AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರು ತಿಂಗಳ ಬಳಿಕ.. ದೇಶದಲ್ಲಿ ಅತಿ ಕಡಿಮೆ ಕೊರೊನಾ ಕೇಸ್​ಗಳು ಪತ್ತೆ

ಆರು ತಿಂಗಳ ಹಿಂದೆ, ಅಂದರೆ ಜುಲೈ 1 ರಂದು 19,160 ಕೊವಿಡ್-19 ಪ್ರಕರಣಗಳು ದಾಖಲಾಗಿದ್ದವು. ಆ ಬಳಿಕ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ ಆರು ತಿಂಗಳ ನಂತರ ಕೊವಿಡ್-19 ಪ್ರಕರಣಗಳು ಮತ್ತೆ 20 ಸಾವಿರಕ್ಕಿಂತ ಕಡಿಮೆಯಾಗಿದೆ.

ಆರು ತಿಂಗಳ ಬಳಿಕ.. ದೇಶದಲ್ಲಿ ಅತಿ ಕಡಿಮೆ ಕೊರೊನಾ ಕೇಸ್​ಗಳು ಪತ್ತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Apr 06, 2022 | 11:18 PM

Share

ದೆಹಲಿ: ದೇಶದಲ್ಲಿ ಇಂದು 18,732 ಕೊವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಕಳೆದ 6 ತಿಂಗಳಿನಿಂದ ಪ್ರತಿದಿನ ದಾಖಲಾಗಿರುವ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ  ಅತೀ ಕಡಿಮೆ ಕೇಸ್​ಗಳು ಇದಾಗಿದೆ. ಆರು ತಿಂಗಳ ಹಿಂದೆ, ಅಂದರೆ ಜುಲೈ 1 ರಂದು 19,160 ಕೊವಿಡ್-19 ಪ್ರಕರಣಗಳು ದಾಖಲಾಗಿದ್ದವು. ಆ ಬಳಿಕ ಪ್ರತಿದಿನ 20 ಸಾವಿರಕ್ಕೂ ಹೆಚ್ಚು ಸೋಂಕಿನ ಪ್ರಕರಣಗಳು ವರದಿಯಾಗುತ್ತಿದ್ದವು. ಇದೀಗ ಆರು ತಿಂಗಳ ನಂತರ ಕೊವಿಡ್-19 ಪ್ರಕರಣಗಳು ಮತ್ತೆ 20 ಸಾವಿರಕ್ಕಿಂತ ಕಡಿಮೆಯಾಗಿದೆ.

ಒಂದೆಡೆ ಕೊರೊನಾ ವೈರಾಣು ರೂಪಾಂತರ ಹೊಂದಿದ್ದು ಅದರಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂಬ ವರದಿಗಳನ್ನು ಗಮನಿಸುತ್ತಿದ್ದೇವೆ. ಮತ್ತೊಂದೆಡೆ, ಜನಜೀವನ ಯಥಾಸ್ಥಿತಿಯತ್ತ ಮರಳುತ್ತಿದೆ. ಹಲವು ರಾಜ್ಯಗಳಲ್ಲಿ ಶಾಲಾ ಕಾಲೇಜು ತೆರೆಯುವ ಬಗ್ಗೆ ಬೆಳವಣಿಗೆಗಳಾಗಿವೆ. ಈ ನಡುವೆ, ಕೊವಿಡ್-19 ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿರುವುದು ಜನರಲ್ಲಿ ಕೊಂಚ ಸಮಾಧಾನ ತಂದಿದೆ.

ಜೊತೆಗೆ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 279 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ, ದೇಶದಲ್ಲಿ ಕೊರೊನಾದಿಂದಾಗಿ ಮೃತಪಟ್ಟವರ ಒಟ್ಟು ಸಂಖ್ಯೆ 1,47,622 ಕ್ಕೆ ಏರಿದೆ. ಇದೀಗ ದೇಶದಲ್ಲಿ ಸೋಂಕಿತರ ಒಟ್ಟು ಸಂಖ್ಯೆ 1,01,87,850ಕ್ಕೆ ತಲುಪಿದೆ. ಅದರಲ್ಲಿ,  ಸಕ್ರಿಯ ಕೇಸ್​ಗಳ ಸಂಖ್ಯೆ ಕೇವಲ 2,78,690.

ಕರ್ನಾಟಕದ ಕೊವಿಡ್-19 ವರದಿ ಇತ್ತ, ಕರ್ನಾಟಕದಲ್ಲಿ ಇದುವರೆಗೆ ಒಟ್ಟು 9,14,488 ಸೋಂಕಿನ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ, ಸಕ್ರಿಯ  ಪ್ರಕರಣಗಳ ಸಂಖ್ಯೆ ಕೇವಲ 13,394 . ರಾಜ್ಯದಲ್ಲಿ ಇದುವರೆಗೆ ಒಟ್ಟು 12,044 ಜನರು ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ. ಸದ್ಯ, ಪ್ರತಿನಿತ್ಯ ಸರಾಸರಿ ಒಂದು ಸಾವಿರದಷ್ಟು ಹೊಸ ಕೊವಿಡ್-19 ಪ್ರಕರಣಗಳು ಮಾತ್ರ ದಾಖಲಾಗುತ್ತಿವೆ. ಆ ಮೂಲಕ ಹೊಸ ಕೊವಿಡ್ ಕೇಸ್​ಗಳ ಸಂಖ್ಯೆ ಇಳಿಕೆ ಕಂಡಿದೆ.

ಕೊವಿಡ್-19 ಲಸಿಕೆ ತೆಗೆದುಕೊಂಡವರಿಗೆ ಉಂಟಾಗುತ್ತಿದೆ ಅಡ್ಡಪರಿಣಾಮ!

Published On - 11:39 am, Sun, 27 December 20

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?