AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ಘೋಷಣೆ ಹಿನ್ನೆಲೆ; 2 ತಿಂಗಳ ಹಿಂದೆ ತೀರಿಕೊಂಡ ಮಹಿಳೆಗೆ ಈಗ ಕೊವಿಡ್ ಪಾಸಿಟಿವ್ ವರದಿ ತಯಾರಿ

ಡಾಟಾ ಎಂಟ್ರಿ ಆಪರೇಟರ್​ ಯೂಸರ್ ಐಡಿ ದುರುಪಯೋಗ ಮಾಡಿರುವುದು, ಪಾಸ್​ ವರ್ಡ್​ ದುರ್ಬಳಕೆ ಮಾಡಿಕೊಂಡು ಕೊವಿಡ್​ ವರದಿ ನೀಡಿ, ಸರ್ಕಾರಕ್ಕೆ ವಂಚಿಸಿದ ಆರೋಪದಡಿ ಆರೋಪಿಗಳಿಬ್ಬರ ಸೆರೆಯಾಗಿದೆ. ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಪ್ರಕಾಶ್ ಬಿರಾದರ್​ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಕೊರೊನಾದಿಂದ ಮೃತಪಟ್ಟವರಿಗೆ ಪರಿಹಾರ ಘೋಷಣೆ ಹಿನ್ನೆಲೆ; 2 ತಿಂಗಳ ಹಿಂದೆ ತೀರಿಕೊಂಡ ಮಹಿಳೆಗೆ ಈಗ ಕೊವಿಡ್ ಪಾಸಿಟಿವ್ ವರದಿ ತಯಾರಿ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 17, 2021 | 2:59 PM

Share

ಬಾಗಲಕೋಟೆ: ಕೊವಿಡ್​ನಿಂದ ಮೃತರಿಗೆ ಸರ್ಕಾರ ಒಂದು ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಕೆಲವು ಅವ್ಯವಹಾರ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ನಕಲಿ ಆರ್​ಟಿಪಿಸಿಆರ್ ವರದಿ ಪ್ರಕರಣ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಎರಡು ತಿಂಗಳು ಹಿಂದೆ ತೀರಿಕೊಂಡಿದ್ದ ಮಹಿಳೆಗೆ ಇದೀಗ ಆರ್​ಟಿಪಿಸಿಆರ್ ಪಾಸಿಟಿವ್ ರಿಪೋರ್ಟ್ ತಯಾರಿ ಮಾಡಿರುವುದು ಕಂಡುಬಂದಿದೆ.

ಕೊವಿಡ್​ನಿಂದ ಮೃತಪಟ್ಟವರಿಗೆ ಕರ್ನಾಟಕ ಸರ್ಕಾರ ಪರಿಹಾರ ಘೋಷಣೆ ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಾಗಲಕೋಟೆಯಲ್ಲಿ ನಕಲಿ RTPCR ವರದಿ ಮಾಡಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. 2 ತಿಂಗಳ ಹಿಂದೆ ಮೃತಪಟ್ಟ ಮಹಿಳೆಗೆ ಇದೀಗ ಪಾಟಿಟಿವ್ ರಿಪೋರ್ಟ್​ ನೀಡಲಾಗಿದೆ. ಬಾಗಲಕೋಟೆ ಜಿಲ್ಲಾಸ್ಪತ್ರೆ ಸಿಬ್ಬಂದಿಯಿಂದ ಗೋಲ್​ಮಾಲ್ ನಡೆದಿರುವ ಬಗ್ಗೆ ಮಾಹಿತಿ ದೊರಕಿದೆ.

ಪ್ರಕರಣಕ್ಕೆ ಸಂಬಂಧಿಸಿ ಸ್ಕ್ಯಾನಿಂಗ್ ವಿಭಾಗದ ಸ್ಟಾಫ್​ನರ್ಸ್​ ಬಸವರಾಜ್​ ಬಿಲಕೇರಿ, ಡಾಟಾ ಎಂಟ್ರಿ ಆಪರೇಟರ್​ ಬಸನಗೌಡ ಗಿರಿಯಪ್ಪಗೌಡ ಸೆರೆಯಾಗಿದ್ದಾರೆ. ಬಾಗಲಕೋಟೆಯ ನವನಗರ ಠಾಣೆ ಪೊಲೀಸರಿಂದ ಆರೋಪಿಗಳ ಬಂಧನವಾಗಿದೆ.

ಮೇ 2ರಂದು ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಬಿದರಿ ಗ್ರಾಮದ ಶೇಖವ್ವ ರೂಗಿ (53) ಎಂಬವರು ಮೃತಪಟ್ಟಿದ್ದರು. ಜಿಲ್ಲಾಸ್ಪತ್ರೆಯಲ್ಲಿ ಉಸಿರಾಟದ ಸಮಸ್ಯೆಯಿಂದ ಅವರು ಮೃತಪಟ್ಟಿದ್ದರು. ಸಿಟಿ ಸ್ಕ್ಯಾನ್​ನಲ್ಲಿ ಕೊವಿಡ್​ ಇದ್ದರೂ ಟೆಸ್ಟ್​ ಮಾಡಿಸಿರಲಿಲ್ಲ. ಶೇಖವ್ವ ರೂಗಿಗೆ ಆರ್​ಟಿಪಿಸಿಆರ್​ ಟೆಸ್ಟ್​ ಮಾಡಿಸಿರಲಿಲ್ಲ. ಆದರೆ, ಈಗ ಸರ್ಕಾರ ಪರಿಹಾರ ಘೋಷಣೆ ಮಾಡಿದ ನಂತರ ನಕಲಿ ದಾಖಲೆ ಸೃಷ್ಟಿ ಮಾಡಲಾಗಿದೆ.

ಮೇ 1ರಂದು ಗಂಟಲು ದ್ರವ ಸಂಗ್ರಹಿಸಲಾಗಿತ್ತೆಂದು ದಾಖಲು ಮಾಡಿ, ಬಾಗಲಕೋಟೆ ಜಿಲ್ಲಾಸ್ಪತ್ರೆ ಸಿಬ್ಬಂದಿ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಆದರೆ ಜುಲೈ 15ರಂದು ಪಾಸಿಟಿವ್ ಬಂದಿದೆ ಎಂದು ನಮೂದು ಮಾಡಲಾಗಿದೆ. 2 ತಿಂಗಳು ತಡವಾಗಿದ್ದರಿಂದ ಈ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಬಳಿಕ, ಅಧಿಕಾರಿಗಳು ತಪಾಸಣೆ ನಡೆಸಿದಾಗ ಗೋಲ್​ಮಾಲ್​ ಬೆಳಕಿಗೆ ಬಂದಿದೆ.

ಡಾಟಾ ಎಂಟ್ರಿ ಆಪರೇಟರ್​ ಯೂಸರ್ ಐಡಿ ದುರುಪಯೋಗ ಮಾಡಿರುವುದು, ಪಾಸ್​ ವರ್ಡ್​ ದುರ್ಬಳಕೆ ಮಾಡಿಕೊಂಡು ಕೊವಿಡ್​ ವರದಿ ನೀಡಿ, ಸರ್ಕಾರಕ್ಕೆ ವಂಚಿಸಿದ ಆರೋಪದಡಿ ಆರೋಪಿಗಳಿಬ್ಬರ ಸೆರೆಯಾಗಿದೆ. ಜಿಲ್ಲಾಸ್ಪತ್ರೆಯ ಸರ್ಜನ್ ಡಾ.ಪ್ರಕಾಶ್ ಬಿರಾದರ್​ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Delta Variant: ಕೊರೊನಾ ಲಸಿಕೆ ಪಡೆದ ನಂತರವೂ ಹಬ್ಬಿದ ಸೋಂಕಿನಲ್ಲಿ ಶೇ.86.09 ಪಾಲು ಡೆಲ್ಟಾ ತಳಿಯದ್ದು – ಐಸಿಎಂಆರ್

ಕೊರೊನಾ ಆತಂಕದ ಮಧ್ಯೆ ಕಾಣಿಸಿಕೊಂಡ ಮಂಕಿಪಾಕ್ಸ್​​; ಕಳೆದ 20 ದಶಕಗಳಲ್ಲಿ ಪತ್ತೆಯಾದ ಮೊದಲ ಪ್ರಕರಣ

ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಕೊಪ್ಪಳ ಅಜ್ಜನ ಜಾತ್ರೆ ದ್ರೋಣ್ ಕ್ಯಾಮೆರಾದಲ್ಲಿ ಕಂಡಿದ್ದು ಹೀಗೆ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಬಿಗ್ ಬಾಸ್ ಫಿನಾಲೆಗೆ ಗಿಲ್ಲಿ, ಧನುಷ್: ಭವಿಷ್ಯ ನುಡಿದ ಸ್ಪಂದನಾ ಸೋಮಣ್ಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಸಿದ್ದರಾಮಯ್ಯ ಹೊಸ ದಾಖಲೆ: ಬೆಂಬಲಿಗರಿಂದ ನಾಟಿ ಕೋಳಿ ಔತಣ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಆಂಧ್ರದಲ್ಲಿ ಭಾರಿ ಅನಿಲ ಸೋರಿಕೆಯಾಗಿ ಬೆಂಕಿ ದುರಂತ; ಸ್ಥಳೀಯರ ಸ್ಥಳಾಂತರ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್