AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಡ್ ಹಂಚಿಕೆ, ಕೊವಿಡ್ ವಾರ್ ರೂಮ್ ನಿರ್ವಹಣೆ ಬಗ್ಗೆ ಅರವಿಂದ ಲಿಂಬಾವಳಿ ಮಾಹಿತಿ; ಸಂಪೂರ್ಣ ವಿವರ ಇಲ್ಲಿದೆ

ಅವ್ಯವಹಾರಗಳನ್ನು ತಡೆಯಲು ಈ ಕ್ರಮಕೈಗೊಂಡಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ವಾರ್ ರೂಮ್, ಹೆಲ್ಪ್​​ಲೈನ್ ಇದೆ. ರಾಜ್ಯದ 57 ತಾಲೂಕುಗಳಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆದಿದ್ದೇವೆ. ಉಳಿದ ತಾಲೂಕುಗಳಲ್ಲೂ ಕೇರ್ ಸೆಂಟರ್ ತೆರೆಯುತ್ತೇವೆ ಎಂದು ಅರವಿಂದ ಲಿಂಬಾವಳಿ ಮಾಹಿತಿ ನೀಡಿದ್ದಾರೆ.

ಬೆಡ್ ಹಂಚಿಕೆ, ಕೊವಿಡ್ ವಾರ್ ರೂಮ್ ನಿರ್ವಹಣೆ ಬಗ್ಗೆ ಅರವಿಂದ ಲಿಂಬಾವಳಿ ಮಾಹಿತಿ; ಸಂಪೂರ್ಣ ವಿವರ ಇಲ್ಲಿದೆ
ಅರವಿಂದ ಲಿಂಬಾವಳಿ (ಸಂಗ್ರಹ ಚಿತ್ರ)
TV9 Web
| Edited By: |

Updated on:Aug 23, 2021 | 12:45 PM

Share

ಬೆಂಗಳೂರು: ಇನ್ಮುಂದೆ ಬೆಡ್​ ಹಂಚಿಕೆ ಆಗುವವರಿಗೆ ಎಸ್​ಎಮ್​ಎಸ್ ಕಳಿಸುತ್ತೇವೆ. ಈ ಮೊದಲು ಬೆಡ್​ ಹಂಚಿಕೆ ಆಗಲು 12 ಗಂಟೆ ಸಮಯ ಆಗುತ್ತಿತ್ತು. ಈಗ ಈ ಅವಧಿಯನ್ನು 12 ಗಂಟೆ ಬದಲು 4 ಗಂಟೆಗೆ ಇಳಿಕೆ ಮಾಡಲಾಗಿದೆ. ಬೆಡ್​ ಹಂಚಿಕೆಯಾದ 4 ಗಂಟೆಯೊಳಗೆ ಸಂಬಂಧಪಟ್ಟವರು ಆಸ್ಪತ್ರೆಗೆ ದಾಖಲಾಗಬೇಕು ಎಂದು ವಿಧಾನಸೌಧದಲ್ಲಿ ಸಚಿವ ಅರವಿಂದ ಲಿಂಬಾವಳಿ ಹೇಳಿಕೆ ನೀಡಿದ್ದಾರೆ.

4 ಗಂಟೆಯೊಳಗೆ ರೋಗಿ ಆಸ್ಪತ್ರೆಗೆ ದಾಖಲಾಗಬೇಕು. ಅವ್ಯವಹಾರಗಳನ್ನು ತಡೆಯಲು ಈ ಕ್ರಮಕೈಗೊಂಡಿದ್ದೇವೆ. ಪ್ರತಿ ಜಿಲ್ಲೆಯಲ್ಲೂ ವಾರ್ ರೂಮ್, ಹೆಲ್ಪ್​​ಲೈನ್ ಇದೆ. ರಾಜ್ಯದ 57 ತಾಲೂಕುಗಳಲ್ಲಿ ಕೊವಿಡ್ ಕೇರ್ ಸೆಂಟರ್ ತೆರೆದಿದ್ದೇವೆ. ಉಳಿದ ತಾಲೂಕುಗಳಲ್ಲೂ ಕೇರ್ ಸೆಂಟರ್ ತೆರೆಯುತ್ತೇವೆ ಎಂದು ಅರವಿಂದ ಲಿಂಬಾವಳಿ ಮಾಹಿತಿ ನೀಡಿದ್ದಾರೆ.

ಲಸಿಕೆಯ ಎರಡನೇ ಡೋಸ್​ಗೆ ಸಮಸ್ಯೆ ಆಗುತ್ತಿದೆ ಎಂದು ಹೇಳಿದ್ದಾರೆ. ಅದನ್ನು ಕೂಡ ಸಮರ್ಥವಾಗಿ ನಿರ್ವಹಣೆ ಮಾಡುತ್ತಿದ್ದೇವೆ. ಪ್ರತಿ ತಾಲೂಕಿನಲ್ಲಿ ವಾರ್ ರೂಮ್ ಇರುತ್ತದೆ ಅದರಲ್ಲಿ ಪ್ರತಿಯೊಂದು ವಿವರಗಳು ಇರಬೇಕು. ಅದನ್ನು ಡ್ಯಾಶ್ ಬೋರ್ಡ್​ನಲ್ಲಿ ಹಾಕಬೇಕು. ಆಕ್ಸಿಜನ್ ಬೆಡ್, ಐಸಿಯು, ವೆಂಟಿಲೇಟರ್ ಬೆಡ್ ಡಿಸ್​ಪ್ಲೇ ಮಾಡಬೇಕು. ಅದರ ಸಂಪೂರ್ಣ ವಿವರ ಮಂಗಳವಾರ ನೀಡುತ್ತೇವೆ. ಬೆಂಗಳೂರಿನಲ್ಲಿ ಕಮಾಂಡಿಂಗ್ ಸೆಂಟರ್​ನಲ್ಲಿ ನಿರ್ವಹಣೆ ಕಾರ್ಯ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಕೊವಿಡ್ ವಾರ್ ರೂಂ ಉಸ್ತುವಾರಿಯನ್ನು ಅರವಿಂದ ಲಿಂಬಾವಳಿಗೆ ನೀಡಲಾಗಿದೆ. ಈ ಬಗ್ಗೆ 3-4 ದಿನಗಳಿಂದ ವಾರ್ ರೂಮ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ವಿಧಾನಸೌಧದಲ್ಲಿ ಲಿಂಬಾವಳಿ ತಿಳಿಸಿದರು. ವಲಯವಾರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ‌ ಪಡೆದಿರುವೆ. ಕಾಲ್ ಸೆಂಟರ್ 1912ಗೂ ಭೇಟಿ ಮಾಡಿದ್ದೇನೆ. ನೋಡಲ್ ಅಧಿಕಾರಿಗಳ ಜತೆಯೂ ಸಭೆ ನಡೆಸಲಾಗಿದೆ. ಮುಂಬೈನಲ್ಲಿ ಸೋಂಕು ತಡೆ ನಡೆಸಿದ ಬಗ್ಗೆ ಅಧ್ಯಯನ ನಡೆಸಿದ್ದೇವೆ. ವಾರ್ಡ್‌ ಮಟ್ಟದಲ್ಲಿ ತುರ್ತು ಸೇವೆ ಒದಗಿಸಲು ಸಮಿತಿ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಲಿಂಬಾವಳಿ ಹೇಳಿದ್ದಾರೆ.

ಬೆಂಗಳೂರು ನಗರದಲ್ಲಿ ರಾಜ್ಯದ ಅರ್ಧದಷ್ಟು ಕೇಸ್‌ಗಳಿವೆ. ಬೆಂಗಳೂರಿನಲ್ಲಿ 141 ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ವಾರ್ಡ್‌ವಾರು ಜನಪ್ರತಿನಿಧಿಗಳು, ಸ್ವಯಂ ಸೇವಕರು, ಅಧಿಕಾರಿಗಳನ್ನೊಳಗೊಂಡ 50 ಜನರ ಸಮಿತಿ ರಚಿಸುತ್ತೇವೆ. ಈ ಸಮಿತಿ ವಾರ್ಡ್‌ವಾರು ಕೇಸ್ ತಡೆಯಲು ಶ್ರಮಿಸುತ್ತದೆ. ಪ್ರತಿ ವಾರ್ಡ್‌ನಲ್ಲಿ ನಿತ್ಯ 100-150 ಕೇಸ್‌ಗಳು ಬರುತ್ತಿವೆ. ವಾರ್ಡ್‌ಗಳನ್ನು ವಲಯ ಮಟ್ಟದಲ್ಲೇ ನಿರ್ವಹಿಸುತ್ತಿದ್ದಾರೆ. ಇದನ್ನು ತಪ್ಪಿಸಲು ವಾರ್ಡ್ ಸಮಿತಿಯನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

ಶೇ.85ರಷ್ಟು ಜನ ಹೋಮ್ ಐಸೋಲೇಷನ್‌ನಲ್ಲಿದ್ದಾರೆ. ಹೋಮ್ ಐಸೋಲೇಷನ್‌ನಲ್ಲಿರುವವರಿಗೆ ಕಿಟ್ ಕೊಡ್ತೇವೆ. ಟೆಲಿ ಕನ್ಸಲ್ಟೆನ್ಸಿ ಮೂಲಕ ಅವರ ಆರೋಗ್ಯ ವಿಚಾರಿಸುತ್ತೇವೆ ಎಂದೂ ಲಿಂಬಾವಳಿ ಮಾಹಿತಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ಕೊರೊನಾ ನಡುವೆ ಅಮಾನುಷ ಕೆಲಸ: ದೇಶದ ವಿವಿಧೆಡೆ ನಕಲಿ ರೆಮಿಡಿಸಿವಿರ್ ಮಾರಾಟ; ಪೊಲೀಸರಿಂದ ಖದೀಮರ ಬಂಧನ

ಗ್ರಾಮೀಣ ಭಾಗದ ಜನರಿಗೆ ನನ್ನ ನೆರವು ಬಳಕೆಯಾಗಲಿ! ಕೊರೊನಾ ವಿರುದ್ಧದ ಹೋರಾಟಕ್ಕೆ ಕೈ ಜೋಡಿಸಿದ ರಿಷಭ್ ಪಂತ್

Published On - 7:42 pm, Sat, 8 May 21

300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ