AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ

ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್ ​ಲಸಿಕೆ ಪಡೆದವರು ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂದು ಶುಕ್ರವಾರ ಸಾಮಾಜಿಕ ಜಾಲತಾಣಗಳಲ್ಲಿ ಖಾಸಗಿ ಕಾಲೇಜಿನ ನೋಟಿಸ್​ ವೈರಲ್​ ಆಗಿತ್ತು. ಇದಕ್ಕೆ ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

ಕೋವಿಶೀಲ್ಡ್​ ಪಡೆದವರು ತಂಪುಪಾನಿಯ, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ
ಸಾಂದರ್ಭಿಕ ಚಿತ್ರ
TV9 Web
| Edited By: ವಿವೇಕ ಬಿರಾದಾರ|

Updated on: May 04, 2024 | 11:49 AM

Share

ಬೆಂಗಳೂರು, ಮೇ 04: ಕೊರೊನಾ (Covid) ಸಂದರ್ಭದಲ್ಲಿ ಕೋವಿಶೀಲ್ಡ್ (Covishield)​ ಲಸಿಕೆ ಪಡೆದವರು ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತು ತಂಪು ಪಾನೀಯಗಳನ್ನು ಕುಡಿಯಬಾರದು ಎಂಬುವುದು ಸುಳ್ಳು ಸುದ್ದಿಯಾಗಿದೆ ಎಂದು ಆರೋಗ್ಯ ಇಲಾಖೆ (Health Department) ತಿಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಈ ರೀತಿಯ ಸುದ್ದಿ ಸುಳ್ಳಾಗಿದ್ದು, ಇಂತಹ ಯಾವುದೇ ಸುತ್ತೋಲೆ ಇಲಾಖೆ ಹೊರಡಿಸಿಲ್ಲ. ಗಾಬರಿ ಗೊಳ್ಳದಿರಿ, ತಪ್ಪು ಮಾಹಿತಿ ಬಗ್ಗೆ ಜಾಗೃತಿ ವಹಿಸುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಈ ರೀತಿ ಸೂಚನೆ ನೀಡಿರುವ ಕಾಲೇಜುಗಳಿಗೆ ಕಾರಣ ಕೇಳಿ ಆರೋಗ್ಯ ಇಲಾಖೆ ನೋಟಿಸ್ ನೀಡಿದೆ.

ಸುಳ್ಳು ಸುದ್ದಿ

ಆರೋಗ್ಯ ಇಲಾಖೆಯು ತಿಳಿಸಿರುವ ಮಾಹಿತಿಯ ಪ್ರಕಾರ, ಎಲ್ಲ ವಿದ್ಯಾರ್ಥಿಗಳು ಹಾಗೂ ಪೋಷಕರು ಯಾವುದೇ ರೀತಿಯ ಫ್ರಿಜ್​ ನೀರು, ಐಸ್​ ಕ್ರೀಮ್​ ಮತ್ತಯ ತಂಪು ಪಾನೀಯಗಳನ್ನು ಕುಡಿಯಬಾರದು. ಏಕೆಂದರೆ ಕೊರೊನಾ ಸಂದರ್ಭದಲ್ಲಿ ಕೋವಿಶೀಲ್ಡ್​​ ಲಸಿಕೆ ಹಾಕಿಸಿಕೊಂಡಿರುವ ಪರಿಣಾಮ ರಕ್ತ ಹೆಪ್ಪುಗಟ್ಟುವುದು ದಿಢೀರ್​ ಹೃದಯಾಘಾತ ಸಂಭವಿಸಿ ಪ್ರಾಣ ಹಾನಿಯಾಗುತ್ತಿದೆ. ಹೀಗಾಗಿ ಮೇಲೆ ತಿಳಿಸಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವುದು ಎಂದು ಖಾಸಗಿ ಕಾಲೇಜು ಸುತ್ತೋಲೆ ಹೊರಡಿಸಿತ್ತು.

ಇದನ್ನೂ ಓದಿ: ಈ ಸೆಲೆಬ್ರಿಟಿಗಳ ಸಾವಿಗೆ ಕೋವಿಶೀಲ್ಡ್​ ಅಡ್ಡಪರಿಣಾಮ ಕಾರಣ? ಸೋಶಿಯಲ್ ಮೀಡಿಯಾದಲ್ಲಿ ಶುರುವಾಗಿದೆ ಚರ್ಚೆ

ಖಾಸಗಿ ಕಾಲೇಜೊಂದು ಈ ರೀತಿಯಾಗಿ ನೋಟಿಸ್​ ಹೊರಡಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರದಾಡಲು ಆರಂಭಿಸಿತು. ಇದರಿಂದ ಎಚ್ಚತ್ತ ಆರೋಗ್ಯ ಇಲಾಖೆ ಇದು ಸುಳ್ಳು ಸುದ್ದಿ ಎಂದು ಸ್ಪಷ್ಟನೆ ನೀಡಿದೆ.

ಕೋವಿಶೀಲ್ಡ್​ನಿಂದ ಅಡ್ಡ ಪರಿಣಾಮ

ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ಪಡೆದ ಬಳಿಕ ಮೆದುಳು ಅಥವಾ ದೇಹದ ಇತರೆ ರಕ್ತನಾಳಗಳಲ್ಲಿ ರಕ್ತಹೆಪ್ಪುಗಟ್ಟುವುದು, ಪ್ಲೇಟ್ ಲೆಟ್​ಗಳ ಸಂಖ್ಯೆ ಕಡಿಮೆಯಾಗುವುದ ಬಗ್ಗೆ ಬ್ರಿಟನ್ ನಿವಾಸಿ ಜೆಮಿ ಸ್ಕಾಟ್​ ದೂರು ನೀಡಿದ್ದರು.

ಈ ಪ್ರಕರಣದ ವಿಚಾರಣೆ ವೇಳೆ ಆಸ್ಟ್ರಾಜೆನೆಕಾದ ವಕೀಲರು ಲಿಖಿತ ಹೇಳಿಕೆ ಸಲ್ಲಿಸಿದ್ದು ಅದರಲ್ಲಿ ಕಂಪನಿ ಅಭಿವೃದ್ಧಿಪಡಿಸಿರುವ ಲಸಿಕೆಯು ಅಪರೂಪದ ಪ್ರಕರಣಗಳಲ್ಲಿ ಅಡ್ಡಪರಿಣಾಮಗಳಿಗೆ ಕಾರಣವಾಗುವುದು ನಿಜ. ಲಸಿಕೆ ಪಡೆದವರು ಥ್ರೊಂಬೋಸಿಸ್‌ ಎಂಬ ಆರೋಗ್ಯ ಸಮಸ್ಯೆಗೆ ತುತ್ತಾಗುವ ಸಾಧ್ಯತೆ ಇದೆ ಎಂದು ಹೇಳಿದೆ. ಈ ಸಮಸ್ಯೆಗೆ ತುತ್ತಾದವರು ರಕ್ತ ಹೆಪ್ಪುಗಟ್ಟುವಿಕೆ ಮತ್ತು ಪ್ಲೇಟ್‌ಲೆಟ್‌ಗಳ ಸಂಖ್ಯೆಯಲ್ಲಿ ಕಡಿಮೆಯ ತೊಂದರೆಗೆ ಒಳಗಾಗುತ್ತಾರೆ. ಅತ್ಯಂತ ಸೂಕ್ಷ್ಮ ಪ್ರಕರಣಗಳಲ್ಲಿ ವ್ಯಕ್ತಿಯು ಸಾವನ್ನಪ್ಪುವ ಸಾಧ್ಯತೆಯೂ ಇರುತ್ತದೆ’ ಎಂಬುದಾಗಿ ಸಂಸ್ಥೆ ತಪ್ಪೊಪ್ಪಿಕೊಂಡಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್