AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೂ ಬೆಡ್ ಸಿಗದೆ ಮುಖ್ಯಮಂತ್ರಿ ನಿವಾಸದ ಬಳಿಗೆ ಆಗಮಿಸಿದ ಕೊರೊನಾ ಸೋಂಕಿತ; ಘಟನೆ ಬಳಿಕ ಕುಮಾರಕೃಪಾ ರಸ್ತೆ ಬಂದ್

ಬೆಳಗ್ಗೆಯಿಂದ ಸುಮಾರು 15 ಆಸ್ಪತ್ರೆಗಳಿಗೆ ಸುತ್ತಾಡಿದ್ದ ಕೊರೊನಾ ಸೋಂಕಿತ ಎಲ್ಲೂ ಬೆಡ್ ಸಿಗದ ಹಿನ್ನೆಲೆಯಲ್ಲಿ ಆಟೋದಲ್ಲಿ ಮುಖ್ಯಮಂತ್ರಿ ನಿವಾಸದ ಬಳಿ ಆಗಮಿಸಿದ್ದಾರೆ.

ಎಲ್ಲೂ ಬೆಡ್ ಸಿಗದೆ ಮುಖ್ಯಮಂತ್ರಿ ನಿವಾಸದ ಬಳಿಗೆ ಆಗಮಿಸಿದ ಕೊರೊನಾ ಸೋಂಕಿತ; ಘಟನೆ ಬಳಿಕ ಕುಮಾರಕೃಪಾ ರಸ್ತೆ ಬಂದ್
ಕೊರೊನಾ ವೈರಸ್
Follow us
TV9 Web
| Updated By: ganapathi bhat

Updated on:Aug 23, 2021 | 12:45 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿರುವುದು ಕಂಡುಬರುತ್ತಿದೆ. ದಿನೇದಿನೇ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿದೆ. ಹಲವಾರು ಮಂದಿ ಸೋಂಕಿತರಿಗೆ ವೈದ್ಯಕೀಯ ಆಮ್ಲಜನಕ, ಆಸ್ಪತ್ರೆಯ ಹಾಸಿಗೆ ಸೌಲಭ್ಯಗಳು ಸಿಗದೇ ಪರದಾಟವಾಗುತ್ತಿದೆ. ಸಮರ್ಪಕ ರೀತಿಯಲ್ಲಿ ಪಿಡುಗನ್ನು ನಿಯಂತ್ರಿಸುವುದು ಕಷ್ಟಸಾಧ್ಯವಾಗುತ್ತಿದೆ. ಜನಸಾಮಾನ್ಯರು ಈ ಸಮಸ್ಯೆಗಳಿಗೆ ನೇರವಾಗಿ ತುತ್ತಾಗುತ್ತಿದ್ದಾರೆ. ಅಂಥದ್ದೇ ಒಂದು ಮನಕಲಕುವ ಘಟನೆ ಇಂದು ನಡೆದಿದೆ.

ಬೆಳಗ್ಗೆಯಿಂದ ಸುಮಾರು 15 ಆಸ್ಪತ್ರೆಗಳಿಗೆ ಸುತ್ತಾಡಿದ್ದ ಕೊರೊನಾ ಸೋಂಕಿತ ಎಲ್ಲೂ ಬೆಡ್ ಸಿಗದ ಹಿನ್ನೆಲೆಯಲ್ಲಿ ಆಟೋದಲ್ಲಿ ಮುಖ್ಯಮಂತ್ರಿ ನಿವಾಸದ ಬಳಿ ಆಗಮಿಸಿದ್ದಾರೆ. ಆತನ ಕುಟುಂಬದವರು ಸೋಂಕಿತನನ್ನು ಸಿಎಂ ಅಧಿಕೃತ ನಿವಾಸದ ಬಳಿಗೆ ಕರೆತಂದಿದ್ದಾರೆ. ಬಳಿಕ, ಅಲ್ಲಿದ್ದ ಪೊಲೀಸರು ಸೋಂಕಿತನ ಕುಟುಂಬವನ್ನು ಬಿಬಿಎಂಪಿ ವಾರ್ ರೂಮ್​ನತ್ತ ಕಳುಹಿಸಿಕೊಟ್ಟಿದ್ದಾರೆ.

ಮುಖ್ಯಮಂತ್ರಿ ನಿವಾಸದ ಬಳಿಗೆ ಬಂದ ಕುಟುಂಬದವರು 15 ಆಸ್ಪತ್ರೆ ಸುತ್ತಿದರೂ ಸಾಮಾನ್ಯ ಬೆಡ್ ಕೂಡ ಸಿಗಲಿಲ್ಲ ಎಂದು ಕುಟುಂಬದವರು ಅಳಲು ತೋಡಿಕೊಂಡಿದ್ದಾರೆ. ಯಾವುದೇ ಬೆಡ್ ವ್ಯವಸ್ಥೆ ಮಾಡದೇ ಏಕಾಏಕಿ ವಾರ್ ರೂಮ್ ಕಡೆಗೆ ಕಳುಹಿಸಿದ ಕ್ರಮಕ್ಕೆ ಸ್ಥಳದಲ್ಲಿದ್ದ ಮಾಧ್ಯಮದವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅದಕ್ಕೆ ಪೊಲೀಸರು ನಮ್ಮ ಕೆಲಸ ನಾವು ಮಾಡುತ್ತೇವೆ ಎಂದು ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿಗಳ ನಿವಾಸದ ಬಳಿ ಸೋಂಕಿತನನ್ನು ಕರೆತಂದಿದ್ದ ವಿಚಾರಕ್ಕೆ ಸಂಬಂಧಿಸಿ ಕುಮಾರಕೃಪಾ ರಸ್ತೆಯನ್ನು ಪೊಲೀಸರು ಮತ್ತೆ ಬಂದ್ ಮಾಡಿದ್ದಾರೆ. ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಮತ್ತು ಗೃಹ ಕಚೇರಿ ಇರುವ ಕುಮಾರಕೃಪಾ ರಸ್ತೆಯಲ್ಲಿ ಬ್ಯಾರಿಕೇಡ್ ಅಳವಡಿಸಿ ಬಂದ್‌ ಮಾಡಿದ್ದಾರೆ. ಶಿವಾನಂದ ವೃತ್ತದಿಂದ ವಿಂಡ್ಸರ್ ಸ್ಕ್ವೇರ್‌ವರೆಗೂ ಬ್ಯಾರಿಕೇಡ್ ಅಳವಡಿಸಲಾಗಿದೆ.

ಇದನ್ನೂ ಓದಿ: ಟೀಂ ಇಂಡಿಯಾದ ಯುವ ವೇಗಿ ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಕೊರೊನಾ ಪಾಸಿಟಿವ್; ಸೋಂಕಿಗೆ ತುತ್ತಾದ 6ನೇ ಐಪಿಎಲ್ ಆಟಗಾರ

ಬೆಂಗಳೂರಿನಿಂದ ರಾಜ್ಯದ ಗ್ರಾಮೀಣ ಭಾಗಗಳತ್ತ ಮುಖ ಮಾಡಿದ ಕೊರೊನಾ; ಸೋಂಕು ನಿಯಂತ್ರಣದ ಬಗ್ಗೆ ತಜ್ಞರ ಆತಂಕ

Published On - 3:22 pm, Sat, 8 May 21

ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ