AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ಘೋಷಣೆ ಹಿನ್ನೆಲೆ; 2 ತಿಂಗಳ ಹಿಂದೆ ತೀರಿಕೊಂಡ ಮಹಿಳೆಗೆ ಈಗ ಕೊವಿಡ್ ಪಾಸಿಟಿವ್ ವರದಿ ತಯಾರಿ

ಡಾಟಾ ಎಂಟ್ರಿ ಆಪರೇಟರ್​ ಯೂಸರ್ ಐಡಿ ದುರುಪಯೋಗ ಮಾಡಿರುವುದು, ಪಾಸ್​ ವರ್ಡ್​ ದುರ್ಬಳಕೆ ಮಾಡಿಕೊಂಡು ಕೊವಿಡ್​ ವರದಿ ನೀಡಿ, ಸರ್ಕಾರಕ್ಕೆ ವಂಚಿಸಿದ ಆರೋಪದಡಿ ಆರೋಪಿಗಳಿಬ್ಬರ ಸೆರೆಯಾಗಿದೆ. ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಪ್ರಕಾಶ್ ಬಿರಾದರ್​ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ಘೋಷಣೆ ಹಿನ್ನೆಲೆ; 2 ತಿಂಗಳ ಹಿಂದೆ ತೀರಿಕೊಂಡ ಮಹಿಳೆಗೆ ಈಗ ಕೊವಿಡ್ ಪಾಸಿಟಿವ್ ವರದಿ ತಯಾರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 17, 2021 | 2:59 PM

Share

ಬಾಗಲಕೋಟೆ: ಕೊವಿಡ್​ನಿಂದ ಮೃತರಿಗೆ ಸರ್ಕಾರ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಕೆಲವು ಅವ್ಯವಹಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಕಲಿ ಆರ್​ಟಿಪಿಸಿಆರ್ ವರದಿ ಪ್ರಕರಣ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎರಡು ತಿಂಗಳು ಹಿಂದೆ ತೀರಿಕೊಂಡಿದ್ದ ಮಹಿಳೆಗೆ ಇದೀಗ ಆರ್​ಟಿಪಿಸಿಆರ್ ಪಾಸಿಟಿವ್ ರಿಪೋರ್ಟ್ ತಯಾರಿ ಮಾಡಿರುವುದು ಕಂಡುಬಂದಿದೆ.

ಕೊವಿಡ್​ನಿಂದ ಮೃತಪಟ್ಟವರಿಗೆ ಕರ್ನಾಟಕ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ನಕಲಿ RTPCR ವರದಿ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. 2 ತಿಂಗಳ ಹಿಂದೆ ಮೃತಪಟ್ಟ ಮಹಿಳೆಗೆ ಇದೀಗ ಪಾಟಿಟಿವ್ ರಿಪೋರ್ಟ್​ ನೀಡಲಾಗಿದೆ. ಬಾಗಲಕೋಟೆ ಜಿಲ್ಲಾಸ್ಪತ್ರೆ ಸಿಬ್ಬಂದಿಯಿಂದ ಗೋಲ್​ಮಾಲ್ ನಡೆದಿರುವ ಬಗ್ಗೆ ಮಾಹಿತಿ ದೊರಕಿದೆ.

ಪ್ರಕರಣಕ್ಕೆ ಸಂಬಂಧಿಸಿ ಸ್ಕ್ಯಾನಿಂಗ್ ವಿಭಾಗದ ಸ್ಟಾಫ್​ನರ್ಸ್​ ಬಸವರಾಜ್​ ಬಿಲಕೇರಿ, ಡಾಟಾ ಎಂಟ್ರಿ ಆಪರೇಟರ್​ ಬಸನಗೌಡ ಗಿರಿಯಪ್ಪಗೌಡ ಸೆರೆಯಾಗಿದ್ದಾರೆ. ಬಾಗಲಕೋಟೆಯ ನವನಗರ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ.

ಮೇ 2ರಂದು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬಿದರಿ ಗ್ರಾಮದ ಶೇಖವ್ವ ರೂಗಿ (53) ಎಂಬವರು ಮೃತಪಟ್ಟಿದ್ದರು. ಜಿಲ್ಲಾಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಅವರು ಮೃತಪಟ್ಟಿದ್ದರು. ಸಿಟಿ ಸ್ಕ್ಯಾನ್​ನಲ್ಲಿ ಕೊವಿಡ್​ ಇದ್ದರೂ ಟೆಸ್ಟ್​ ಮಾಡಿಸಿರಲಿಲ್ಲ. ಶೇಖವ್ವ ರೂಗಿಗೆ ಆರ್​ಟಿಪಿಸಿಆರ್​ ಟೆಸ್ಟ್​ ಮಾಡಿಸಿರಲಿಲ್ಲ. ಆದರೆ, ಈಗ ಸರ್ಕಾರ ಪರಿಹಾರ ಘೋಷಣೆ ಮಾಡಿದ ನಂತರ ನಕಲಿ ದಾಖಲೆ ಸೃಷ್ಟಿ ಮಾಡಲಾಗಿದೆ.

ಮೇ 1ರಂದು ಗಂಟಲು ದ್ರವ ಸಂಗ್ರಹಿಸಲಾಗಿತ್ತೆಂದು ದಾಖಲು ಮಾಡಿ, ಬಾಗಲಕೋಟೆ ಜಿಲ್ಲಾಸ್ಪತ್ರೆ ಸಿಬ್ಬಂದಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಆದರೆ ಜುಲೈ 15ರಂದು ಪಾಸಿಟಿವ್ ಬಂದಿದೆ ಎಂದು ನಮೂದು ಮಾಡಲಾಗಿದೆ. 2 ತಿಂಗಳು ತಡವಾಗಿದ್ದರಿಂದ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಬಳಿಕ, ಅಧಿಕಾರಿಗಳು ತಪಾಸಣೆ ನಡೆಸಿದಾಗ ಗೋಲ್​ಮಾಲ್​ ಬೆಳಕಿಗೆ ಬಂದಿದೆ.

ಡಾಟಾ ಎಂಟ್ರಿ ಆಪರೇಟರ್​ ಯೂಸರ್ ಐಡಿ ದುರುಪಯೋಗ ಮಾಡಿರುವುದು, ಪಾಸ್​ ವರ್ಡ್​ ದುರ್ಬಳಕೆ ಮಾಡಿಕೊಂಡು ಕೊವಿಡ್​ ವರದಿ ನೀಡಿ, ಸರ್ಕಾರಕ್ಕೆ ವಂಚಿಸಿದ ಆರೋಪದಡಿ ಆರೋಪಿಗಳಿಬ್ಬರ ಸೆರೆಯಾಗಿದೆ. ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಪ್ರಕಾಶ್ ಬಿರಾದರ್​ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Delta Variant: ಕೊರೊನಾ ಲಸಿಕೆ ಪಡೆದ ನಂತರವೂ ಹಬ್ಬಿದ ಸೋಂಕಿನಲ್ಲಿ ಶೇ.86.09 ಪಾಲು ಡೆಲ್ಟಾ ತಳಿಯದ್ದು – ಐಸಿಎಂಆರ್

ಕೊರೊನಾ ಆತಂಕದ ಮಧ್ಯೆ ಕಾಣಿಸಿಕೊಂಡ ಮಂಕಿಪಾಕ್ಸ್​​; ಕಳೆದ 20 ದಶಕಗಳಲ್ಲಿ ಪತ್ತೆಯಾದ ಮೊದಲ ಪ್ರಕರಣ

Follow Us
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ