ
ಕೋರ್ಟ್ ಮುಂದೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ
ದೊಡ್ಡ ನಗರದಲ್ಲಿ ಇಂತಹ ಘಟನೆಗಳು ನಡೆಯುತ್ತವೆ ಹೇಳಿಕೆಗೆ ಪರಮೇಶ್ವರ್ ವಿಷಾದ