AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ತಲುಪಿದ ಕೊವಿಶೀಲ್ಡ್ ಲಸಿಕೆ..

ಪುಣೆಯ ಸೆರಮ್ ಇನ್ಸ್‌ಟಿಟ್ಯೂಟ್‌ನಿಂದ ಕೊವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ವಿಮಾನ ಸ್ಪೈಸ್ ಜೆಟ್ ದೇವನಹಳ್ಳಿ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಿದೆ.

ಬೆಂಗಳೂರು ತಲುಪಿದ ಕೊವಿಶೀಲ್ಡ್ ಲಸಿಕೆ..
ಬೆಂಗಳೂರು ತಲುಪಿದ ಕೊವಿಶೀಲ್ಡ್ ಲಸಿಕೆ.
ಆಯೇಷಾ ಬಾನು
ಆಯೇಷಾ ಬಾನು|

Updated on:Jan 12, 2021 | 3:48 PM

Share

ಬೆಂಗಳೂರು: ಪುಣೆಯ ಸೆರಮ್ ಇನ್ಸ್‌ಟಿಟ್ಯೂಟ್‌ನಿಂದ ಕೊವಿಶೀಲ್ಡ್ ಲಸಿಕೆ ಹೊತ್ತ ವಿಶೇಷ ವಿಮಾನ ಸ್ಪೈಸ್ ಜೆಟ್ ದೇವನಹಳ್ಳಿ ಕೆಂಪೇಗೌಡ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಿದೆ. ಕೆಲ ಹೊತ್ತಿನಲ್ಲೇ ಏರ್​ಪೋರ್ಟ್​ನಿಂದ ವ್ಯಾಕ್ಸಿನ್ ಸೆಂಟರ್​ಗಳಿಗೆ ಲಸಿಕೆಯನ್ನು ರವಾನೆ ಮಾಡಲಾಗುತ್ತೆ.

6 ಲಕ್ಷ 48 ಸಾವಿರದ 500 ಡೋಸ್ ವ್ಯಾಕ್ಸಿನ್​ನನ್ನು 54 ಬಾಕ್ಸ್​ಗಳಲ್ಲಿ ತರಲಾಗಿದೆ. ಇದು 1,728 ಕೆಜಿ ತೂಕವಿದ್ದು ಆರೋಗ್ಯ ಇಲಾಖೆಯ ಉಪ ನಿರ್ದೇಶಕಿ ನೇತೃತ್ವದಲ್ಲಿ ಬೆಂಗಳೂರಿನ ಆನಂದ್ ರಾವ್ ಸರ್ಕಲ್ ಬಳಿಯ ಆರೋಗ್ಯ ಇಲಾಖೆಯಲ್ಲಿ ಲಸಿಕೆ ಸ್ಟೋರ್ ಮಾಡಲಾಗುತ್ತೆ. ಬಳಿಕ ಇಂದು ಅಥವಾ ನಾಳೆ ಬೆಂಗಳೂರಿನಿಂದ ರಾಜ್ಯದ ವಿವಿಧ ಭಾಗಗಳಿಗೆ ವ್ಯಾಕ್ಸಿನ್ ರವಾನಿಸಲಾಗುತ್ತೆ.

ರಾಜ್ಯಕ್ಕೆ ಮೊದಲ ಹಂತದಲ್ಲಿ 6 ಲಕ್ಷ 48 ಸಾವಿರ ಲಸಿಕೆ ನೀಡಲಾಗುತ್ತಿದ್ದು ಬಿಬಿಎಂಪಿಗೆ 1.90 ಲಕ್ಷ ಕೊವಿಶೀಲ್ಡ್ ಲಸಿಕೆ ಹಸ್ತಾಂತರ ಮಾಡಲಾಗಿದೆ. ಹಾಗೂ ದಾಸಪ್ಪ ಆಸ್ಪತ್ರೆಯಲ್ಲಿ 1.90 ಲಕ್ಷ ಲಸಿಕೆ ಸಂಗ್ರಹಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಕೋಲ್ಡ್ ಸ್ಟೋರ್ ಇರುವ ಬೆಂಗಳೂರಿನ 144 ಬಿಬಿಎಂಪಿ ಆಸ್ಪತ್ರೆಗಳಿಗೆ ಲಸಿಕೆ ರವಾನೆ ಮಾಡಲಾಗುತ್ತೆ. ಜನವರಿ 16ರಂದು ಕೊರೊನಾ ವ್ಯಾಕ್ಸಿನೇಷನ್ ಹಮ್ಮಿಕೊಂಡಿದ್ದು ಅಂದು 144 ಆಸ್ಪತ್ರೆಗಳಿಂದ 1,500 ಲಸಿಕಾ ಕೇಂದ್ರಗಳಿಗೆ ಲಸಿಕೆ ಸರಬರಾಜಾಗುತ್ತೆ.

ಕೊರೊನಾ ಲಸಿಕೆ ಬರ ಮಾಡಿಕೊಳ್ಳಲು ರಾಜ್ಯದಲ್ಲಿ ಸಕಲ ಸಿದ್ಧತೆ: ಯಾವ ಜಿಲ್ಲೆಗೆ, ಎಷ್ಟು ಲಸಿಕೆ?

Published On - 12:59 pm, Tue, 12 January 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು