AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರು ತಿಂಗಳ ಬಳಿಕ.. ದೇಶದಲ್ಲಿ ಅತಿ ಕಡಿಮೆ ಕೊರೊನಾ ಕೇಸ್​ಗಳು ಪತ್ತೆ

ಆರು ತಿಂಗಳ ಹಿಂದೆ, ಅಂದರೆ ಜುಲೈ 1 ರಂದು 19,160 ಕೊವಿಡ್-19 ಪ್ರಕರಣಗಳು ದಾಖಲಾಗಿದ್ದವು. ಆ ಬಳಿಕ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ ಆರು ತಿಂಗಳ ನಂತರ ಕೊವಿಡ್-19 ಪ್ರಕರಣಗಳು ಮತ್ತೆ 20 ಸಾವಿರಕ್ಕಿಂತ ಕಡಿಮೆಯಾಗಿದೆ.

ಆರು ತಿಂಗಳ ಬಳಿಕ.. ದೇಶದಲ್ಲಿ ಅತಿ ಕಡಿಮೆ ಕೊರೊನಾ ಕೇಸ್​ಗಳು ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 11:18 PM

Share

ದೆಹಲಿ: ದೇಶದಲ್ಲಿ ಇಂದು 18,732 ಕೊವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 6 ತಿಂಗಳಿನಿಂದ ಪ್ರತಿದಿನ ದಾಖಲಾಗಿರುವ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ  ಅತೀ ಕಡಿಮೆ ಕೇಸ್​ಗಳು ಇದಾಗಿದೆ. ಆರು ತಿಂಗಳ ಹಿಂದೆ, ಅಂದರೆ ಜುಲೈ 1 ರಂದು 19,160 ಕೊವಿಡ್-19 ಪ್ರಕರಣಗಳು ದಾಖಲಾಗಿದ್ದವು. ಆ ಬಳಿಕ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ ಆರು ತಿಂಗಳ ನಂತರ ಕೊವಿಡ್-19 ಪ್ರಕರಣಗಳು ಮತ್ತೆ 20 ಸಾವಿರಕ್ಕಿಂತ ಕಡಿಮೆಯಾಗಿದೆ.

ಒಂದೆಡೆ ಕೊರೊನಾ ವೈರಾಣು ರೂಪಾಂತರ ಹೊಂದಿದ್ದು ಅದರಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂಬ ವರದಿಗಳನ್ನು ಗಮನಿಸುತ್ತಿದ್ದೇವೆ. ಮತ್ತೊಂದೆಡೆ, ಜನಜೀವನ ಯಥಾಸ್ಥಿತಿಯತ್ತ ಮರಳುತ್ತಿದೆ. ಹಲವು ರಾಜ್ಯಗಳಲ್ಲಿ ಶಾಲಾ ಕಾಲೇಜು ತೆರೆಯುವ ಬಗ್ಗೆ ಬೆಳವಣಿಗೆಗಳಾಗಿವೆ. ಈ ನಡುವೆ, ಕೊವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿರುವುದು ಜನರಲ್ಲಿ ಕೊಂಚ ಸಮಾಧಾನ ತಂದಿದೆ.

ಜೊತೆಗೆ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 279 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ, ದೇಶದಲ್ಲಿ ಕೊರೊನಾದಿಂದಾಗಿ ಮೃತಪಟ್ಟವರ ಒಟ್ಟು ಸಂಖ್ಯೆ 1,47,622 ಕ್ಕೆ ಏರಿದೆ. ಇದೀಗ ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 1,01,87,850ಕ್ಕೆ ತಲುಪಿದೆ. ಅದರಲ್ಲಿ,  ಸಕ್ರಿಯ ಕೇಸ್​ಗಳ ಸಂಖ್ಯೆ ಕೇವಲ 2,78,690.

ಕರ್ನಾಟಕದ ಕೊವಿಡ್-19 ವರದಿ ಇತ್ತ, ಕರ್ನಾಟಕದಲ್ಲಿ ಇದುವರೆಗೆ ಒಟ್ಟು 9,14,488 ಸೋಂಕಿನ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ, ಸಕ್ರಿಯ  ಪ್ರಕರಣಗಳ ಸಂಖ್ಯೆ ಕೇವಲ 13,394 . ರಾಜ್ಯದಲ್ಲಿ ಇದುವರೆಗೆ ಒಟ್ಟು 12,044 ಜನರು ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ. ಸದ್ಯ, ಪ್ರತಿನಿತ್ಯ ಸರಾಸರಿ ಒಂದು ಸಾವಿರದಷ್ಟು ಹೊಸ ಕೊವಿಡ್-19 ಪ್ರಕರಣಗಳು ಮಾತ್ರ ದಾಖಲಾಗುತ್ತಿವೆ. ಆ ಮೂಲಕ ಹೊಸ ಕೊವಿಡ್ ಕೇಸ್​ಗಳ ಸಂಖ್ಯೆ ಇಳಿಕೆ ಕಂಡಿದೆ.

ಕೊವಿಡ್-19 ಲಸಿಕೆ ತೆಗೆದುಕೊಂಡವರಿಗೆ ಉಂಟಾಗುತ್ತಿದೆ ಅಡ್ಡಪರಿಣಾಮ!

Published On - 11:39 am, Sun, 27 December 20

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು